4:54 PM Friday8 - May 2026
ಬ್ರೇಕಿಂಗ್ ನ್ಯೂಸ್
ರಕ್ತ ಸಂಬಂಧವನ್ನೇ ಮರೆತು ಹಸೆಮಣೆಗೆ ಏರಿದ ಅಕ್ಕ ತಮ್ಮ..! ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು ಕೇವಲ 1 ಮತದಿಂದ ಡಿಎಂಕೆ ಅಭ್ಯರ್ಥಿ ವಿರುದ್ಧ ರೋಚಕ ಗೆಲುವು ಕಂಡ ಟಿವಿಕೆ… ಕೇರಳದಲ್ಲಿ ಯುಡಿಎಫ್‌ ಶತಕ: ಸಿಎಂ ರೇಸ್​ನಲ್ಲಿ ಮೂವರ ಹೆಸರು ಪಶ್ಚಿಮ ಬಂಗಾಳ: ಚುನಾವಣೆ ಫಲಿತಾಂಶ ಬಳಿಕ ಗಲಾಟೆ, ಪೊಲೀಸರಿಂದ ಲಾಠಿಚಾರ್ಜ್

ಇತ್ತೀಚಿನ ಸುದ್ದಿ

ಮೂಡಿಗೆರೆ ತಾಪಂ ಇಒ ದರ್ಬಾರ್‌: ಸರ್ಕಾರಿ ಜೀಪ್‌ ಖಾಸಗಿಯಾಗಿ ದುರ್ಬಳಕೆ; ನಿತ್ಯ 60 ಕಿಮೀ. ಪ್ರಯಾಣ; ಸಾರ್ವಜನಿಕರ ಆಕ್ರೋಶ

24/12/2025, 15:55

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnartaka@gmail.com

ಸರ್ಕಾರಿ ಅಧಿಕಾರಿಗಳ ಅಂಧ ದರ್ಬಾರ್‌ಗೆ ನಿಯಂತ್ರಣವೇ ಇಲ್ಲವೇ ಎಂಬ ಪ್ರಶ್ನೆ ಉದ್ಭವವಾಗಿದೆ. ಮೂಡಿಗೆರೆ ತಾಲ್ಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ (ಇಒ) ದಯಾವತಿ ವಿರುದ್ಧ ಸ್ಥಳೀಯರಿಂದ ಗಂಭೀರ ಆರೋಪಗಳು ಕೇಳಿಬರುತ್ತಿವೆ.
ನಿತ್ಯವಾಗಿ 60 ಕಿಲೋಮೀಟರ್ ದೂರದ ಉಜಿರೆಯಿಂದ ಅಪ್ ಅಂಡ್ ಡೌನ್ ಮಾಡುತ್ತಿರುವ ಇಓ ಮೇಡಂ, ಕೊಟ್ಟಿಗೆಹಾರ ಬಸ್ ನಿಲ್ದಾಣದಲ್ಲಿ ಇಳಿದ ಕೂಡಲೇ ಸರ್ಕಾರಿ ಜೀಪ್‌ ಮೂಲಕ ಮೂಡಿಗೆರೆವರೆಗೆ ಪಿಕ್ ಅಪ್ ಮಾಡಿಸಿಕೊಳ್ಳುತ್ತಿರುವುದಾಗಿ ಆರೋಪಿಸಲಾಗಿದೆ. ವಿಶೇಷವೆಂದರೆ, ಉಜಿರೆ–ಮೂಡಿಗೆರೆ ಮಾರ್ಗದಲ್ಲಿ ನಿತ್ಯ ಸರ್ಕಾರಿ ಬಸ್ ಸಂಚಾರವಿದ್ದರೂ ಇಓ ಮೇಡಂ ಆ ಬಸ್ಸನ್ನು ಬಳಸದೇ ಸರ್ಕಾರಿ ಜೀಪ್‌ನ್ನೇ ಆಯ್ಕೆ ಮಾಡಿಕೊಳ್ಳುತ್ತಿದ್ದಾರೆ ಎಂಬುದು ಸಾರ್ವಜನಿಕರ ಅಸಮಾಧಾನಕ್ಕೆ ಕಾರಣವಾಗಿದೆ.



ಪ್ರತಿದಿನ ಬೆಳಗ್ಗೆಯೇ ಮೂಡಿಗೆರೆಯಿಂದ ಸರ್ಕಾರಿ ಜೀಪ್‌ ಕೊಟ್ಟಿಗೆಹಾರಕ್ಕೆ ತೆರಳಿ ಇಓ ಅವರನ್ನು ಕಾಯಬೇಕಾದ ಸ್ಥಿತಿ ನಿರ್ಮಾಣವಾಗಿದೆ. ಅಲ್ಲದೆ ವಾರದಲ್ಲಿ ಎರಡು-ಮೂರು ದಿನ ಸರ್ಕಾರಿ ಜೀಪ್‌ನಲ್ಲೇ ಉಜಿರೆಗೆ ಡ್ರಾಪ್ ಮಾಡುವುದರಿಂದ ಸರ್ಕಾರದ ವಾಹನ ಹಾಗೂ ಇಂಧನ ದುರ್ಬಳಕೆ ನಡೆಯುತ್ತಿದೆ .
ಸರ್ಕಾರಿ ಅಧಿಕಾರಿಗಳು ತಮ್ಮ ಕರ್ತವ್ಯಸ್ಥಳದಲ್ಲೇ ವಾಸವಿರಬೇಕು ಎಂಬ ಸರ್ಕಾರದ ನಿಯಮಗಳಿದ್ದರೂ, ಇಓ ಮೇಡಂ ಪಾಲಿಗೆ ಈ ಕಾನೂನು ಕಡತಗಳಲ್ಲೇ ಸೀಮಿತವಾಗಿದೆಯೇ ಎಂಬ ಪ್ರಶ್ನೆ ಜನರನ್ನು ಕಾಡುತ್ತಿದೆ. ಹಿರಿಯ ಅಧಿಕಾರಿಗಳು ಈ ವಿಷಯದ ಬಗ್ಗೆ ಮೌನ ವಹಿಸಿರುವುದು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ.
ಸರ್ಕಾರಿ ಗಾಡಿ ಹಾಗೂ ಸರ್ಕಾರದ ಹಣವನ್ನು ಖಾಸಗಿ ಪ್ರಯಾಣಕ್ಕೆ ಬಳಸಿಕೊಳ್ಳುತ್ತಿರುವ ಇಓ ಅವರ ವರ್ತನೆಗೆ ಮೂಡಿಗೆರೆ ತಾಲೂಕಿನ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಕೂಡಲೇ ಜಿಲ್ಲಾಡಳಿತ ಮತ್ತು ಸಂಬಂಧಪಟ್ಟ ಇಲಾಖೆಯವರು ತನಿಖೆ ನಡೆಸಿ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು