9:58 PM Monday22 - December 2025
ಬ್ರೇಕಿಂಗ್ ನ್ಯೂಸ್
ಅಟಲ್ ಜೀ ವೃಕ್ಷ ಯೋಜನೆಯಡಿ 2240 ಸಸಿ ಸಂರಕ್ಷಣೆ: ವರ್ಷಪೂರ್ತಿ ಅಟಲ್ ಜನ್ಮ… ಗಾಂಧಿ ಭಾರತವನ್ನು ಗೋಡ್ಸೆ ಭಾರತವಾಗಿ ಮಾಡಲು ಬಿಡುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಟಿಪ್ಪರ್ -ಬೊಲೆರೋ ಜೀಪ್ ಡಿಕ್ಕಿ: ಕರ್ತವ್ಯದಲ್ಲಿ ತೆರಳುತ್ತಿದ್ದ ಬಿಎಸ್ಸೆನ್ನೆಲ್ ಸಿಬ್ಬಂದಿಗಳಿಗೆ ಗಾಯ ಹೌದು…ವೈದ್ಯೋ ನಾರಾಯಣೋ ಹರಿ; ಆದರೆ, ದಾದಿಯರು ಎಲೆ ಮರೆಯ ಕಾಯಿ! ಪೌರ ಕಾರ್ಮಿಕರು ಸೇರಿ ಎಲ್ಲ ಕಾರ್ಮಿಕರಿಗೆ ಪಾಲಿಕೆಯಿಂದಲೇ ನೇರ ವೇತನ ಪಾವತಿಗೆ ಕ್ರಮ:… ಕ್ರೆಡಲ್‌ನಿಂದ ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನಾಚರಣೆ: ಚಿತ್ರ ಬಿಡಿಸಿದ ಪ್ರೌಢಶಾಲೆ ಮಕ್ಕಳು ಮಡಿಕೇರಿ ಹನಿಟ್ರ್ಯಾಪ್ ಪ್ರಕರಣ: ನಾಪತ್ತೆಯಾಗಿದ್ದ ಮತ್ತಿಬ್ಬರು ಆರೋಪಗಳ ಬಂಧನ Belagavi | ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ವಲಸಿಗರಿಂದ ಅಕ್ರಮ ಚಟುವಟಿಕೆ: ಗಡಿಪಾರಿಗೆ ಸದನದಲ್ಲಿ ಶಾಸಕ ಡಾ. ಮಂತರ್ ಗೌಡ ಆಗ್ರಹ ಉರುಳಿಗೆ ಸಿಲುಕಿ ಹುಲಿ ಸಾವಿನ ಪ್ರಕರಣ: ಆರೋಪಿಗಳ ಪತ್ತೆಗೆ ಅರಣ್ಯ ಇಲಾಖೆ ಕಾರ್ಯಾಚರಣೆ

ಇತ್ತೀಚಿನ ಸುದ್ದಿ

ಸಿದ್ದರಾಮಯ್ಯ ಸರ್ಕಾರಕ್ಕೆ ಕೋಮುವಾದ, ದ್ವೇಷಭಾಷಣದ ವಿರುದ್ದ ನೈಜ ಕಾಳಜಿ ಇಲ್ಲ: ಮುನೀರ್ ಕಾಟಿಪಳ್ಳ

22/12/2025, 21:48

ಬೆಂಗಳೂರು(reporterkarnataka.com): ಸಿದ್ದರಾಮಯ್ಯ ಸರ್ಕಾರ ದ್ವೇಷಭಾಷಣದ ಕಾಯ್ದೆ ಮಂಡಿಸಿ ಬೀಗುತ್ತಿದೆ. ವಾಸ್ತವವಾಗಿ ರಾಜ್ಯ ಸರ್ಕಾರಕ್ಕೆ ದ್ವೇಷ ಭಾಷಣ ತಡೆಯುವ ಇಚ್ಚಾಶಕ್ತಿ ಇಲ್ಲ. ದ್ವೇಷಭಾಷಣಕಾರರ ಮೇಲೆ ದಾಖಲಾಗಿರುವ 38 ಮೊಕದ್ದಮೆಗಳಿಗೆ ಹೈಕೋರ್ಟ್ ನೀಡಿರುವ ತಡೆಯಾಜ್ಞೆಯನ್ನು ಸಿದ್ದರಾಮಯ್ಯ ಸರ್ಕಾರ ತೆರವುಗೊಳಿಸಲು ಕ್ರಮ ಕೈಗೊಳ್ಳದೆ ಮೃದು ಹಿಂದುತ್ವ ಧೋರಣೆ ಅನುಸರಿಸುತ್ತಿದೆ ಎಂದು ಸಿಪಿಎಂ ಜಿಲ್ಲಾ ಕಾರ್ಯದರ್ಶಿ ಮುನೀರ್ ಕಾಟಿಪಳ್ಳ ಆರೋಪಿಸಿದ್ದಾರೆ.
ಇಂದು ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ನಡೆದ ಜನದನಿ ರ‌್ಯಾಲಿಯಲ್ಲಿ ಅವರು ಮಾತನಾಡುತ್ತಿದ್ದರು.
‘ರಾಜ್ಯದ ಜನಸಾಮಾನ್ಯರ ಬದುಕಿನ ಪ್ರಶ್ನೆ ಮುನ್ನಲೆಗೆ ಬಾರದಂತೆ ಕೋಮುವಾದವನ್ನು ಬಳಕೆ ಮಾಡಲಾಗುತ್ತಿದೆ. 2014 ರಲ್ಲಿ ನರೇಂದ್ರ ಮೋದಿ ಪ್ರಧಾನಿಯಾದ ಬಳಿಕ ಆರ್ ಎಸ್ ಎಸ್ ಜಾಲ ಎಲ್ಲಾ ಕ್ಷೇತ್ರಗಳಲ್ಲಿ ಕೈಚಾಚಿದೆ. ಕಾಂಗ್ರೆಸ್ ನ ಒಳಗೇ ಕೂಡಾ ಆರ್ ಎಸ್ ಎಸ್ ಕಾರ್ಯನಿರ್ವಹಿಸುತ್ತಿದೆ. ಸಿದ್ದರಾಮಯ್ಯ ಸರ್ಕಾರ ಬಂದಾಗ ಅಲ್ಪಸಂಖ್ಯಾತರಿಗೆ ಭಾರೀ ನಿರೀಕ್ಷೆ ಇತ್ತು. ಅದು ಹುಸಿಯಾಗಿದೆ’ ಎಂದು ಮುನೀರ್ ಕಾಟಿಪಳ್ಳ ಹೇಳಿದರು.
ಜಾನುವಾರು ಹತ್ಯೆ ಪ್ರತಿಬಂಧಕ ಕಾಯ್ದೆ ಸೇರಿದಂತೆ ಹಲವಾರು ಕೋಮುವಾದದ ನಿಲುವುಗಳಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಮಧ್ಯೆ ಯಾವ ವ್ಯತ್ಯಾಸವೂ ಇಲ್ಲ. ಜಾನುವಾರ ಹತ್ಯೆ ಪ್ರತಿಬಂಧಕ ಕಾಯ್ದೆಯನ್ನು ಬಳಸಿಕೊಂಡು ಹಲವಾರು ಮುಸ್ಲಿಮರ ಮನೆಗಳನ್ನು ಸಿದ್ದರಾಮಯ್ಯ ಸರ್ಕಾರ ಜಪ್ತಿ ಮಾಡಿದೆ. ನಮ್ಮ ಸಿಪಿಎಂ ತಂಡ ಸಿದ್ದರಾಮಯ್ಯ ಸರ್ಕಾರ ಸೀಝ್ ಮಾಡಿದ ಮನೆ, ಆಸ್ತಿಗಳನ್ನು ಬಿಡಿಸಿಕೊಟ್ಟಿದೆ ಎಂದು ಮುನೀರ್ ಕಾಟಿಪಳ್ಳ ಮಾಹಿತಿ ನೀಡಿದರು.
ಪುನೀತ್ ಕೆರೆಹಳ್ಳಿ ಸೇರಿದಂತೆ ಯಾವುದೇ ಮತೀಯ ಪುಂಡರನ್ನು ನಿಯಂತ್ರಿಸುವ ಕನಿಷ್ಠ ಸಾಮರ್ಥ್ಯವೂ ರಾಜ್ಯ ಸರ್ಕಾರಕ್ಕೆ ಇಲ್ಲ. ಸರ್ಕಾರ ಬಂದು ಎರಡುವರೆ ವರ್ಷವಾದರೂ ಒಬ್ಬನೇ ಒಬ್ಬ ಕೋಮುವಾದಿ ಕ್ರಿಮಿನಲ್ ಅನ್ನು ಜೈಲಿನಲ್ಲಿರಿಸಲು ಸಾಧ್ಯವಾಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.


ಸಿದ್ದರಾಮಯ್ಯ ಸರ್ಕಾರ ಬಂದ ಬಳಿಕ ಈವರೆಗೆ ಎರಡುವರೆ ವರ್ಷದಲ್ಲಿ 38 ಧ್ವೇಷ ಭಾಷಣ ಮೊಕದ್ದಮೆಗಳಿಗೆ ಕೋಮುವಾದಿಗಳು ಹೈಕೋರ್ಟ್ ನಿಂದ ತಡೆಯಾಜ್ಞೆ ಪಡೆದುಕೊಂಡು ಕೃತ್ಯಗಳನ್ನು ಪುನರಾವರ್ತನೆ ಮಾಡುತ್ತಿದ್ದಾರೆ. ಕರ್ನಾಟಕ ಸರ್ಕಾರ ಈವರೆಗೂ ಒಂದೇ ಒಂದು ತಡೆಯಾಜ್ಞೆಯನ್ನು ತೆರವುಗೊಳಿಸುವ ಕನಿಷ್ಠ ಪ್ರಯತ್ನ ಮಾಡುತ್ತಿಲ್ಲ. ನಾವು ಎಡಪಂಥೀಯರು ಸಣ್ಣ ತಂಡ ಕಟ್ಟಿಕೊಂಡು ಹೈಕೋರ್ಟ್ ನಲ್ಲಿರುವ ಹಲವು ಧ್ವೇಷಭಾಷಣ ಪ್ರಕರಣಗಳ ತಡೆಯಾಜ್ಞೆ ತೆರವುಗೊಳಿಸಲು ಯತ್ನಿಸುತ್ತಿದ್ದೇವೆ. ನಮಗೆ ಸಾಧ್ಯವಾಗುವುದು ಸರ್ಕಾರಕ್ಕೆ ಯಾಕೆ ಸಾಧ್ಯವಿಲ್ಲ ? ಯಾಕೆಂದರೆ ಧ್ವೇಷಭಾಷಣಕಾರರ ವಿರುದ್ದದ ಸರ್ಕಾರದ ಕಾಳಜಿ ನೈಜವಾದುದಲ್ಲ” ಎಂದು ಮುನೀರ್ ಕಾಟಿಪಳ್ಳ ಆಕ್ರೋಶ ವ್ಯಕ್ತಪಡಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು