11:05 PM Friday18 - April 2025
ಬ್ರೇಕಿಂಗ್ ನ್ಯೂಸ್
Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ… ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಸಾಧನೆ: ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್… Police Encounter | ಹುಬ್ಬಳ್ಳಿ: 5 ವರ್ಷದ ಬಾಲಕಿಯ ಅಪಹರಿಸಿ ಕೊಲೆ: ಆರೋಪಿ… DCM | ಬಿಜೆಪಿಗರು ತಮ್ಮ ಹೋರಾಟ ಕೇಂದ್ರ ಸರಕಾರದ ವಿರುದ್ಧ ಎಂದು ಬೋರ್ಡ್… CET | ಪಿಯುಸಿ ಅಂಕ ಕಡಿಮೆ ಬಂತೆಂದು ಸಿಇಟಿ ಮಿಸ್ ಮಾಡ್ಕೊಬೇಡಿ: ಕರ್ನಾಟಕ…

ಇತ್ತೀಚಿನ ಸುದ್ದಿ

ವಿಜಯಪುರ ಜಿಲ್ಲೆಯಲ್ಲಿ ಭೂಮಿ ಕಂಪಿಸಿದ ಅನುಭವ : ಆತಂಕಕ್ಕೊಳಗಾದ ಜನ ; ಭಯ ಬೇಡ ಎಂದ ಅಧಿಕಾರಿಗಳು

05/09/2021, 00:41

ವಿಜಯಪುರ (Reporterkarnataka.com)

ವಿಜಯಪುರ ಜಿಲ್ಲೆಯ ಕೆಲ ಭಾಗಗಳಲ್ಲಿ ಭೂಮಿ ಕಂಪಿಸಿದ ಅನುಭವವಾಗಿದ್ದು, ಜನರು ಮನೆಯಿಂದ ಹೊರಬಂದು ರಸ್ತೆಯಲ್ಲಿ ಸುರಕ್ಷಿತರಾಗಿರಲು ರಸ್ತೆಯಲ್ಲಿ ನಿಂತುಕೊಂಡಿದ್ದಾರೆ.

ಭೂಮಿಯಿಂದ ಭಯಂಕರ ಶಬ್ದ ಕೇಳಿ ಬಂದಿದ್ದು, ಗ್ರಾಮಸ್ಥರು ಭೂಕಂಪನವೆನ್ನುವ ಭೀತಿಯಿಂದ ನಡುಗುತ್ತಿದ್ದಾರೆ. ಆದರೆ ಅಧಿಕಾರಿಗಳು ಇದು ಕೇವಲ ಶಬ್ದ ಕಂಪನವಾಗಿದ್ದು, ಆತಂಕ ಪಡುವ ಅಗತ್ಯವಿಲ್ಲ ಎಂದು ಪತ್ರಿಕೆಯೊಂದಕ್ಕೆ ಹೇಳಿಕೆ ನೀಡಿದ್ದಾರೆ.

ಭಯ ಬೇಡ ಭೂಕಂಪನ ಅಲ್ಲ :
ಜಿಲ್ಲೆಯ ಕೆಲ ಭಾಗಗಳಲ್ಲಿ ಹಲವು ವರ್ಷಗಳಿಂದ ಭೂಕಂಪನದ ಸದ್ದು ಕೇಳಿ ಬರುತ್ತಿದೆ. ಈ ಮೊದಲು ತಿಕೋಟಾ, ಸೋಮದೇವರ ಹಟ್ಟಿ, ಕನಮಡಿ, ಬಾಬಾನಗರ ಭಾಗದಲ್ಲಿ ಭೂಕಂಪನದ ಅನುಭವವಾಗುತ್ತಿದೆ ಎಂದು ಇಲ್ಲಿನ ಗ್ರಾಮಸ್ಥರು ತೀವ್ರ ಭೀತಿಗೊಳ್ಳುತ್ತಿದ್ದರು. ಹೀಗೆ ಈ ಸಮಸ್ಯೆ ಪದೇ ಪದ ಕೇಳಿ ಬರುತ್ತಿದ್ದರಿಂದ ಕಳೆದ ವರ್ಷ ಜಿಲ್ಲಾಧಿಕಾರಿ ಪಿ.ಸುನೀಲಕುಮಾರ ಅವರು ಭೂಕಂಪನದ ಪರಿಶೀಲನೆಗಾಗಿ ಬೆಂಗಳೂರಿನ ಗಣಿ ಮತ್ತು ಭೂ ವಿಜ್ಞಾನಿಗಳ ತಜ್ಞರಿಗೆ ಪತ್ರ ಬರೆದು ತೋರಿದ್ದರು. ಇದಾದ ಬಳಿಕ ಬೆಂಗಳೂರಿನ ಭೂ ವಿಜ್ಞಾನ ಅ ಕಾರಿಗಳು ತಿಕೋಟಾ ಭಾಗದ ಪ್ರದೇಶಗಳಿಗೆ ತೆರಳಿ ಪರಿಶೀಲಿಸಿ ವಿಜಯಪುರ ಜಿಲ್ಲೆಯಲ್ಲಿ ಭೂಕಂಪನ ಸಂಭವಿಸುವ ಸಾಧ್ಯತೆ ತೀರ ಕಡಿಮೆಯಿದೆ. ಜನರು ಆತಂಕ ಐಡುವ ಅಗತ್ಯವಿಲ್ಲ ಎಂದು ಹೇಳಿದ್ದರು. ಭೂಮಿಯಡಿಯಿಂದ ಕಳಿ ಬರುತ್ತಿರುವ ಭಯಂಕರ ಶಬ್ದ ಭೂಮಿಯೊಳಗಿನ ನೀರಿನ ಚಲನೆಯಿಂದ ಉಂಟಾಗುತ್ತಿದೆ. ಮಳೆಯಾದರೆ ಹೆಚ್ಚು ಭೂಮಿಯೊಳಗೆ ನೀರು ಇಂಗುವ ವೇಳೆ ಭೂ ಗರ್ಭದಲ್ಲಿ ನೈಸರ್ಗಿಕ ಕ್ರಿಯೆಯಿಂದ ಹೀಗೆ ಆಗುತ್ತಿದೆ ಎಂದು ತಜ್ಞರು ಹೇಳಿದ್ದಾರೆ ಎನ್ನಲಾಗಿದೆ
.

ಇತ್ತೀಚಿನ ಸುದ್ದಿ

ಜಾಹೀರಾತು