4:39 AM Tuesday21 - April 2026
ಬ್ರೇಕಿಂಗ್ ನ್ಯೂಸ್
ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:… ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಸಂತ್ರಸ್ತರ ಕುಟುಂಬಕ್ಕೆ ಕಡೆಗೂ ಸಿಕ್ತು ಸರ್ಕಾರಿ ನೌಕರಿ… ಎನ್. ಆರ್. ಪುರ | ಭದ್ರಾ ನದಿಯ ಬ್ಯಾಕ್ ವಾಟರ್ ನಲ್ಲಿ ಈಜಲು… ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದಿಂದ ಹೊಸ ಅತಿಥಿಗಳು: ಸಚಿವ ಈಶ್ವರ್ ಖಂಡ್ರೆಯಿಂದ 4 ಚೀತಗಳಿಗೆ…

ಇತ್ತೀಚಿನ ಸುದ್ದಿ

ಹೆಜಮಾಡಿ ನೇಮೋತ್ಸವದಲ್ಲಿ ಸರ ಕಳ್ಳತನ ಪ್ರಕರಣ: ಮೂವರು ಮಹಿಳೆಯರ ಬಂಧನ

27/12/2025, 19:38

ಉಡುಪಿ(reporterkarnataka.com): ಹೆಜಮಾಡಿಯ ಶ್ರೀಬ್ರಹ್ಮ ಬೈದರ್ಕಳ ನೇಮೊತ್ಸದಲ್ಲಿ ವೃದ್ಧೆಯ ಚಿನ್ನದ ಸರ ಕಳವು ಮಾಡಿದ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಪಡುಬಿದ್ರೆ ಪೊಲೀಸರು ಬಂಧಿಸಿದ್ದಾರೆ.
ತಮಿಳುನಾಡು ರಾಜ್ಯದ ಕೃಷ್ಣಗಿರಿ ಮಾರಿಯಮ್ಮ ಬೀದಿಯ ಶೀಥಲ್, ಕಾಳಿಯಮ್ಮ ಹಾಗೂ ಮಾರಿ(40) ಬಂಧಿತ ಆರೋಪಿಗಳು. ಹೆಜಮಾಡಿಯ ಕಮಲ(78) ಎಂಬವರು ಡಿ.24ರಂದು ಮನೆಯ ಬಳಿಯ ಶ್ರೀಬ್ರಹ್ಮ ಬೈದರ್ಕಳ ಗರಡಿಯ ನೇಮೊತ್ಸಕ್ಕೆ ಹೋಗಿದ್ದರು. ದೈವದ ದರ್ಶನ ಮಾಡಿ ನಂತರ ಅಲ್ಲಿಗೆ ಬಂದ ತನ್ನ ಶಾರದಾ ಪೂಜಾರಿ ಎಂಬವರು ಕಮಲ ಅವರ ಕುತ್ತಿಗೆಯಲ್ಲಿ ಚಿನ್ನದ ಸರ ಇಲ್ಲದೆ ಇರುವ ಬಗ್ಗೆ ತಿಳಿಸಿದರು.


ಡಿ.25ರಂದು ಸಂಜೆ ದೇವಸ್ಥಾನದ ಆಡಳಿತ ಮಂಡಳಿಯವರು ಸಿಸಿ ಕ್ಯಾಮೆರಾ ಪರಿಶೀಲಿಸಿದಾಗ ಮೂರು ಅಪರಿಚಿತ ಮಹಿಳೆಯರು ಕಮಲ ಅವರಿಗೆ ಸಹಾಯ ಮಾಡುವ ನೆಪದಲ್ಲಿ ಅವರ ಗಮನಕ್ಕೆ ಬಾರದೆ ಕುತ್ತಿಗೆಯಲ್ಲಿದ್ದ ಸುಮಾರು 3 ಪವನ್ ಚಿನ್ನದ ಸರವನ್ನು ಕಳವು ಮಾಡಿರುವುದು ಕಂಡುಬಂದಿದೆ. ಈ ಬಗ್ಗೆ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅದರಂತೆ ತನಿಖೆ ನಡೆಸಿದ ಪೊಲೀಸರು,ಮೂವರು ಆರೋಪಿಗಳನ್ನು ಪುತ್ತೂರಿನಲ್ಲಿ ಬಂಧಿಸಿದ್ದಾರೆ. ಇವರನ್ನು ಉಡುಪಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ ಪೊಲೀಸರು, ಹೆಚ್ಟಿನ ತನಿಖೆಗಾಗಿ ಪೊಲೀಸ್ ಕಸ್ಟಡಿಗೆ ಪಡೆದು ಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು