2:15 AM Saturday15 - August 2026
ಬ್ರೇಕಿಂಗ್ ನ್ಯೂಸ್
ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ

ಇತ್ತೀಚಿನ ಸುದ್ದಿ

ಜೀವ ರಕ್ಷಕ ಅಂಬ್ಯಲೆನ್ಸ್‌ ವಾಹನವನ್ನೇ ಕದ್ದ ಖದೀಮ ಕಳ್ಳ: ಹಾಸನದಲ್ಲಿ ಉಪ್ಪಿನಂಗಡಿ ಪೊಲೀಸರಿಂದ ಲಾಕ್

22/12/2025, 20:08

ಉಪ್ಪಿನಂಗಡಿ(reporterkarnataka.com):ತುರ್ತುಚಿಕಿತ್ಸೆಗೆ ರೋಗಿಗಳನ್ನು,ಅಪಘಾತಕ್ಕೀಡಾದವರನ್ನು ಕೊಂಡೊಯ್ಯುವ ಅಂಬ್ಯಲೆನ್ಸ್‌ ವಾಹನವನ್ನೇ ಖದೀಮನೊಬ್ಬ ಕದ್ದೊಯ್ದ ವಿಲಕ್ಷಣ ಘಟನೆಯೊಂದು ಗುಂಡ್ಯ ಚೆಕ್‌ ಪೋಸ್ಟ್‌ ಬಳಿ ನಡೆದಿದೆ.
ಶಿರಾಡಿ ನಿವಾಸಿ ಸುರೇಶ್ ಎಂಬವರು ಅಂಬ್ಯಲೆನ್ಸ್‌ ವಾಹನ ನಂಬ್ರ: KA-19-C-7557 ಇದರ ಚಾಲಕರಾಗಿದ್ದು, ಪ್ರತಿ ದಿನ ರಾತ್ರಿ ಗುಂಡ್ಯ ಚೆಕ್‌ ಪೋಸ್ಟ್‌ ಬಳಿ ನಿಲ್ಲಿಸಿ ಲಾಕ್‌ ಮಾಡಿ ಮನೆಗೆ ಹೋಗುತ್ತಿದ್ದರು. ಎಂದಿನಂತೆ ಡಿಸೆಂಬರ್ 19ರಂದು ರಾತ್ರಿ ಕೂಡಾ ಗುಂಡ್ಯ ಚೆಕ್‌ ಪೋಸ್ಟ್‌ ಬಳಿ ಆಂಬ್ಯುಲೆನ್ಸ್ ನಿಲ್ಲಿಸಿ, ಅಪಘಾತದ ಬಗ್ಗೆ ತುರ್ತು ಕರೆ ಬಂದಾಗ ಬದಲಿ ಚಾಲಕರ ಅನುಕೂಲತೆಗಾಗಿ ಕೀಯನ್ನು ಅಂಬ್ಯುಲೆನ್ಸ್ ನಲ್ಲೇ ಇಟ್ಟು ಹೋಗಿದ್ದರು. ಆದರೆ ಮರುದಿನ ಡಿಸೆಂಬರ್ 20ರಂದು ಬೆಳಗ್ಗೆ ಅವರು ಅಂಬ್ಯುಲೆನ್ಸ್‌ ನಿಲ್ಲಿಸಿದ್ದ ಸ್ಥಳಕ್ಕೆ ಬಂದು ನೋಡಿದಾಗ, ಅಂಬ್ಯುಲೆನ್ಸ್‌ ಕಳವಾಗಿತ್ತು.
ಈ ಬಗ್ಗೆ ಚಾಲಕ ಸುರೇಶ್ ಅವರು ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.
ತನಿಖೆ ಆರಂಭಿಸಿದ ಉಪ್ಪಿನಂಗಡಿ ಪೊಲೀಸರು 20ರಂದು ಹಾಸನ ಜಿಲ್ಲಾ ಪೊಲೀಸರ ಸಹಕಾರದೊಂದಿಗೆ ಆರೋಪಿ ಉಡುಪಿ ಜಿಲ್ಲೆಯ ಕಾರ್ಕಳ ನಿವಾಸಿ ಶೋಧನ್ (22) ಎಂಬಾತನನ್ನು ಹಾಸನದಲ್ಲಿ ವಶಕ್ಕೆ ಪಡೆದಿದ್ದಾರೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದ್ದು, ಕಳವಾಗಿದ್ದ ಅಂಬ್ಯುಲೈನ್ಸ್ ನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು