11:56 PM Monday17 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಮೈಸೂರು ಬ್ಲಾಸ್ಟ್‌ ಪ್ರಕರಣ: ಬಲೂನು ಮಾರುವ ಸಲೀಂ ಹೆಸರಿನಲ್ಲಿತ್ತು ಐದೆಕರೆ ಜಮೀನು!

28/12/2025, 11:05

ಗಿರಿಧರ್ ಕೊಂಪುಳಿರ ಮೈಸೂರು

info.reporterkarnataka@gmail.com

ಮೈಸೂರು ಅರಮನೆಯ ಆವರಣದಲ್ಲಿ ಹೀಲಿಯಂ ಸಿಲಿಂಡರ್ ಸ್ಫೋಟ ಸಂಭವಿಸಿ ಮೂವರು ಸಾವನ್ನಪ್ಪಿದ್ದ ಸಂಬಂಧ,ಇದೀಗ ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆ ಚುರುಕುಗೊಳಿಸಲಾಗಿದ್ದು, ಮೃತ ಸಲೀಂ ಬಳಿ ಉತ್ತರ ಪ್ರದೇಶದಲ್ಲಿ 5 ಎಕರೆ ಜಮೀನು ಹೊಂದಿದ್ದ ಎಂದು ತಿಳಿದು ಬಂದಿದೆ.
ಗುರುವಾರ ರಾತ್ರಿ ಸುಮಾರು 8.30ರ ವೇಳೆಗೆ ಉತ್ತರ ಪ್ರದೇಶದ ಸಲೀಂ ಎಂಬವರು ಅರಮನೆಯ ಜಯಮಾರ್ತಾಂಡ ದ್ವಾರದ ಬಳಿ ಹೀಲಿಯಂ ಬಲೂನ್‌ಗಳನ್ನು ಮಾರಾಟ ಮಾಡುತ್ತಿದ್ದರು. ಬಲೂನ್‌ಗಳಿಗೆ ಗ್ಯಾಸ್ ತುಂಬಿಸುತ್ತಿದ್ದ ಸಂದರ್ಭದಲ್ಲೇ ಏಕಾಏಕಿ ಸಿಲಿಂಡರ್ ಸ್ಫೋಟಗೊಂಡಿದೆ.
ಸ್ಫೋಟಕ ತೀವ್ರತೆಗೆ ಬಲೂನ್ ಬರುತ್ತಿದ್ದ ಸಲೀಂ ಸ್ಥಳದಲ್ಲೇ ಸಾವನ್ನಪ್ಪಿದ್ದ, ಈತನ ಸುತ್ತ ಸಾಕಷ್ಟು ಅನುಮಾನಗಳು ವ್ಯಕ್ತವಾದ ಹಿನ್ನಲೆ ಸಲೀಂನ ಹಿನ್ನಲೆಯನ್ನು ಪತ್ತೆ ಹಚ್ಚಲು ಮುಂದಾಗಿದ್ದಾರೆ. ಅದರಂತೆ ಇದೀಗ ಉತ್ತರ ಪ್ರದೇಶದ ಪೊಲೀಸರೊಂದಿಗೆ ನಿರಂತರ ಸಂಪರ್ಕದಲ್ಲಿದ್ದಾರೆ ಎನ್ನಲಾಗಿದೆ.
ಕನೋಜ್ ಜಿಲ್ಲೆಯ ತೊಫಿಯಾ ಗ್ರಾಮದ ನಿವಾಸಿಯಾದ ಸಲೀಂ ತನ್ನ ಊರಿನಲ್ಲಿ ಕೃಷಿ ವೃತ್ತಿಯಲ್ಲಿ ತೊಡಗಿಸಿಕೊಂಡಿದ್ದ. ಐದು ಎಕರೆ ಜಮೀನಿನ ಮಾಲೀಕರಾಗಿದ್ದ ಅವರು ಹಲವು ವರ್ಷಗಳಿಂದ ಕೃಷಿಯನ್ನೇ ಜೀವನೋಪಾಯವಾಗಿಸಿಕೊಂಡಿದ್ದರು. ಆದರೆ ಕೃಷಿ ಕೆಲಸವನ್ನು ಬಿಟ್ಟು ಸುಮಾರು ಒಂದು ತಿಂಗಳ ಹಿಂದೆ ಸಲೀಂ ಮೈಸೂರಿಗೆ ಬಂದಿದ್ದರು.
ಕೃಷಿ ವೃತ್ತಿಯನ್ನು ತೊರೆದು ಮೈಸೂರಿಗೆ ಬಲೂನ್ ಮಾರಾಟಕ್ಕೆ ಸಲೀಂ ಬಂದಿರುವುದಕ್ಕೆ ಕಾರಣವೇನು ಎಂಬುದರ ಬಗ್ಗೆ ಪೊಲೀಸರು ಇದೀಗ ಅವರ ಕುಟುಂಬಸ್ಥರಿಂದ ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಐದು ಎಕರೆ ಜಮೀನು ಇದ್ದರೂ ಬಲೂನ್ ವ್ಯಾಪಾರಕ್ಕೆ ಇಳಿದಿರುವ ಹಿನ್ನಲೆ ಏನು? ಅದರಲ್ಲೂ ಮೈಸೂರಿನಲ್ಲೇ ಮಾರಾಟ ಆರಂಭಿಸಿದ ಕಾರಣವೇನು ಎಂಬ ಪ್ರಶ್ನೆಗಳಿಗೆ ಇನ್ನೂ ಸ್ಪಷ್ಟ ಉತ್ತರ ಸಿಗಬೇಕಿದೆ.
ಮೈಸೂರಿನಲ್ಲಿ ನಡೆದ ಹಿಲಿಯಂ ಸಿಲಿಂಡರ್ ಸ್ಫೋಟದಿಂದಾಗಿ ಗಂಬೀರವಾಗಿ ಗಾಯಗೊಂಡಿದ್ದ ಲಕ್ಷ್ಮಿಯನ್ನು ಮೈಸೂರಿನ ಕೆ.ಆರ್. ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ಇನ್ನು ಘಟನೆಯಲ್ಲಿ ಲಕ್ಷ್ಮೀ ಅವರ ಮಗಳು ಡಿಂಪಲ್ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ತಾಯಿಯನ್ನು ಕಳೆದುಕೊಂಡ ದುಃಖದಲ್ಲಿ ಪುತ್ರಿ ಕಣ್ಣೀರಿಟ್ಟಿರುವ ದೃಶ್ಯಗಳು ಮನಕಲಕುವಂತಿವೆ.
ಮೈಸೂರಿನಲ್ಲಿ ಹೂವಿನ ವ್ಯಾಪಾರ ನಡೆಸುತ್ತಿದ್ದ ಮಂಜುಳ ಅವರು ವ್ಯಾಪಾರ ಮುಗಿಸಿಕೊಂಡು ಬಸ್ ಹತ್ತಲು ತೆರಳುತ್ತಿದ್ದ ಸಂದರ್ಭದಲ್ಲೇ ಸಂಭವಿಸಿದ ಸಿಲಿಂಡರ್ ಸ್ಫೋಟಕ್ಕೆ ಗುರಿಯಾಗಿದ್ದರು. ಗಾಯಗೊಂಡು ಆಸ್ಪತ್ರೆಗೆ ದಾಖಲಿಸಲಾಗಿದ್ದರೂ, ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು