4:54 PM Tuesday3 - March 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು ಬ್ಯಾಚುಲರ್ ಲೈಫ್‌ಗೆ ಕೊಡಗಿನ ಬೆಡಗಿ ಗುಡ್‌ಬೈ: ರಶ್ಮಿಕಾ – ದೇವರಕೊಂಡ ದಂಪತಿಗೆ ಅಂಬಾನಿ,… ಮಸ್ಕಿ ಇರಕಲ್ ಶ್ರೀ ಮಠದ ಜಾತ್ರಾ ಮಹೋತ್ಸವ: ಹಸೆಮಣೆ ಏರಿದ 12 ಜೋಡಿಗಳು ಜವಾಹರಲಾಲ್ ನೆಹರು ತಾರಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂಭ್ರಮ; ವೈಜ್ಞಾನಿಕ ಮನೋಭಾವಕ್ಕೆ ಸಚಿವ…

ಇತ್ತೀಚಿನ ಸುದ್ದಿ

ವಿಜಯಪುರ ಜಿಲ್ಲೆಯಲ್ಲಿ ಭೂಮಿ ಕಂಪಿಸಿದ ಅನುಭವ : ಆತಂಕಕ್ಕೊಳಗಾದ ಜನ ; ಭಯ ಬೇಡ ಎಂದ ಅಧಿಕಾರಿಗಳು

05/09/2021, 00:41

ವಿಜಯಪುರ (Reporterkarnataka.com)

ವಿಜಯಪುರ ಜಿಲ್ಲೆಯ ಕೆಲ ಭಾಗಗಳಲ್ಲಿ ಭೂಮಿ ಕಂಪಿಸಿದ ಅನುಭವವಾಗಿದ್ದು, ಜನರು ಮನೆಯಿಂದ ಹೊರಬಂದು ರಸ್ತೆಯಲ್ಲಿ ಸುರಕ್ಷಿತರಾಗಿರಲು ರಸ್ತೆಯಲ್ಲಿ ನಿಂತುಕೊಂಡಿದ್ದಾರೆ.

ಭೂಮಿಯಿಂದ ಭಯಂಕರ ಶಬ್ದ ಕೇಳಿ ಬಂದಿದ್ದು, ಗ್ರಾಮಸ್ಥರು ಭೂಕಂಪನವೆನ್ನುವ ಭೀತಿಯಿಂದ ನಡುಗುತ್ತಿದ್ದಾರೆ. ಆದರೆ ಅಧಿಕಾರಿಗಳು ಇದು ಕೇವಲ ಶಬ್ದ ಕಂಪನವಾಗಿದ್ದು, ಆತಂಕ ಪಡುವ ಅಗತ್ಯವಿಲ್ಲ ಎಂದು ಪತ್ರಿಕೆಯೊಂದಕ್ಕೆ ಹೇಳಿಕೆ ನೀಡಿದ್ದಾರೆ.

ಭಯ ಬೇಡ ಭೂಕಂಪನ ಅಲ್ಲ :
ಜಿಲ್ಲೆಯ ಕೆಲ ಭಾಗಗಳಲ್ಲಿ ಹಲವು ವರ್ಷಗಳಿಂದ ಭೂಕಂಪನದ ಸದ್ದು ಕೇಳಿ ಬರುತ್ತಿದೆ. ಈ ಮೊದಲು ತಿಕೋಟಾ, ಸೋಮದೇವರ ಹಟ್ಟಿ, ಕನಮಡಿ, ಬಾಬಾನಗರ ಭಾಗದಲ್ಲಿ ಭೂಕಂಪನದ ಅನುಭವವಾಗುತ್ತಿದೆ ಎಂದು ಇಲ್ಲಿನ ಗ್ರಾಮಸ್ಥರು ತೀವ್ರ ಭೀತಿಗೊಳ್ಳುತ್ತಿದ್ದರು. ಹೀಗೆ ಈ ಸಮಸ್ಯೆ ಪದೇ ಪದ ಕೇಳಿ ಬರುತ್ತಿದ್ದರಿಂದ ಕಳೆದ ವರ್ಷ ಜಿಲ್ಲಾಧಿಕಾರಿ ಪಿ.ಸುನೀಲಕುಮಾರ ಅವರು ಭೂಕಂಪನದ ಪರಿಶೀಲನೆಗಾಗಿ ಬೆಂಗಳೂರಿನ ಗಣಿ ಮತ್ತು ಭೂ ವಿಜ್ಞಾನಿಗಳ ತಜ್ಞರಿಗೆ ಪತ್ರ ಬರೆದು ತೋರಿದ್ದರು. ಇದಾದ ಬಳಿಕ ಬೆಂಗಳೂರಿನ ಭೂ ವಿಜ್ಞಾನ ಅ ಕಾರಿಗಳು ತಿಕೋಟಾ ಭಾಗದ ಪ್ರದೇಶಗಳಿಗೆ ತೆರಳಿ ಪರಿಶೀಲಿಸಿ ವಿಜಯಪುರ ಜಿಲ್ಲೆಯಲ್ಲಿ ಭೂಕಂಪನ ಸಂಭವಿಸುವ ಸಾಧ್ಯತೆ ತೀರ ಕಡಿಮೆಯಿದೆ. ಜನರು ಆತಂಕ ಐಡುವ ಅಗತ್ಯವಿಲ್ಲ ಎಂದು ಹೇಳಿದ್ದರು. ಭೂಮಿಯಡಿಯಿಂದ ಕಳಿ ಬರುತ್ತಿರುವ ಭಯಂಕರ ಶಬ್ದ ಭೂಮಿಯೊಳಗಿನ ನೀರಿನ ಚಲನೆಯಿಂದ ಉಂಟಾಗುತ್ತಿದೆ. ಮಳೆಯಾದರೆ ಹೆಚ್ಚು ಭೂಮಿಯೊಳಗೆ ನೀರು ಇಂಗುವ ವೇಳೆ ಭೂ ಗರ್ಭದಲ್ಲಿ ನೈಸರ್ಗಿಕ ಕ್ರಿಯೆಯಿಂದ ಹೀಗೆ ಆಗುತ್ತಿದೆ ಎಂದು ತಜ್ಞರು ಹೇಳಿದ್ದಾರೆ ಎನ್ನಲಾಗಿದೆ
.

ಇತ್ತೀಚಿನ ಸುದ್ದಿ

ಜಾಹೀರಾತು