6:18 AM Thursday7 - May 2026
ಬ್ರೇಕಿಂಗ್ ನ್ಯೂಸ್
ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು ಕೇವಲ 1 ಮತದಿಂದ ಡಿಎಂಕೆ ಅಭ್ಯರ್ಥಿ ವಿರುದ್ಧ ರೋಚಕ ಗೆಲುವು ಕಂಡ ಟಿವಿಕೆ… ಕೇರಳದಲ್ಲಿ ಯುಡಿಎಫ್‌ ಶತಕ: ಸಿಎಂ ರೇಸ್​ನಲ್ಲಿ ಮೂವರ ಹೆಸರು ಪಶ್ಚಿಮ ಬಂಗಾಳ: ಚುನಾವಣೆ ಫಲಿತಾಂಶ ಬಳಿಕ ಗಲಾಟೆ, ಪೊಲೀಸರಿಂದ ಲಾಠಿಚಾರ್ಜ್ ಪಶ್ಚಿಮ ಬಂಗಾಳ: ಸಿಎಂ ಮಮತಾ ಬ್ಯಾನರ್ಜಿ ನಿವಾಸದ ಎದುರು ‘ಜೈ ಶ್ರೀರಾಮ್’ ಘೋಷಣೆ…

ಇತ್ತೀಚಿನ ಸುದ್ದಿ

ಕಡೂರು ಸಮೀಪ 3 ಕೃಷ್ಣ ಮೃಗಗಳ ಗುಂಡಿಕ್ಕಿ ಹತ್ಯೆ: ದುಷ್ಕರ್ಮಿಗಳ ಬಚಾವ್ ಮಾಡಲು ಅರಣ್ಯ ಇಲಾಖೆ ಯತ್ನ?

24/12/2025, 15:34

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ತೀರಾ ಅಳಿವಿನಂಚಿನಲ್ಲಿರುವ ಅಪರೂಪದ ಪ್ರಾಣಿ
ಕೃಷ್ಣ ಮೃಗಗಳಿಗೆ ಬೇಟೆಗಾರರು ಗುಂಡಿಕ್ಕಿ ಹತ್ಯೆಗೈದ ಘಟನರ
ಕಡೂರು ತಾಲೂಕಿನ ಬಾಸೂರು ಕಾವಲ್ ನಲ್ಲಿ ನಡೆದಿದೆ.
ಬಾಸೂರು ಕೃಷ್ಣಮೃಗಗಳ ಸಂರಕ್ಷಿತ ಪ್ರದೇಶದ ಪಕ್ಕದ ಜಮೀನಿನಲ್ಲಿ ಈ ಕೃತ್ಯ ಎಸಗಲಾಗಿದೆ. 2 ಹೆಣ್ಣು ಹಾಗೂ 1 ಗಂಡು ಕೃಷ್ಣಮೃಗಗಳನ್ನು ಗುಂಡಿಕ್ಕಿ ಸಾಯಿಸಲಾಗಿದೆ.
ಮೂರು ಕೃಷ್ಣಮೃಗಗಳಿಗೂ ಸುಮಾರು 2 ವರ್ಷ ಪ್ರಾಯ ಎಂದು ಅಂದಾಜಿಸಲಾಗಿದೆ.
ರಾಜ್ಯದಲ್ಲಿ ಹಾವೇರಿ ಮತ್ತು ಚಿಕ್ಕಮಗಳೂರಿನಲ್ಲಿ ಮಾತ್ರ ಕೃಷ್ಣಮೃಗ ಕಾಣಸಿಗುತ್ತದೆ.


ಸ್ಥಳಕ್ಕೆ ಅರಣ್ಯ ಅಧಿಕಾರಿಗಳ ಭೇಟಿ, ಪರಿಶೀಲನೆ ನಡೆಸಿದ್ದಾರೆ. ಅತ್ಯಾಧುನಿಕ ಶಸ್ತ್ರಾಸ್ತ್ರಗಳಿಂದ ಶೂಟ್ ಮಾಡಲಾಗಿದೆ. ಪ್ರಕರಣ ಮುಚ್ಚಿ ಹಾಕಲು ಅರಣ್ಯ ಇಲಾಖೆ ಯತ್ನಿಸಿದೆ ಎಂಬ ಆರೋಪ ಕೇಳಿ ಬಂದಿದೆ.
ಪ್ರಕರಣ ಮುಚ್ಚಿ ಹಾಕಲು ಸಂಜೆಯೇ ಕೃಷ್ಣಮೃಗಗಳನ್ನ ಅಂತ್ಯ ಸಂಸ್ಕಾರ ಮಾಡಲಾಗಿದೆ ಎಂದು ಆರೋಪಿಸಲಾಗಿದೆ.
ಸಂಜೆ ಬಳಿಕ ಅವಸರದಲ್ಲಿ ಅಂತ್ಯ ಸಂಸ್ಕಾರ ಮಾಡಲಾಗಿದೆ. ಸಂಜೆ ಬಳಿಕ ಪ್ರಾಣಿಗಳ ಶವಪರೀಕ್ಷೆ-ಅಂತ್ಯ ಸಂಸ್ಕಾರ ಮಾಡುವಂತಿಲ್ಲ.
ಅಪರಾಧಿಗಳ ರಕ್ಷಣೆಗೆ ಆತುರದಲ್ಲಿ ಅಂತ್ಯ ಸಂಸ್ಕಾರ ಮಾಡಿದ್ದಾರೆಂದು ಆರೋಪ ಎದುರಾಗಿದೆ.
ಬೀರೂರು ವಲಯ ಅರಣ್ಯ ಅಧಿಕಾರಿಗಳ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು