9:54 AM Friday21 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

Madikeri | ಕತ್ತಲೆಕಾಡು–ಮರಗೋಡು ರಸ್ತೆ ದುರಸ್ತಿಗೆ ಆಗ್ರಹಿಸಿ ನಡೆದ ರಸ್ತೆ ತಡೆ ಪ್ರತಿಭಟನೆ

26/12/2025, 16:11

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಮಡಿಕೇರಿ ತಾಲ್ಲೂಕಿನ ಹದಗೆಟ್ಟ ಕತ್ತಲೆಕಾಡು – ಮರಗೋಡು ರಸ್ತೆಯ ದುಸ್ಥಿತಿಯಿಂದ ಸಾರ್ವಜನಿಕರಿಗೆ ಉಂಟಾಗುತ್ತಿರುವ ತೀವ್ರ ಅನಾನು ಕುಲತೆಯ ಹಿನ್ನೆಲೆಯಲ್ಲಿ ರಸ್ತೆ ದುರಸ್ತಿ ಕಾಮಗಾರಿಯನ್ನು ತಕ್ಷಣ ಕೈಗೊಳ್ಳಬೇಕೆಂದು ಆಗ್ರಹಿಸಿ ಇಂದು ಬೆಳಿಗ್ಗೆ ಮರಗೋಡು ಗ್ರಾಮದಲ್ಲಿ ರಸ್ತೆ ತಡೆ ಹಾಗೂ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು.
ಕತ್ತಲೆಕಾಡು–ಮರಗೋಡು ಮಾರ್ಗದ ರಸ್ತೆ ಸಂಪೂರ್ಣವಾಗಿ ಹದಗೆಟ್ಟಿದ್ದು, ಕಳೆದ 20 ವರ್ಷಗಳಿಂದ ಡಾಂಬರು ಕಾಣೆಯಾಗಿದೆ. ಹಾದಿಯುದ್ಧಕ್ಕೂ ಅಲ್ಲಲ್ಲಿ ಭಾರೀ ಗಾತ್ರದ ಹೊಂಡಗಳಿಂದ ಅವೃತವಾಗಿ ವಾಹನಗಳ ಸಂಚಾರಕ್ಕೆ ತೊಡಕ್ಕಾಗಿದೆ. ಈ ರಸ್ತೆಯ ಅವ್ಯವಸ್ಥೆಯಿಂದಾಗಿ ವಾಹನಗಳು, ವಿದ್ಯಾರ್ಥಿಗಳು, ಕಾರ್ಮಿಕರು, ರೋಗಿಗಳು ಹಾಗೂ ಸಾರ್ವಜನಿಕರು, ವ್ಯಾಪಾರಿಗಳು ಪ್ರತಿದಿನ ಅಪಾಯದ ನಡುವೆ ಬಹು ಪ್ರಯಾಸದಿಂದ ತೀವ್ರ ಸಂಕಷ್ಟದಲ್ಲಿ ಸಂಚರಿಸುವಂತಾಗಿದೆ. ರಸ್ತೆಯನ್ನು ದುರಸ್ತಿಪಡಿಸಿಕೊಡುವಲ್ಲಿ ಸಂಬಂಧಪಟ್ಟ ಇಲಾಖೆ ಹಾಗೂ ಜನಪ್ರತಿನಿಧಿಗಳು ನಿರ್ಲಕ್ಷ್ಯ ಧೋರಣೆ ತಾಳಿದ್ದು, ಇದನ್ನು ಖಂಡಿಸಿ ನಡೆದ ರಸ್ತೆ ತಡೆ ಹಾಗೂ ಪ್ರತಿಭಟನೆಗೆ ವ್ಯಾಪಕ ಬೆಂಬಲ ವ್ಯಕ್ತವಾಯಿತು. ಮರಗೋಡು ವ್ಯಾಪಾರಸ್ಥರು ಅಂಗಡಿ – ಮುಂಗಟ್ಟುಗಳನ್ನು ಮುಚ್ಚಿ ಪ್ರತಿಭಟನೆಗೆ ಸಂಪೂರ್ಣ ಬೆಂಬಲ ಸೂಚಿಸಿದರು.

ರಸ್ತೆ ತಡೆಯ ಪರಿಣಾಮವಾಗಿ ಖಾಸಗಿ ಬಸ್ ಗಳ ಸಂಚಾರ ಸ್ಥಗಿತಗೊಂಡು ಪ್ರಯಾಣಿಕರು ತೊಂದರೆ ಅನುಭವಿಸಬೇಕಾಯಿತು. ಸ್ಥಳಕ್ಕೆ ಮಡಿಕೇರಿ DSP ಸೂರಜ್ ಅವರು ಭೇಟಿ ನೀಡಿ, ಸಾರ್ವಜನಿಕರಿಗೆ ತೊಂದರೆ ಆಗದಂತೆ ಶಾಂತಿಯುತವಾಗಿ ಪ್ರತಿಭಟನೆ ನಡೆಸುವಂತೆ ಸೂಚಿಸಿದರು. ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಬಂದು ಶೀಘ್ರದಲ್ಲಿ ರಸ್ತೆಯನ್ನು ದುರಸ್ತಿಪಡಿಸಿಕೊಡುವ ಭರವಸೆ ನೀಡಲು ಪ್ರತಿಭಟನಾಕಾರರು ಆಗ್ರಹಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು