1:32 PM Wednesday4 - March 2026
ಬ್ರೇಕಿಂಗ್ ನ್ಯೂಸ್
ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು

ಇತ್ತೀಚಿನ ಸುದ್ದಿ

ಮೂಡಿಗೆರೆ ತಾಪಂ ಇಒ ದರ್ಬಾರ್‌: ಸರ್ಕಾರಿ ಜೀಪ್‌ ಖಾಸಗಿಯಾಗಿ ದುರ್ಬಳಕೆ; ನಿತ್ಯ 60 ಕಿಮೀ. ಪ್ರಯಾಣ; ಸಾರ್ವಜನಿಕರ ಆಕ್ರೋಶ

24/12/2025, 15:55

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnartaka@gmail.com

ಸರ್ಕಾರಿ ಅಧಿಕಾರಿಗಳ ಅಂಧ ದರ್ಬಾರ್‌ಗೆ ನಿಯಂತ್ರಣವೇ ಇಲ್ಲವೇ ಎಂಬ ಪ್ರಶ್ನೆ ಉದ್ಭವವಾಗಿದೆ. ಮೂಡಿಗೆರೆ ತಾಲ್ಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ (ಇಒ) ದಯಾವತಿ ವಿರುದ್ಧ ಸ್ಥಳೀಯರಿಂದ ಗಂಭೀರ ಆರೋಪಗಳು ಕೇಳಿಬರುತ್ತಿವೆ.
ನಿತ್ಯವಾಗಿ 60 ಕಿಲೋಮೀಟರ್ ದೂರದ ಉಜಿರೆಯಿಂದ ಅಪ್ ಅಂಡ್ ಡೌನ್ ಮಾಡುತ್ತಿರುವ ಇಓ ಮೇಡಂ, ಕೊಟ್ಟಿಗೆಹಾರ ಬಸ್ ನಿಲ್ದಾಣದಲ್ಲಿ ಇಳಿದ ಕೂಡಲೇ ಸರ್ಕಾರಿ ಜೀಪ್‌ ಮೂಲಕ ಮೂಡಿಗೆರೆವರೆಗೆ ಪಿಕ್ ಅಪ್ ಮಾಡಿಸಿಕೊಳ್ಳುತ್ತಿರುವುದಾಗಿ ಆರೋಪಿಸಲಾಗಿದೆ. ವಿಶೇಷವೆಂದರೆ, ಉಜಿರೆ–ಮೂಡಿಗೆರೆ ಮಾರ್ಗದಲ್ಲಿ ನಿತ್ಯ ಸರ್ಕಾರಿ ಬಸ್ ಸಂಚಾರವಿದ್ದರೂ ಇಓ ಮೇಡಂ ಆ ಬಸ್ಸನ್ನು ಬಳಸದೇ ಸರ್ಕಾರಿ ಜೀಪ್‌ನ್ನೇ ಆಯ್ಕೆ ಮಾಡಿಕೊಳ್ಳುತ್ತಿದ್ದಾರೆ ಎಂಬುದು ಸಾರ್ವಜನಿಕರ ಅಸಮಾಧಾನಕ್ಕೆ ಕಾರಣವಾಗಿದೆ.



ಪ್ರತಿದಿನ ಬೆಳಗ್ಗೆಯೇ ಮೂಡಿಗೆರೆಯಿಂದ ಸರ್ಕಾರಿ ಜೀಪ್‌ ಕೊಟ್ಟಿಗೆಹಾರಕ್ಕೆ ತೆರಳಿ ಇಓ ಅವರನ್ನು ಕಾಯಬೇಕಾದ ಸ್ಥಿತಿ ನಿರ್ಮಾಣವಾಗಿದೆ. ಅಲ್ಲದೆ ವಾರದಲ್ಲಿ ಎರಡು-ಮೂರು ದಿನ ಸರ್ಕಾರಿ ಜೀಪ್‌ನಲ್ಲೇ ಉಜಿರೆಗೆ ಡ್ರಾಪ್ ಮಾಡುವುದರಿಂದ ಸರ್ಕಾರದ ವಾಹನ ಹಾಗೂ ಇಂಧನ ದುರ್ಬಳಕೆ ನಡೆಯುತ್ತಿದೆ .
ಸರ್ಕಾರಿ ಅಧಿಕಾರಿಗಳು ತಮ್ಮ ಕರ್ತವ್ಯಸ್ಥಳದಲ್ಲೇ ವಾಸವಿರಬೇಕು ಎಂಬ ಸರ್ಕಾರದ ನಿಯಮಗಳಿದ್ದರೂ, ಇಓ ಮೇಡಂ ಪಾಲಿಗೆ ಈ ಕಾನೂನು ಕಡತಗಳಲ್ಲೇ ಸೀಮಿತವಾಗಿದೆಯೇ ಎಂಬ ಪ್ರಶ್ನೆ ಜನರನ್ನು ಕಾಡುತ್ತಿದೆ. ಹಿರಿಯ ಅಧಿಕಾರಿಗಳು ಈ ವಿಷಯದ ಬಗ್ಗೆ ಮೌನ ವಹಿಸಿರುವುದು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ.
ಸರ್ಕಾರಿ ಗಾಡಿ ಹಾಗೂ ಸರ್ಕಾರದ ಹಣವನ್ನು ಖಾಸಗಿ ಪ್ರಯಾಣಕ್ಕೆ ಬಳಸಿಕೊಳ್ಳುತ್ತಿರುವ ಇಓ ಅವರ ವರ್ತನೆಗೆ ಮೂಡಿಗೆರೆ ತಾಲೂಕಿನ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಕೂಡಲೇ ಜಿಲ್ಲಾಡಳಿತ ಮತ್ತು ಸಂಬಂಧಪಟ್ಟ ಇಲಾಖೆಯವರು ತನಿಖೆ ನಡೆಸಿ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು