1:31 PM Tuesday4 - August 2026
ಬ್ರೇಕಿಂಗ್ ನ್ಯೂಸ್
ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ ಕಾವೇರಿ ನೀರು ಹಂಚಿಕೆ ವಿವಾದ | ಕಾನೂನು ತಜ್ಞರು, ಪ್ರತಿಪಕ್ಷಗಳ ಸಲಹೆ ಬಳಿಕ… ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು…

ಇತ್ತೀಚಿನ ಸುದ್ದಿ

ವಿಜಯಪುರ ಜಿಲ್ಲೆಯಲ್ಲಿ ಭೂಮಿ ಕಂಪಿಸಿದ ಅನುಭವ : ಆತಂಕಕ್ಕೊಳಗಾದ ಜನ ; ಭಯ ಬೇಡ ಎಂದ ಅಧಿಕಾರಿಗಳು

05/09/2021, 00:41

ವಿಜಯಪುರ (Reporterkarnataka.com)

ವಿಜಯಪುರ ಜಿಲ್ಲೆಯ ಕೆಲ ಭಾಗಗಳಲ್ಲಿ ಭೂಮಿ ಕಂಪಿಸಿದ ಅನುಭವವಾಗಿದ್ದು, ಜನರು ಮನೆಯಿಂದ ಹೊರಬಂದು ರಸ್ತೆಯಲ್ಲಿ ಸುರಕ್ಷಿತರಾಗಿರಲು ರಸ್ತೆಯಲ್ಲಿ ನಿಂತುಕೊಂಡಿದ್ದಾರೆ.

ಭೂಮಿಯಿಂದ ಭಯಂಕರ ಶಬ್ದ ಕೇಳಿ ಬಂದಿದ್ದು, ಗ್ರಾಮಸ್ಥರು ಭೂಕಂಪನವೆನ್ನುವ ಭೀತಿಯಿಂದ ನಡುಗುತ್ತಿದ್ದಾರೆ. ಆದರೆ ಅಧಿಕಾರಿಗಳು ಇದು ಕೇವಲ ಶಬ್ದ ಕಂಪನವಾಗಿದ್ದು, ಆತಂಕ ಪಡುವ ಅಗತ್ಯವಿಲ್ಲ ಎಂದು ಪತ್ರಿಕೆಯೊಂದಕ್ಕೆ ಹೇಳಿಕೆ ನೀಡಿದ್ದಾರೆ.

ಭಯ ಬೇಡ ಭೂಕಂಪನ ಅಲ್ಲ :
ಜಿಲ್ಲೆಯ ಕೆಲ ಭಾಗಗಳಲ್ಲಿ ಹಲವು ವರ್ಷಗಳಿಂದ ಭೂಕಂಪನದ ಸದ್ದು ಕೇಳಿ ಬರುತ್ತಿದೆ. ಈ ಮೊದಲು ತಿಕೋಟಾ, ಸೋಮದೇವರ ಹಟ್ಟಿ, ಕನಮಡಿ, ಬಾಬಾನಗರ ಭಾಗದಲ್ಲಿ ಭೂಕಂಪನದ ಅನುಭವವಾಗುತ್ತಿದೆ ಎಂದು ಇಲ್ಲಿನ ಗ್ರಾಮಸ್ಥರು ತೀವ್ರ ಭೀತಿಗೊಳ್ಳುತ್ತಿದ್ದರು. ಹೀಗೆ ಈ ಸಮಸ್ಯೆ ಪದೇ ಪದ ಕೇಳಿ ಬರುತ್ತಿದ್ದರಿಂದ ಕಳೆದ ವರ್ಷ ಜಿಲ್ಲಾಧಿಕಾರಿ ಪಿ.ಸುನೀಲಕುಮಾರ ಅವರು ಭೂಕಂಪನದ ಪರಿಶೀಲನೆಗಾಗಿ ಬೆಂಗಳೂರಿನ ಗಣಿ ಮತ್ತು ಭೂ ವಿಜ್ಞಾನಿಗಳ ತಜ್ಞರಿಗೆ ಪತ್ರ ಬರೆದು ತೋರಿದ್ದರು. ಇದಾದ ಬಳಿಕ ಬೆಂಗಳೂರಿನ ಭೂ ವಿಜ್ಞಾನ ಅ ಕಾರಿಗಳು ತಿಕೋಟಾ ಭಾಗದ ಪ್ರದೇಶಗಳಿಗೆ ತೆರಳಿ ಪರಿಶೀಲಿಸಿ ವಿಜಯಪುರ ಜಿಲ್ಲೆಯಲ್ಲಿ ಭೂಕಂಪನ ಸಂಭವಿಸುವ ಸಾಧ್ಯತೆ ತೀರ ಕಡಿಮೆಯಿದೆ. ಜನರು ಆತಂಕ ಐಡುವ ಅಗತ್ಯವಿಲ್ಲ ಎಂದು ಹೇಳಿದ್ದರು. ಭೂಮಿಯಡಿಯಿಂದ ಕಳಿ ಬರುತ್ತಿರುವ ಭಯಂಕರ ಶಬ್ದ ಭೂಮಿಯೊಳಗಿನ ನೀರಿನ ಚಲನೆಯಿಂದ ಉಂಟಾಗುತ್ತಿದೆ. ಮಳೆಯಾದರೆ ಹೆಚ್ಚು ಭೂಮಿಯೊಳಗೆ ನೀರು ಇಂಗುವ ವೇಳೆ ಭೂ ಗರ್ಭದಲ್ಲಿ ನೈಸರ್ಗಿಕ ಕ್ರಿಯೆಯಿಂದ ಹೀಗೆ ಆಗುತ್ತಿದೆ ಎಂದು ತಜ್ಞರು ಹೇಳಿದ್ದಾರೆ ಎನ್ನಲಾಗಿದೆ
.

ಇತ್ತೀಚಿನ ಸುದ್ದಿ

ಜಾಹೀರಾತು