10:26 PM Monday6 - July 2026
ಬ್ರೇಕಿಂಗ್ ನ್ಯೂಸ್
ಮರದ ದಿಮ್ಮಿ ಸಾಗಾಟ | ದಸರಾ ಅಂಬಾರಿ ಆನೆ ಕ್ಯಾಪ್ಟನ್ ಅಭಿಮನ್ಯು ದಂತ… ಬೇಲೂರು | SIR ಕರ್ತವ್ಯದ ಒತ್ತಡಕ್ಕೆ ಕುಸಿದು ಬಿದ್ದ ನಿವೃತ್ತಿಯಂಚಿನಲ್ಲಿರುವ 60ರ ಹರೆಯದ… ಕೊಡಗು ಜಿಲ್ಲೆಯಲ್ಲಿ ಅತಿವೃಷ್ಟಿ ಮತ್ತು ಅನಾವೃಷ್ಟಿ ಎದುರಿಸಲು ಸಜ್ಜಾಗಿ: ಮೇಲುಸ್ತುವಾರಿ ಸಚಿವ ಯು.ಟಿ.… ಕಳಸ: ಬೈಕಿಗೆ ಸೈಡ್ ಕೊಡಲು ಹೋಗಿ ತೋಟಕ್ಕೆ ನುಗ್ಗಿದ ಕಾರು; ಪ್ರಯಾಣಿಕರು ಪಾರು ತೀರ್ಥಹಳ್ಳಿ | ಅರಳಾಪುರದ ಕೊಪ್ಪಲು ಗ್ರಾಮದಲ್ಲಿ ಗಾಳಿ ಮಳೆಗೆ ಬಿದ್ದ ಬೃಹತ್ ಮರ:… Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.…

ಇತ್ತೀಚಿನ ಸುದ್ದಿ

ತುಳುನಾಡಿನ ಅಸ್ಮಿತೆ ಕಂಬಳಕ್ಕೆ ಧನಸಹಾಯ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಗ್ರಹ

27/12/2025, 22:45

ಮಂಗಳೂರು(reporterkarnataka.com): ಕಂಬಳ ಎಂಬುದು ಒಂದು ಗ್ರಾಮೀಣ ಕ್ರೀಡೆಯಲ್ಲ; ಕಂಬಳ ಎಂಬುದು ತುಳುನಾಡಿನ ಅಸ್ಮಿತೆ. ಜಾನಪದ ಕ್ರೀಡೆ ಎನಿಸಿದ ಕಂಬಳವು ರಾಜ್ಯದ ಯಾವುದೇ ಭಾಗದಲ್ಲಿ ನಡೆದರೂ ಅದಕ್ಕೆ ಧನಸಹಾಯವನ್ನು ಸರಕಾರ ನೀಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಆಗ್ರಹಿಸಿದ್ದಾರೆ.
ನಗರದ ಬಂಗ್ರ ಕೂಳೂರಿನ ಗೋಲ್ಡ್ ಪಿಂಚ ಸಿಟಿಯಲ್ಲಿ ಆಯೋಜಿಸಿದ 9ನೇ ವರ್ಷದ ಮಂಗಳೂರು ಕಂಬಳದಲ್ಲಿ ಅವರು ಮಾತನಾಡಿದರು. ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಿದ್ದಾಗ ಕರಾವಳಿಯಲ್ಲಿ ಎಲ್ಲೇ ಕಂಬಳ ನಡೆದರೂ 5 ಲಕ್ಷ ಸಹಾಯಧನ ಕೊಡುವ ಪುಣ್ಯದ ಕೆಲಸ ಮಾಡಿದ್ದರು. ಕರಾವಳಿ ಬಗ್ಗೆ ಅವರಿಗೆ ವಿಶೇಷ ಮಮತೆ ಇತ್ತು ಎಂದು ತಿಳಿಸಿದರು.
ಇವತ್ತಿನ ರಾಜಕೀಯ ವ್ಯವಸ್ಥೆಯಡಿ ಕಂಬಳಕ್ಕೆ ಕೂಡ ರಾಜಕೀಯವನ್ನು ಥಳಕು ಹಾಕುತ್ತಿರುವುದು ದುರ್ದೈವ ಎಂದು ಹೇಳಿದರು.
ಕಂಬಳಕ್ಕೆ ಪ್ರೀತಿಯಿಂದ ಕರೆದು ಪ್ರಕಾಶ್ ಶೆಟ್ಟಿ, ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು, ಶಾಸಕ ಮಿತ್ರರು ನನಗೂ ನಾಲ್ಕು ಮಾತನಾಡಲು ಅವಕಾಶ ಮಾಡಿಕೊಟ್ಟಿದ್ದಾರೆ. ಕಂಬಳದ ಪ್ರಾಯೋಜಕರಿಗೆ ಧನ್ಯವಾದಗಳು ಮತ್ತು ಅಭಿನಂದನೆ ತಿಳಿಸುವುದಾಗಿ ಹೇಳಿದರು.


ಕರಾವಳಿ ಭಾಗದ ಎಲ್ಲ ತಂದೆ, ತಾಯಂದಿರು, ಯುವ ಮಿತ್ರರಿಗೆ ಶುಭಾಶಯ ಕೋರಿದರು. ಕಂಬಳವನ್ನು ತಾವೆಲ್ಲರೂ ಸಂತೋಷದಿಂದ ನೋಡಿ ಆನಂದಿಸಿ ಎಂದು ತಿಳಿಸಿದರು. ಸಾಧಕರನ್ನು ಕರೆಸಿ ಅವರಿಗೆ ಸನ್ಮಾನ ಮಾಡಿದ ಕುರಿತು ಸಂತಸ ವ್ಯಕ್ತಪಡಿಸಿದರು.
ಜನ್ಮ ನೀಡಿದ ತುಳುನಾಡಿಗೆ ವಾಪಸ್ ಅವರು ಕೊಡುಗೆ ನೀಡಬೇಕೆಂಬ ಸದುದ್ದೇಶ ಇದರ ಹಿಂದಿದೆ ಎಂದು ಅಭಿಪ್ರಾಯಪಟ್ಟರು.

ಇತ್ತೀಚಿನ ಸುದ್ದಿ

ಜಾಹೀರಾತು