4:51 PM Friday8 - May 2026
ಬ್ರೇಕಿಂಗ್ ನ್ಯೂಸ್
ರಕ್ತ ಸಂಬಂಧವನ್ನೇ ಮರೆತು ಹಸೆಮಣೆಗೆ ಏರಿದ ಅಕ್ಕ ತಮ್ಮ..! ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು ಕೇವಲ 1 ಮತದಿಂದ ಡಿಎಂಕೆ ಅಭ್ಯರ್ಥಿ ವಿರುದ್ಧ ರೋಚಕ ಗೆಲುವು ಕಂಡ ಟಿವಿಕೆ… ಕೇರಳದಲ್ಲಿ ಯುಡಿಎಫ್‌ ಶತಕ: ಸಿಎಂ ರೇಸ್​ನಲ್ಲಿ ಮೂವರ ಹೆಸರು ಪಶ್ಚಿಮ ಬಂಗಾಳ: ಚುನಾವಣೆ ಫಲಿತಾಂಶ ಬಳಿಕ ಗಲಾಟೆ, ಪೊಲೀಸರಿಂದ ಲಾಠಿಚಾರ್ಜ್

ಇತ್ತೀಚಿನ ಸುದ್ದಿ

ಕೆ.ಸಿ.‌ವೇಣುಗೋಪಾಲ್ ರಾಜ್ಯದ ಸೂಪರ್ ಸಿಎಂ: ಬಿಜೆಪಿಯ ಎನ್.ರವಿಕುಮಾರ್ ಆರೋಪ

30/12/2025, 20:17

ಬೆಂಗಳೂರು(reporterkarnataka.com): ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರು ಕರ್ನಾಟಕದ ಸೂಪರ್ ಸಿಎಂ. ಅವರ ಅಣತಿಯಂತೆ ಈ ಸರ್ಕಾರ ನಡೀತಾ ಇದೆ ಎಂದು ವಿಧಾನ ಪರಿಷತ್ ವಿಪಕ್ಷದ ಮುಖ್ಯ ಸಚೇತಕ ಎನ್.ರವಿಕುಮಾರ್ ಆರೋಪಿಸಿದ್ದಾರೆ.
ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ವೇಣುಗೋಪಾಲ್ ಅವರು ಕಣ್ಣುಬಿಟ್ಟರೆ ಸಾಕು; ಅದರ ಸೂಕ್ಷ್ಮತೆಯನ್ನು ಅರ್ಥ ಮಾಡಿಕೊಂಡು ಈ ಸರ್ಕಾರ ಕೆಲಸ ಮಾಡ್ತಾ ಇದೆ. ಹಾಗಾಗಿ ಇದರ ಸೂಪರ್ ಸಿಎಂ ಕರ್ನಾಟಕ ರಾಜ್ಯದ ಸೂಪರ್ ಸಿಎಂ ಇರುವುದು ದೆಹಲಿಯಲ್ಲಿ. ಇವರು ಅವರ ಅಣತಿಯಂತೆ ಕೆಲಸ ಮಾಡುತ್ತಾರೆ. ಈ ಒಂದು ಪ್ರಜಾಪ್ರಭುತ್ವ ಈ ರೀತಿಯ ಒಂದು ಎಲೆಕ್ಟೆಡ್ ಗವರ್ನಮೆಂಟ್ ಕರ್ನಾಟಕ ರಾಜ್ಯದಲ್ಲಿ ಏನಿದೆ ಇರೋದು ಒಂದೇ ಬೇಗ ಹೊರಟು ಹೋಗೋದು ಒಂದೇ ಎಂದು ಹೇಳಿದರು.
ರಾಜ್ಯ ಸರ್ಕಾರವನ್ನು ನೋಡಿದಾಗ ಅದು ಒಂದು ರೀತಿ ಕರ್ನಾಟಕ ಪಶ್ಚಿಮ ಬಂಗಾಲ ಆಗುತ್ತಿದೆಯೇ ಅನ್ನುವ ಆತಂಕವಾಗುತ್ತಿದೆ. ಪಶ್ಚಿಮ ಬಂಗಾಲಕ್ಕೆ ನುಸುಳುಕೋರರು ದೊಡ್ಡ ಸಂಖ್ಯೆಯಲ್ಲಿ ಬರುತ್ತಿದ್ದಾರೆ. ನಮಗೆ ಆಗ್ತಾ ಇದೆ ಯಾಕೆ ವೆಸ್ಟ್ ಬೆಂಗಾಲ್ ಆಗ್ತಾ ಇದೆಯಾ ಕರ್ನಾಟಕ ಅಂತ ಅನಿಸ್ತಾ ಇದೆ. ನುಸುಳುಕೋರರು ದೊಡ್ಡ ಸಂಖ್ಯೆಯಲ್ಲಿ ಲಕ್ಷಾಂತರ ಸಂಖ್ಯೆಯಲ್ಲಿ ಬಾಂಗ್ಲಾದೇಶದಿಂದ ಬಂದಿದ್ದಾರೆ. ಪಶ್ಚಿಮ ಬಂಗಾಲಕ್ಕೆ ಸುಮಾರು ಒಂದೂವರೆ ಕೋಟಿ ಜನ ಬಂದು ಇರಬಹುದು ಬಾಂಗ್ಲಾದೇಶದವರು. ಇದು ಕಾಂಗ್ರೆಸ್ಸಿನ ಪಾಪದ ಕೂಸು. ಈ ಬಾಂಗ್ಲಾದೇಶದ ನುಸುಳುಕೋರರು ನಮ್ಮ ದೇಶದ ಒಳಗಡೆ ಬರಲು ಪ್ರಾರಂಭ ಆಗಿದ್ದೇ ಕಾಂಗ್ರೆಸ್ಸಿನ ಮೃದುಧೋರಣೆಯಿಂದ ಎಂದು ಟೀಕಿಸಿದರು.
ಅದು ಬಿಹಾರ, ಪಶ್ಚಿಮ ಬಂಗಾಲ, ಅಸ್ಸಾಂನಲ್ಲಿ ಇರಬಹುದು, ಮಣಿಪುರ್, ಮಿಜೋರಂ, ಸಿಕ್ಕಿಂ, ನಾಗಾಲ್ಯಾಂಡ್ ಈ ಏಳು ರಾಜ್ಯಗಳು, ಪಶ್ಚಿಮ ಬಂಗಾಲ, ಬಿಹಾರ್, ಜಾರ್ಖಂಡ್ ಇಲ್ಲೆಲ್ಲ ದೊಡ್ಡ ಸಂಖ್ಯೆಯಲ್ಲಿ ಲಕ್ಷಾಂತರ- ಕೋಟ್ಯಾಂತರ ಸಂಖ್ಯೆಯಲ್ಲಿ ಬಾಂಗ್ಲಾದೇಶದಿಂದ ನಸುಳುಕೋರರು ಬರೋದಕ್ಕೆ ಕಾಂಗ್ರೆಸ್ ಬೆಂಬಲವೇ ಕಾರಣ. ಬಳಿಕ ಕಮ್ಯುನಿಸ್ಟ್ ಪಕ್ಷ. ಅವರು ಪಶ್ಚಿಮ ಬಂಗಾಲವನ್ನು 24 ವರ್ಷ ಕಾಲ ಆಡಳಿತ ಮಾಡಿದ್ದರು. ಆಗಲೂ ಲಕ್ಷಾಂತರ ಸಂಖ್ಯೆಯ ನುಸುಳುಕೋರರು ಬಂದರು. ಈಗ ತೃಣಮೂಲ ಕಾಂಗ್ರೆಸ್ ಮಮತಾ ಬ್ಯಾನರ್ಜಿ ಅಲ್ಲಿ ಫೆನ್ಸಿಂಗ್ ಹಾಕೋದಕ್ಕೂ ಕೂಡ ಮಮತಾ ಬ್ಯಾನರ್ಜಿ ಜಾಗ ಕೊಡ್ತಾ ಇಲ್ಲ ಎಂದು ದೂರಿದರು.
ಪಂಜಾಬ್, ಅಸ್ಸಾಂನಲ್ಲಿ ಕೇಂದ್ರವು ಫೆನ್ಸಿಂಗ್ ಮಾಡಿದ್ದರಿಂದ ನುಸುಳುವಿಕೆ ನಿಂತಿದೆ. ಮತದಾರರು ಬರುವ ಕಾರಣ ಫೆನ್ಸಿಂಗ್ ಮಾಡಲು ಪಶ್ಚಿಮ ಬಂಗಾಲ ಸರಕಾರ ಬಿಡುತ್ತಿಲ್ಲ ಎಂದು ಟೀಕಿಸಿದರು. ಅದೇ ರೀತಿ ಕರ್ನಾಟಕ ರಾಜ್ಯ ಕೂಡ ಒಂದು ಮಾರ್ಗೋಪಾಯವನ್ನ ಕಂಡುಕೊಂಡಿದೆ; ಕೇರಳದಿಂದ ನಮ್ಮ ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಪಾರ್ಟಿಗೆ ವೋಟರ್ಸ್ ಬರ್ತಾ ಇದ್ದಾರೆ ಎಂದು ಆರೋಪಿಸಿದರು.

ಬೆಂಗಳೂರು, ಮಂಗಳೂರು, ಉಡುಪಿ ಇರಬಹುದು; ಭಟ್ಕಳ ಇರಬಹುದು. ದೊಡ್ಡ ಸಂಖ್ಯೆಯಲ್ಲಿ ಬರುತ್ತಿದ್ದಾರೆ. ಹೈವೇ ಪಕ್ಕದಲ್ಲಿ ದೊಡ್ಡ ದೊಡ್ಡ ಸಿಟಿಗಳಲ್ಲಿ ಅಕ್ರಮವಾಗಿ ಜಮೀನುಗಳನ್ನು ತೆಗೆದುಕೊಳ್ತಾ ಇದ್ದಾರೆ. ಸರ್ಕಾರಿ ಜಾಗ ಅವರು ಅತಿಕ್ರಮಿಸುತ್ತಿದ್ದಾರೆ. ಅದೇರೀತಿ ಕೋಗಿಲೆ ಕ್ರಾಸಿನ ಈ ಒಂದು ಜಾಗ. ಅದು ಜನಕ್ಕೆ ಗೊತ್ತಾಗಿ ಸರ್ಕಾರ ಅವರನ್ನ ಖಾಲಿ ಮಾಡಿತು ಎಂದರು. ಮುಂಚೆನೆ ವೇಣುಗೋಪಾಲ್ ಏನಾದರೂ ಫೋನ್ ಮಾಡಿಬಿಟ್ಟಿದ್ರೆ ಖಾಲಿನೇ ಮಾಡಿಸ್ತಿರಲಿಲ್ವೇನೋ ಎಂದು ನುಡಿದರು.
ಕೇರಳದಿಂದ ಬಂದವರಿಗೆ ಯಾವ ಕಾರಣಕ್ಕೋಸ್ಕರ ಮನೆ ಕೊಡುತ್ತೀರಿ? ನಮ್ಮ ಕರ್ನಾಟಕ ರಾಜ್ಯದಲ್ಲಿ ಇರತಕ್ಕಂತವರಿಗೆ ನಿರಾಶ್ರಿತರು ಲಕ್ಷಾಂತರ ಜನ ಇದ್ದಾರೆ. 9 ಲಕ್ಷ ಮನೆಗಳು ಬೇಕು ಅಂತ ಬೇಡಿಕೆ ಇದ್ದರೆ ನೀವು ಕೊಟ್ಟಿರೋದೆ ಇನ್ನು ಮೂರು ಲಕ್ಷ. ಆರು ಲಕ್ಷ ಜನಕ್ಕೆ ಮನೆ ಕೊಟ್ಟಿಲ್ಲ. ಇಂತ ಸಂದರ್ಭದಲ್ಲಿ ಕರ್ನಾಟಕದವರಿಗಿಂತ ಕೇರಳದವರಿಗೆ ಮುಂಚೆನೆ ಜಾಗ ಕೊಡ್ತಾ ಇದ್ದೀರಿ. ಮನೆ ಕೊಡ್ತಾ ಇದ್ದೀರಿ ಮನೆ ಕಟ್ಟಿಸಿಕೊಡ್ತಾ ಇದ್ದೀರಿ ಅಂತ ಅಂದ್ರೆ ಏನು ಅರ್ಥ ಎಂದು ಪ್ರಶ್ನಿಸಿದರು.
ರಾಜ್ಯ ವಕ್ತಾರ ವೆಂಕಟೇಶ ದೊಡ್ಡೇರಿ, ಎಸ್‍ಸಿ ಮೋರ್ಚಾ ಕಾರ್ಯಾಲಯ ಕಾರ್ಯದರ್ಶಿ ಪ್ರಶಾಂತ್ ಅವರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು