12:49 AM Wednesday4 - March 2026
ಬ್ರೇಕಿಂಗ್ ನ್ಯೂಸ್
ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು

ಇತ್ತೀಚಿನ ಸುದ್ದಿ

ಕೊಡಗಿನಲ್ಲಿ ಅರಣ್ಯ ರಕ್ಷಕರಿಂದಲೇ ಮರಗಳ ಲೂಟಿ: ಲೋಡರ್ ಬಂಧನ; ನಾಲ್ವರು ಪರಾರಿ

26/12/2025, 19:50

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಇದು ಬೇಲಿಯೇ ಎದ್ದು ಹೊಲ ಮೇಯ್ದoತೆ ಎನ್ನುವ ಗಾದೆ ಮಾತಿನಂತೆ ಕೊಡಗು ಜಿಲ್ಲೆಯಲ್ಲಿ ಅರಣ್ಯ ರಕ್ಷಣೆ ಮಾಡಬೇಕಾದವರು ಬೆಲೆ ಬಾಳುವ ಮರವನ್ನು ಕಳುವು ಮಾಡಿರುವ ಘಟನೆ ನಡೆದಿದೆ. ಈ ಹಿಂದೆ ಸೋಮವಾರಪೇಟೆ ತಾಲ್ಲೂಕಿನ ಕಾಜೂರು ಬಳಿ ಮೀಸಲು ಅರಣ್ಯದಲ್ಲಿ ಮರಗಳ ಕಳ್ಳತನ ಬಗ್ಗೆ ದೂರು ಹಿನ್ನಲೆಯಲ್ಲಿ ಕಾರ್ಯಾಚರಣೆ ನಡೆಸಿದ ಇಲಾಖೆಗೆ ಶಾಕ್ ಆಗಿದ್ದರೆ, ಕಳ್ಳರನ್ನು ಹಿಡಿಯುವ ವೇಳೆ ಸಂಘರ್ಷ ಉಂಟಾಗಿದ್ದು,ಈ ವೇಳೆ ಅಧಿಕಾರಿ ಚಂದ್ರಶೇಖರ್ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ದಾಳಿ ವೇಳೆ ಲೋಡರ್ ಸಂತೋಷ್ ನನ್ನು ಬಂಧಿಸಿದ್ದು ಉಳಿದ ನಾಲ್ವರು ತಲೆ ಮರೆಸಿಕೊಂಡಿದ್ದಾರೆ. ನಾಪತ್ತೆಯಾದ ಎಲ್ಲರೂ ಅರಣ್ಯ ಇಲಾಖೆಯಲ್ಲಿ ಹಂಗಾಮಿ ನೌಕರರು ಎಂದು ತಿಳಿದು ಬಂದಿದೆ. ಸದ್ಯ ಎಡವಾರೆ ಮೀಸಲು ಅರಣ್ಯದಲ್ಲಿ 25 ಮರಗಳು ಕಳುವಾಗಿದ್ದು ಈ ವರೆಗೆ 7 ಮರ ಹಾಗೂ ಪಿಕ್ ಅಪ್ ಅನ್ನು ವಶಕ್ಕೆ ಪಡೆಯಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು