5:51 PM Friday13 - February 2026
ಬ್ರೇಕಿಂಗ್ ನ್ಯೂಸ್
ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ…

ಇತ್ತೀಚಿನ ಸುದ್ದಿ

ಶಿಕ್ಷಕರ ಮಾರ್ಗದರ್ಶನದಲ್ಲಿ ಹಲವು ಸಾಮ್ರಾಜ್ಯಗಳು ನಿರ್ಮಾಣಗೊಂಡಿವೆ: ದುಂಡಪ್ಪಾ ಕೋಮಾರ

05/09/2021, 20:28

ರಾಹುಲ್ ಅಥಣಿ ಬೆಳಗಾವಿ
info.reporterkarnataka@gmail.com

ಶಿಕ್ಷಣ‌ ನೀಡಿ ಜೀವನ ಹಸನಾಗಿದ ಗುರುಗಳಿಗೆ ಒಳ್ಳೆಯ ಸ್ಥಾನ ಕೊಡುವ ನಿಮಿತ್ತ ಶಿಕ್ಷಕರ ದಿನಾಚರಣೆ ಮಾಡಲಾಗುತ್ತಿದೆ. ತಮ್ಮ ಜನ್ಮದಿನಾಚರಣೆಯನ್ನು ಶಿಕ್ಷಕರ ದಿನಾಚರಣೆಯನ್ನಾಗಿ ಆಚರಿಸಿ ಎಂದು ಕರೆ ಕೊಟ್ಟ ಡಾ ಸರ್ವಪಲ್ಲಿ ರಾಧಾಕೃಷ್ಣನ್ ಅವರ ಕಾರ್ಯ ಶ್ಲಾಘನೀಯ. ಉತ್ತಮ ಶಿಕ್ಷಕನಾದವನು ಮೊದಲು ತಾವು ಮಾದರಿಯಾಗಿದ್ದು ನಂತರ ವಿದ್ಯಾರ್ಥಿಳಿಗೆ ಹೇಳಿಕೊಡಬೇಕು ಎಂದು ತಾಲೂಕು ದಂಡಾಧಿಕಾರಿ ದುಂಡಪ್ಪಾ ಕೋಮಾರ ಹೇಳಿದರು.

ಶಿಕ್ಷಕರ ದಿನಾಚರಣೆ ಅಂಗವಾಗಿ ಆಯೋಜಿಸಿದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ನಂತರ ತಾಪಂ ಅಭಿವೃದ್ದಿ ಅಧಿಕಾರಿ ಶೇಖರ ಕರಬಸಪ್ಪಗೋಳ ಮಾತನಾಡಿ, ಮೊದಲಿನಗಿಂತ ಇವಾಗ ಶಿಕ್ಷಣ ವ್ಯವಸ್ಥೆ ಹೆಚ್ಚು ಸುಧಾರಿತವಾಗಿದೆ. ಸದ್ಯ ಶಿಕ್ಷಕರು ಮತ್ತು ಮಕ್ಕಳು ಹೆಚ್ಚೆಚ್ಚು ಚುರುಕಾಗಿದ್ದು ಶಿಕ್ಷಣದಲ್ಲಿ ಹೆಚ್ಚಿನ ಆಸಕ್ತಿ ತೋರುತ್ತಿದ್ದಾರೆಂದರು.

ಅಥಣಿ ಕ್ಷೇತ್ರ ಶಿಕ್ಷಣಾಧಿಕಾರಿ ಜಿ. ಎಸ್. ಖೋತ ಅವರು ಮಾತನಾಡಿ, ಶಿಕ್ಷಕರಿಗೆ ಕೊರೊನಾದಿಂದ ಕಲಿಕೆಯಲ್ಲಿ ಉಂಟಾದ ನ್ಯೂನ್ಯತೆಗಳನ್ನು ಭರ್ತಿ ಮಾಡುವ ಸವಾಲು ಎದುರಾಗಿವೆ, ಎಲ್ಲ ಸವಾಲು ಮೀರಿ ನಾವು ನಮ್ಮ ವೃತ್ತಿಯನ್ನು ಪ್ರಾಮಾಣಿಕತೆಯಿಂದ ಸೇವೆ ಸಲ್ಲಿಸದರೆ ನಮ್ಮ ವೃತ್ತಿ ಸಾರ್ಥಕವಾಗುತ್ತದೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು