3:49 PM Sunday16 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಕಡೂರು ಸಮೀಪ 3 ಕೃಷ್ಣ ಮೃಗಗಳ ಗುಂಡಿಕ್ಕಿ ಹತ್ಯೆ: ದುಷ್ಕರ್ಮಿಗಳ ಬಚಾವ್ ಮಾಡಲು ಅರಣ್ಯ ಇಲಾಖೆ ಯತ್ನ?

24/12/2025, 15:34

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ತೀರಾ ಅಳಿವಿನಂಚಿನಲ್ಲಿರುವ ಅಪರೂಪದ ಪ್ರಾಣಿ
ಕೃಷ್ಣ ಮೃಗಗಳಿಗೆ ಬೇಟೆಗಾರರು ಗುಂಡಿಕ್ಕಿ ಹತ್ಯೆಗೈದ ಘಟನರ
ಕಡೂರು ತಾಲೂಕಿನ ಬಾಸೂರು ಕಾವಲ್ ನಲ್ಲಿ ನಡೆದಿದೆ.
ಬಾಸೂರು ಕೃಷ್ಣಮೃಗಗಳ ಸಂರಕ್ಷಿತ ಪ್ರದೇಶದ ಪಕ್ಕದ ಜಮೀನಿನಲ್ಲಿ ಈ ಕೃತ್ಯ ಎಸಗಲಾಗಿದೆ. 2 ಹೆಣ್ಣು ಹಾಗೂ 1 ಗಂಡು ಕೃಷ್ಣಮೃಗಗಳನ್ನು ಗುಂಡಿಕ್ಕಿ ಸಾಯಿಸಲಾಗಿದೆ.
ಮೂರು ಕೃಷ್ಣಮೃಗಗಳಿಗೂ ಸುಮಾರು 2 ವರ್ಷ ಪ್ರಾಯ ಎಂದು ಅಂದಾಜಿಸಲಾಗಿದೆ.
ರಾಜ್ಯದಲ್ಲಿ ಹಾವೇರಿ ಮತ್ತು ಚಿಕ್ಕಮಗಳೂರಿನಲ್ಲಿ ಮಾತ್ರ ಕೃಷ್ಣಮೃಗ ಕಾಣಸಿಗುತ್ತದೆ.


ಸ್ಥಳಕ್ಕೆ ಅರಣ್ಯ ಅಧಿಕಾರಿಗಳ ಭೇಟಿ, ಪರಿಶೀಲನೆ ನಡೆಸಿದ್ದಾರೆ. ಅತ್ಯಾಧುನಿಕ ಶಸ್ತ್ರಾಸ್ತ್ರಗಳಿಂದ ಶೂಟ್ ಮಾಡಲಾಗಿದೆ. ಪ್ರಕರಣ ಮುಚ್ಚಿ ಹಾಕಲು ಅರಣ್ಯ ಇಲಾಖೆ ಯತ್ನಿಸಿದೆ ಎಂಬ ಆರೋಪ ಕೇಳಿ ಬಂದಿದೆ.
ಪ್ರಕರಣ ಮುಚ್ಚಿ ಹಾಕಲು ಸಂಜೆಯೇ ಕೃಷ್ಣಮೃಗಗಳನ್ನ ಅಂತ್ಯ ಸಂಸ್ಕಾರ ಮಾಡಲಾಗಿದೆ ಎಂದು ಆರೋಪಿಸಲಾಗಿದೆ.
ಸಂಜೆ ಬಳಿಕ ಅವಸರದಲ್ಲಿ ಅಂತ್ಯ ಸಂಸ್ಕಾರ ಮಾಡಲಾಗಿದೆ. ಸಂಜೆ ಬಳಿಕ ಪ್ರಾಣಿಗಳ ಶವಪರೀಕ್ಷೆ-ಅಂತ್ಯ ಸಂಸ್ಕಾರ ಮಾಡುವಂತಿಲ್ಲ.
ಅಪರಾಧಿಗಳ ರಕ್ಷಣೆಗೆ ಆತುರದಲ್ಲಿ ಅಂತ್ಯ ಸಂಸ್ಕಾರ ಮಾಡಿದ್ದಾರೆಂದು ಆರೋಪ ಎದುರಾಗಿದೆ.
ಬೀರೂರು ವಲಯ ಅರಣ್ಯ ಅಧಿಕಾರಿಗಳ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು