9:57 PM Monday22 - December 2025
ಬ್ರೇಕಿಂಗ್ ನ್ಯೂಸ್
ಅಟಲ್ ಜೀ ವೃಕ್ಷ ಯೋಜನೆಯಡಿ 2240 ಸಸಿ ಸಂರಕ್ಷಣೆ: ವರ್ಷಪೂರ್ತಿ ಅಟಲ್ ಜನ್ಮ… ಗಾಂಧಿ ಭಾರತವನ್ನು ಗೋಡ್ಸೆ ಭಾರತವಾಗಿ ಮಾಡಲು ಬಿಡುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಟಿಪ್ಪರ್ -ಬೊಲೆರೋ ಜೀಪ್ ಡಿಕ್ಕಿ: ಕರ್ತವ್ಯದಲ್ಲಿ ತೆರಳುತ್ತಿದ್ದ ಬಿಎಸ್ಸೆನ್ನೆಲ್ ಸಿಬ್ಬಂದಿಗಳಿಗೆ ಗಾಯ ಹೌದು…ವೈದ್ಯೋ ನಾರಾಯಣೋ ಹರಿ; ಆದರೆ, ದಾದಿಯರು ಎಲೆ ಮರೆಯ ಕಾಯಿ! ಪೌರ ಕಾರ್ಮಿಕರು ಸೇರಿ ಎಲ್ಲ ಕಾರ್ಮಿಕರಿಗೆ ಪಾಲಿಕೆಯಿಂದಲೇ ನೇರ ವೇತನ ಪಾವತಿಗೆ ಕ್ರಮ:… ಕ್ರೆಡಲ್‌ನಿಂದ ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನಾಚರಣೆ: ಚಿತ್ರ ಬಿಡಿಸಿದ ಪ್ರೌಢಶಾಲೆ ಮಕ್ಕಳು ಮಡಿಕೇರಿ ಹನಿಟ್ರ್ಯಾಪ್ ಪ್ರಕರಣ: ನಾಪತ್ತೆಯಾಗಿದ್ದ ಮತ್ತಿಬ್ಬರು ಆರೋಪಗಳ ಬಂಧನ Belagavi | ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ವಲಸಿಗರಿಂದ ಅಕ್ರಮ ಚಟುವಟಿಕೆ: ಗಡಿಪಾರಿಗೆ ಸದನದಲ್ಲಿ ಶಾಸಕ ಡಾ. ಮಂತರ್ ಗೌಡ ಆಗ್ರಹ ಉರುಳಿಗೆ ಸಿಲುಕಿ ಹುಲಿ ಸಾವಿನ ಪ್ರಕರಣ: ಆರೋಪಿಗಳ ಪತ್ತೆಗೆ ಅರಣ್ಯ ಇಲಾಖೆ ಕಾರ್ಯಾಚರಣೆ

ಇತ್ತೀಚಿನ ಸುದ್ದಿ

ಜೀವ ರಕ್ಷಕ ಅಂಬ್ಯಲೆನ್ಸ್‌ ವಾಹನವನ್ನೇ ಕದ್ದ ಖದೀಮ ಕಳ್ಳ: ಹಾಸನದಲ್ಲಿ ಉಪ್ಪಿನಂಗಡಿ ಪೊಲೀಸರಿಂದ ಲಾಕ್

22/12/2025, 20:08

ಉಪ್ಪಿನಂಗಡಿ(reporterkarnataka.com):ತುರ್ತುಚಿಕಿತ್ಸೆಗೆ ರೋಗಿಗಳನ್ನು,ಅಪಘಾತಕ್ಕೀಡಾದವರನ್ನು ಕೊಂಡೊಯ್ಯುವ ಅಂಬ್ಯಲೆನ್ಸ್‌ ವಾಹನವನ್ನೇ ಖದೀಮನೊಬ್ಬ ಕದ್ದೊಯ್ದ ವಿಲಕ್ಷಣ ಘಟನೆಯೊಂದು ಗುಂಡ್ಯ ಚೆಕ್‌ ಪೋಸ್ಟ್‌ ಬಳಿ ನಡೆದಿದೆ.
ಶಿರಾಡಿ ನಿವಾಸಿ ಸುರೇಶ್ ಎಂಬವರು ಅಂಬ್ಯಲೆನ್ಸ್‌ ವಾಹನ ನಂಬ್ರ: KA-19-C-7557 ಇದರ ಚಾಲಕರಾಗಿದ್ದು, ಪ್ರತಿ ದಿನ ರಾತ್ರಿ ಗುಂಡ್ಯ ಚೆಕ್‌ ಪೋಸ್ಟ್‌ ಬಳಿ ನಿಲ್ಲಿಸಿ ಲಾಕ್‌ ಮಾಡಿ ಮನೆಗೆ ಹೋಗುತ್ತಿದ್ದರು. ಎಂದಿನಂತೆ ಡಿಸೆಂಬರ್ 19ರಂದು ರಾತ್ರಿ ಕೂಡಾ ಗುಂಡ್ಯ ಚೆಕ್‌ ಪೋಸ್ಟ್‌ ಬಳಿ ಆಂಬ್ಯುಲೆನ್ಸ್ ನಿಲ್ಲಿಸಿ, ಅಪಘಾತದ ಬಗ್ಗೆ ತುರ್ತು ಕರೆ ಬಂದಾಗ ಬದಲಿ ಚಾಲಕರ ಅನುಕೂಲತೆಗಾಗಿ ಕೀಯನ್ನು ಅಂಬ್ಯುಲೆನ್ಸ್ ನಲ್ಲೇ ಇಟ್ಟು ಹೋಗಿದ್ದರು. ಆದರೆ ಮರುದಿನ ಡಿಸೆಂಬರ್ 20ರಂದು ಬೆಳಗ್ಗೆ ಅವರು ಅಂಬ್ಯುಲೆನ್ಸ್‌ ನಿಲ್ಲಿಸಿದ್ದ ಸ್ಥಳಕ್ಕೆ ಬಂದು ನೋಡಿದಾಗ, ಅಂಬ್ಯುಲೆನ್ಸ್‌ ಕಳವಾಗಿತ್ತು.
ಈ ಬಗ್ಗೆ ಚಾಲಕ ಸುರೇಶ್ ಅವರು ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.
ತನಿಖೆ ಆರಂಭಿಸಿದ ಉಪ್ಪಿನಂಗಡಿ ಪೊಲೀಸರು 20ರಂದು ಹಾಸನ ಜಿಲ್ಲಾ ಪೊಲೀಸರ ಸಹಕಾರದೊಂದಿಗೆ ಆರೋಪಿ ಉಡುಪಿ ಜಿಲ್ಲೆಯ ಕಾರ್ಕಳ ನಿವಾಸಿ ಶೋಧನ್ (22) ಎಂಬಾತನನ್ನು ಹಾಸನದಲ್ಲಿ ವಶಕ್ಕೆ ಪಡೆದಿದ್ದಾರೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದ್ದು, ಕಳವಾಗಿದ್ದ ಅಂಬ್ಯುಲೈನ್ಸ್ ನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು