9:07 AM Thursday23 - April 2026
ಬ್ರೇಕಿಂಗ್ ನ್ಯೂಸ್
ಪ್ರಧಾನಿ ಮೋದಿಗೆ ಭಯೋತ್ಪಾದಕ ಎಂದು ನಿಂದನೆ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಚುನಾವಣಾ ಆಯೋಗ… ಚಾಮರಾಜನಗರ | ಮಲೆ ಮಹದೇಶ್ವರ ವನ್ಯಜೀವಿ ಧಾಮದ ದಟ್ಟ ಕಾಡಿನಲ್ಲಿ ಮಾನವನ ಅಸ್ಥಿಪಂಜರ… ಅಮಾನತು ಅಂತ್ಯವಲ್ಲ, ಅಬ್ದುಲ್ ಜಬ್ಬಾರ್‌ಗೆ ಇನ್ನೂ ಅವಕಾಶ ಇದೆ: ಸಚಿವ ದಿನೇಶ್ ಗುಂಡೂರಾವ್ ವರ್ಗಾವಣೆ ಆದೇಶವಿದ್ದರೂ ಪೊಲೀಸ್ ಕಮಿಷನರ್ ಕರ್ತವ್ಯದಿಂದ ಬಿಡುಗಡೆಗೊಳಿಸಿಲ್ಲ: ಮಂಗಳೂರಿನಲ್ಲಿ ಪೊಲೀಸ್ ಮಹಾ ನಿರ್ದೇಶಕ… ಕೊಡಗಿನ ಹೋಂಸ್ಟೇಯಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲೀಕ ಸೇರಿ ಇಬ್ಬರ… ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ…

ಇತ್ತೀಚಿನ ಸುದ್ದಿ

ಶಿಕ್ಷಕರ ಮಾರ್ಗದರ್ಶನದಲ್ಲಿ ಹಲವು ಸಾಮ್ರಾಜ್ಯಗಳು ನಿರ್ಮಾಣಗೊಂಡಿವೆ: ದುಂಡಪ್ಪಾ ಕೋಮಾರ

05/09/2021, 20:28

ರಾಹುಲ್ ಅಥಣಿ ಬೆಳಗಾವಿ
info.reporterkarnataka@gmail.com

ಶಿಕ್ಷಣ‌ ನೀಡಿ ಜೀವನ ಹಸನಾಗಿದ ಗುರುಗಳಿಗೆ ಒಳ್ಳೆಯ ಸ್ಥಾನ ಕೊಡುವ ನಿಮಿತ್ತ ಶಿಕ್ಷಕರ ದಿನಾಚರಣೆ ಮಾಡಲಾಗುತ್ತಿದೆ. ತಮ್ಮ ಜನ್ಮದಿನಾಚರಣೆಯನ್ನು ಶಿಕ್ಷಕರ ದಿನಾಚರಣೆಯನ್ನಾಗಿ ಆಚರಿಸಿ ಎಂದು ಕರೆ ಕೊಟ್ಟ ಡಾ ಸರ್ವಪಲ್ಲಿ ರಾಧಾಕೃಷ್ಣನ್ ಅವರ ಕಾರ್ಯ ಶ್ಲಾಘನೀಯ. ಉತ್ತಮ ಶಿಕ್ಷಕನಾದವನು ಮೊದಲು ತಾವು ಮಾದರಿಯಾಗಿದ್ದು ನಂತರ ವಿದ್ಯಾರ್ಥಿಳಿಗೆ ಹೇಳಿಕೊಡಬೇಕು ಎಂದು ತಾಲೂಕು ದಂಡಾಧಿಕಾರಿ ದುಂಡಪ್ಪಾ ಕೋಮಾರ ಹೇಳಿದರು.

ಶಿಕ್ಷಕರ ದಿನಾಚರಣೆ ಅಂಗವಾಗಿ ಆಯೋಜಿಸಿದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ನಂತರ ತಾಪಂ ಅಭಿವೃದ್ದಿ ಅಧಿಕಾರಿ ಶೇಖರ ಕರಬಸಪ್ಪಗೋಳ ಮಾತನಾಡಿ, ಮೊದಲಿನಗಿಂತ ಇವಾಗ ಶಿಕ್ಷಣ ವ್ಯವಸ್ಥೆ ಹೆಚ್ಚು ಸುಧಾರಿತವಾಗಿದೆ. ಸದ್ಯ ಶಿಕ್ಷಕರು ಮತ್ತು ಮಕ್ಕಳು ಹೆಚ್ಚೆಚ್ಚು ಚುರುಕಾಗಿದ್ದು ಶಿಕ್ಷಣದಲ್ಲಿ ಹೆಚ್ಚಿನ ಆಸಕ್ತಿ ತೋರುತ್ತಿದ್ದಾರೆಂದರು.

ಅಥಣಿ ಕ್ಷೇತ್ರ ಶಿಕ್ಷಣಾಧಿಕಾರಿ ಜಿ. ಎಸ್. ಖೋತ ಅವರು ಮಾತನಾಡಿ, ಶಿಕ್ಷಕರಿಗೆ ಕೊರೊನಾದಿಂದ ಕಲಿಕೆಯಲ್ಲಿ ಉಂಟಾದ ನ್ಯೂನ್ಯತೆಗಳನ್ನು ಭರ್ತಿ ಮಾಡುವ ಸವಾಲು ಎದುರಾಗಿವೆ, ಎಲ್ಲ ಸವಾಲು ಮೀರಿ ನಾವು ನಮ್ಮ ವೃತ್ತಿಯನ್ನು ಪ್ರಾಮಾಣಿಕತೆಯಿಂದ ಸೇವೆ ಸಲ್ಲಿಸದರೆ ನಮ್ಮ ವೃತ್ತಿ ಸಾರ್ಥಕವಾಗುತ್ತದೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು