8:49 PM Thursday18 - June 2026
ಬ್ರೇಕಿಂಗ್ ನ್ಯೂಸ್
ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು

ಇತ್ತೀಚಿನ ಸುದ್ದಿ

ವಿಜಯಪುರ ಜಿಲ್ಲೆಯಲ್ಲಿ ಭೂಮಿ ಕಂಪಿಸಿದ ಅನುಭವ : ಆತಂಕಕ್ಕೊಳಗಾದ ಜನ ; ಭಯ ಬೇಡ ಎಂದ ಅಧಿಕಾರಿಗಳು

05/09/2021, 00:41

ವಿಜಯಪುರ (Reporterkarnataka.com)

ವಿಜಯಪುರ ಜಿಲ್ಲೆಯ ಕೆಲ ಭಾಗಗಳಲ್ಲಿ ಭೂಮಿ ಕಂಪಿಸಿದ ಅನುಭವವಾಗಿದ್ದು, ಜನರು ಮನೆಯಿಂದ ಹೊರಬಂದು ರಸ್ತೆಯಲ್ಲಿ ಸುರಕ್ಷಿತರಾಗಿರಲು ರಸ್ತೆಯಲ್ಲಿ ನಿಂತುಕೊಂಡಿದ್ದಾರೆ.

ಭೂಮಿಯಿಂದ ಭಯಂಕರ ಶಬ್ದ ಕೇಳಿ ಬಂದಿದ್ದು, ಗ್ರಾಮಸ್ಥರು ಭೂಕಂಪನವೆನ್ನುವ ಭೀತಿಯಿಂದ ನಡುಗುತ್ತಿದ್ದಾರೆ. ಆದರೆ ಅಧಿಕಾರಿಗಳು ಇದು ಕೇವಲ ಶಬ್ದ ಕಂಪನವಾಗಿದ್ದು, ಆತಂಕ ಪಡುವ ಅಗತ್ಯವಿಲ್ಲ ಎಂದು ಪತ್ರಿಕೆಯೊಂದಕ್ಕೆ ಹೇಳಿಕೆ ನೀಡಿದ್ದಾರೆ.

ಭಯ ಬೇಡ ಭೂಕಂಪನ ಅಲ್ಲ :
ಜಿಲ್ಲೆಯ ಕೆಲ ಭಾಗಗಳಲ್ಲಿ ಹಲವು ವರ್ಷಗಳಿಂದ ಭೂಕಂಪನದ ಸದ್ದು ಕೇಳಿ ಬರುತ್ತಿದೆ. ಈ ಮೊದಲು ತಿಕೋಟಾ, ಸೋಮದೇವರ ಹಟ್ಟಿ, ಕನಮಡಿ, ಬಾಬಾನಗರ ಭಾಗದಲ್ಲಿ ಭೂಕಂಪನದ ಅನುಭವವಾಗುತ್ತಿದೆ ಎಂದು ಇಲ್ಲಿನ ಗ್ರಾಮಸ್ಥರು ತೀವ್ರ ಭೀತಿಗೊಳ್ಳುತ್ತಿದ್ದರು. ಹೀಗೆ ಈ ಸಮಸ್ಯೆ ಪದೇ ಪದ ಕೇಳಿ ಬರುತ್ತಿದ್ದರಿಂದ ಕಳೆದ ವರ್ಷ ಜಿಲ್ಲಾಧಿಕಾರಿ ಪಿ.ಸುನೀಲಕುಮಾರ ಅವರು ಭೂಕಂಪನದ ಪರಿಶೀಲನೆಗಾಗಿ ಬೆಂಗಳೂರಿನ ಗಣಿ ಮತ್ತು ಭೂ ವಿಜ್ಞಾನಿಗಳ ತಜ್ಞರಿಗೆ ಪತ್ರ ಬರೆದು ತೋರಿದ್ದರು. ಇದಾದ ಬಳಿಕ ಬೆಂಗಳೂರಿನ ಭೂ ವಿಜ್ಞಾನ ಅ ಕಾರಿಗಳು ತಿಕೋಟಾ ಭಾಗದ ಪ್ರದೇಶಗಳಿಗೆ ತೆರಳಿ ಪರಿಶೀಲಿಸಿ ವಿಜಯಪುರ ಜಿಲ್ಲೆಯಲ್ಲಿ ಭೂಕಂಪನ ಸಂಭವಿಸುವ ಸಾಧ್ಯತೆ ತೀರ ಕಡಿಮೆಯಿದೆ. ಜನರು ಆತಂಕ ಐಡುವ ಅಗತ್ಯವಿಲ್ಲ ಎಂದು ಹೇಳಿದ್ದರು. ಭೂಮಿಯಡಿಯಿಂದ ಕಳಿ ಬರುತ್ತಿರುವ ಭಯಂಕರ ಶಬ್ದ ಭೂಮಿಯೊಳಗಿನ ನೀರಿನ ಚಲನೆಯಿಂದ ಉಂಟಾಗುತ್ತಿದೆ. ಮಳೆಯಾದರೆ ಹೆಚ್ಚು ಭೂಮಿಯೊಳಗೆ ನೀರು ಇಂಗುವ ವೇಳೆ ಭೂ ಗರ್ಭದಲ್ಲಿ ನೈಸರ್ಗಿಕ ಕ್ರಿಯೆಯಿಂದ ಹೀಗೆ ಆಗುತ್ತಿದೆ ಎಂದು ತಜ್ಞರು ಹೇಳಿದ್ದಾರೆ ಎನ್ನಲಾಗಿದೆ
.

ಇತ್ತೀಚಿನ ಸುದ್ದಿ

ಜಾಹೀರಾತು