10:28 PM Wednesday24 - December 2025
ಬ್ರೇಕಿಂಗ್ ನ್ಯೂಸ್
ಕಲಬುರ್ಗಿಯಲ್ಲಿ ಟೆಕ್ಸ್ ಟೈಲ್ ಪಾರ್ಕ್ | ಮುಂದಿನ ತಿಂಗಳು ಉನ್ನತ ಮಟ್ಟದ ಸಭೆ:… ಮೂಡಿಗೆರೆ ತಾಪಂ ಇಒ ದರ್ಬಾರ್‌: ಸರ್ಕಾರಿ ಜೀಪ್‌ ಖಾಸಗಿಯಾಗಿ ದುರ್ಬಳಕೆ; ನಿತ್ಯ 60… ಸಂಸದ ಯದುವೀರ್‌ ಪ್ರಯತ್ನದ ಫಲಶ್ರುತಿ : ತಂಬಾಕು ಮಾರಾಟಕ್ಕೆ ಅನುಮತಿ ರಾಮೇಶ್ವರಂ ಕೆಫೆ ವಿರುದ್ಧದ ಪ್ರಕರಣದಲ್ಲಿ ಹೆಚ್ಚಿನ ತನಿಖೆಗೆ ಕರ್ನಾಟಕ ಹೈಕೋರ್ಟ್ ವತಿಯಿಂದ ತಡೆಯಾಜ್ಞೆ;… ಅಟಲ್ ಜೀ ವೃಕ್ಷ ಯೋಜನೆಯಡಿ 2240 ಸಸಿ ಸಂರಕ್ಷಣೆ: ವರ್ಷಪೂರ್ತಿ ಅಟಲ್ ಜನ್ಮ… ಗಾಂಧಿ ಭಾರತವನ್ನು ಗೋಡ್ಸೆ ಭಾರತವಾಗಿ ಮಾಡಲು ಬಿಡುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಟಿಪ್ಪರ್ -ಬೊಲೆರೋ ಜೀಪ್ ಡಿಕ್ಕಿ: ಕರ್ತವ್ಯದಲ್ಲಿ ತೆರಳುತ್ತಿದ್ದ ಬಿಎಸ್ಸೆನ್ನೆಲ್ ಸಿಬ್ಬಂದಿಗಳಿಗೆ ಗಾಯ ಹೌದು…ವೈದ್ಯೋ ನಾರಾಯಣೋ ಹರಿ; ಆದರೆ, ದಾದಿಯರು ಎಲೆ ಮರೆಯ ಕಾಯಿ! ಪೌರ ಕಾರ್ಮಿಕರು ಸೇರಿ ಎಲ್ಲ ಕಾರ್ಮಿಕರಿಗೆ ಪಾಲಿಕೆಯಿಂದಲೇ ನೇರ ವೇತನ ಪಾವತಿಗೆ ಕ್ರಮ:… ಕ್ರೆಡಲ್‌ನಿಂದ ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನಾಚರಣೆ: ಚಿತ್ರ ಬಿಡಿಸಿದ ಪ್ರೌಢಶಾಲೆ ಮಕ್ಕಳು

ಇತ್ತೀಚಿನ ಸುದ್ದಿ

ಕಲಬುರ್ಗಿಯಲ್ಲಿ ಟೆಕ್ಸ್ ಟೈಲ್ ಪಾರ್ಕ್ | ಮುಂದಿನ ತಿಂಗಳು ಉನ್ನತ ಮಟ್ಟದ ಸಭೆ: ಬಸವರಾಜ ಬೊಮ್ಮಾಯಿ

24/12/2025, 21:57

ಕಲಬುರಗಿ(reporterkarnataka.com): ತಾವು ಸಿಎಂ ಆಗಿದ್ದಾಗ ಕಲಬುರ್ಗಿ ಜಿಲ್ಲೆಯಲ್ಲಿ ಲಕ್ಷ ಜನರಿಗೆ ಉದ್ಯೋಗವಕಾಶ ಕಲ್ಪಿಸುವ ಮಹತ್ವದ ಪಿಎಂ ಮಿತ್ರ ಮೆಗಾ ಟೆಕ್ಸ್ ಟೈಲ್ ಪಾರ್ಕ್ ಗೆ ಅಡಿಗಲ್ಲು ಹಾಕಲಾಗಿದೆ. ಆದರೆ, ರಾಜ್ಯ ಸರ್ಕಾರದ ಇಚ್ಚಾಶಕ್ತಿ ಕೊರತೆಯಿಂದ ಯೋಜನೆ ಸಾಕಾರಗೊಳ್ಳುತ್ತಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಅಸಮಾಧಾನ ಹೊರ ಹಾಕಿದರು.
ಕಲಬುರ್ಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಮುಖವಾಗಿ ರಾಜ್ಯ ಸರ್ಕಾರದ ಆಸಕ್ತಿ ಮೇರೆಗೆ ಆ್ಯಂಕರ್ ಇಂಡಸ್ಟ್ರೀಸ್ ಬರಬೇಕಿತ್ತು. ಭೂಮಿ ಸಹ ನೀಡಲಾಗಿದ್ದರೂ ಜತೆಗೆ ಕಾರ್ಯಾರಂಭಕ್ಕೆ ಅಂತಹ ಅಡ್ಡಿ ಆತಂಕಗಳಿರಲಿಲ್ಲ. ಈ ಕುರಿತು ಈಗಾಗಲೇ ರಾಜ್ಯದ ಜವಳಿ ಸಚಿವ ಶಿವಾನಂದ ಪಾಟೀಲ್ ಅವರೊಂದಿಗೆ ಮಾತನಾಡಲಾಗಿದೆ. ಪ್ರಮುಖವಾಗಿ ತಾವು ಸಂಸತ್ತಿನ ಕಾರ್ಮಿಕ, ಜವಳಿ ಮತ್ತು ಕೌಶಾಲ್ಯಾಭಿವೃದ್ದಿ ಸ್ಥಾಯಿ ಸಮಿತಿ ಅಧ್ಯಕ್ಷರಾಗಿದ್ದು, ಹೀಗಾಗಿ ಮುಂದಿನ ತಿಂಗಳು ಬೆಂಗಳೂರಿನಲ್ಲಿ ಇದಕ್ಕೆ ಸಂಬಂಧಸಿದಂತೆ ಉನ್ನತ ಮಟ್ಟದ ಸಭೆ ನಡೆಸಲಾಗುವುದು ಎಂದು ತಿಳಿಸಿದರು.
ಸಭೆಯಲ್ಲಿ ಸಚಿವರಾದ ಶಿವಾನಂದ ಪಾಟೀಲ್, ಕೌಶಲ್ಯಾಭಿವೃದ್ಧಿ ಸಚಿವ ಡಾ. ಶರಣಪ್ರಕಾಶ ಪಾಟೀಲ್, ಕೇಂದ್ರದ ಜವಳಿ ಸಚಿವಾಲಯದ ಹಿರಿಯ ಅಧಿಕಾರಿಗಳು ಹಾಗೂ ರಾಜ್ಯದ ಅಧಿಕಾರಿಗಳು ಪಾಲ್ಗೊಳ್ಳಲಿದ್ದು, ಇಲ್ಲಿಯವರೆಗೆ ಆಗಿರುವ ಕಾರ್ಯ ಪರಿಶೀಲನೆ ಜತೆಗೆ ಮುಂದೆ ಆಗಬೇಕಿರುವ ಕಾರ್ಯಗಳ ಕುರಿತಾಗಿ ಅವಲೋಕನ ನಡೆಸಲಾಗುವುದು. ರಾಜ್ಯ ಸರ್ಕಾರ ತನ್ನ ಕಾರ್ಯಗಳನ್ನು ಪೂರ್ಣಗೊಳಿಸಿದ್ದಲ್ಲಿ ಕೇಂದ್ರ ಸರ್ಕಾರ ತನ್ನೆಲ್ಲ ಸೌಕರ್ಯಗಳನ್ನು ಕಲ್ಪಿಸಿ ಯೋಜನೆ ಸಂಪೂರ್ಣ ಕಾರ್ಯಕ್ಕೆ ಕೈ ಜೋಡಿಸುತ್ತದೆ ಎಂದು ತಿಳಿಸಿದರು.

*ಎಲ್ಲೇ ಮೀರಿದ ಅಕ್ರಮ:*
ರಾಜ್ಯದಲ್ಲಿ ಅಕ್ರಮಗಳು ಸಹ ವ್ಯಾಪಕಗೊಂಡು ಸಮಾಜದ ಸ್ವಾಸ್ಥ್ಯ ಹಾಳಾಗುತ್ತಿದೆ. ಅಕ್ರಮ ಮದ್ಯ ಎಲ್ಲೆಡೆ ಮಾರಾಟ ಒಂದೇಡೆಯಾದರೆ, ಮಟಕಾ ಜೂಜಾಟಕ್ಕೆ ಅಂಕೆ ಇಲ್ಲದಂತಾಗಿದೆ. ಪೊಲೀಸರೇ ಮುಂದೆ ನಿಂತು ಇದನ್ನೆಲ ಮಾಡಿಸುತ್ತಿದ್ದಾರೆ ಹಾಗೂ ದಂಧೆಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ವರ್ಗಾವಣೆಗೆ ಹಣ ಕ್ರೋಢಿಕರಿಸಲು ಪೊಲೀಸರು ಇಂತಹ ಅಕ್ರಮಗಳನ್ನು ತಡೆಯಲು ಮುಂದಾಗುತ್ತಿಲ್ಲ ಎಂದು ಬೊಮ್ಮಾಯಿ ಕಿಡಿ ಕಾರಿದರು.

ಕೇಂದ್ರದ 15ನೇ ಹಣಕಾಸು ಆಯೋಗದಿಂದ ರಾಜ್ಯಕ್ಕೆ ಅನುದಾನ ಬಂದಿಲ್ಲ ಹಾಗೂ ಜೆಜೆಎಂ ಕಾಮಗಾರಿಗೂ ಹಣ ಬಂದಿಲ್ಲ ಎನ್ನಲಾಗುತ್ತದೆ. ಆದರೆ ವಾಸ್ತವವಾಗಿ ಅನುದಾನ ಬಳಕೆ ಪ್ರಮಾಣ ಪತ್ರ ಸಮರ್ಪಕವಾಗಿ ಸಲ್ಲಿಸಿಲ್ಲ ಎಂದು ಮಾಜಿ ಸಿಎಂ ಇದೇ ಸಂದರ್ಭದಲ್ಲಿ ತಿಳಿಸಿದರು.
ಈ ಸಂದರ್ಭದಲ್ಲಿ ಮಾಜಿ ಸಂಸದ ಡಾ. ಉಮೇಶ ಜಾಧವ್, ಶಾಸಕರಾದ ಬಸವರಾಜ ಮತ್ತಿಮಡು, ಶರಣು ಸಲಗರ, ಡಾ. ಸಿದ್ದು ಪಾಟೀಲ್, ಮಾಜಿ ಶಾಸಕರಾದ ದತ್ತಾತ್ರೇಯ ಪಾಟೀಲ್ ರೇವೂರ, ಬಿಜೆಪಿ ಕಲಬುರಗಿ ಜಿಲ್ಲಾಧ್ಯಕ್ಷ ಅಶೋಕ ಬಗಲಿ ಸೇರಿದಂತೆ ಮುಂತಾದವರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು