10:08 AM Friday20 - September 2024
ಬ್ರೇಕಿಂಗ್ ನ್ಯೂಸ್
ಮಿಸ್ಟರ್ ಕರಾವಳಿ, ಮಿಸ್ ಕರಾವಳಿ ಪ್ರಶಸ್ತಿ ರಂಜಿತ್ ಗಾಣಿಗ ಹಾಗೂ ರಿಷಾ ಟಾನ್ಯಾ… ಮೇಯರ್ ಆಯ್ಕೆ ಸಭೆಯಲ್ಲಿ ಬಿಜೆಪಿ- ಕಾಂಗ್ರೆಸ್ ವಾಕ್ಸಮರ: ಕೊನೆಗೆ ನಿರಾಳ, ಕೂಲ್ ಕೂಲ್!! ತೀರ್ಥಹಳ್ಳಿ: ಸರ್ವಧರ್ಮ ಸಮನ್ವಯತೆಯಲ್ಲಿ ಸಂಭ್ರಮ- ಸಡಗರದ ಈದ್ ಮಿಲಾದ್ ಆಚರಣೆ ನಂಜನಗೂಡು: ಮುನಿರತ್ನ ವಿರುದ್ಧ ಜನ ಸಂಗ್ರಾಮ ಪರಿಷತ್ ಪ್ರತಿಭಟನೆ: ಶಾಸಕ ಸ್ಥಾನದಿಂದ ವಜಾಗೊಳಿಸಲು… ಜೈಪುರದಲ್ಲಿ ಇಂಡಿಯನ್ ಯೂತ್ ಪಾಲಿ೯ಮೆಂಟ್ 27ನೇ ಅಧಿವೇಶನ: ಸ್ಪೀಕರ್ ಖಾದರ್ ಉದ್ಘಾಟನೆ ನಮ್ಮ‌ ಶಾಲೆ‌ ನಮ್ಮ‌ ಜವಾಬ್ದಾರಿ ಕಾರ್ಯಕ್ರಮ ಸರಕಾರಿ ಶಾಲಾ ಮಕ್ಕಳ ಉಜ್ವಲ ಭವಿಷ್ಯಕ್ಕೆ… ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಭಾರೀ ಫೈಟ್: ಮಹಿಳಾ ಅಭ್ಯರ್ಥಿಯಿಂದ ಪ್ರಬಲ ಪೈಪೋಟಿ ಮಹಿಳಾ ಆಯೋಗದ ಅಧ್ಯಕ್ಷೆ ಬಂದ್ರೂ ಅಧಿಕಾರಿಗಳು ನಾಪತ್ತೆ: ರಾಯಲ್ಪಾಡು ಪ್ರಾಥಮಿಕ ಆರೋಗ್ಯ ಕೇಂದ್ರ,… ಅಥಣಿ: ಶೌಚಕ್ಕೆ ಹೋದ ಸಂದರ್ಭದಲ್ಲಿ ಕಾಲು ಜಾರಿ ಕಾಲುವೆಗೆ ಬಿದ್ದು ಯುವಕ ದಾರುಣ… ನಂಜನಗೂಡು: ಭಗೀರಥ ಹಾಗೂ ಕನಕ ಸಮುದಾಯ ಭವನಕ್ಕೆ ಶಾಸಕರಿಂದ ಭೂಮಿ ಪೂಜೆ

ಇತ್ತೀಚಿನ ಸುದ್ದಿ

ಕ್ಲಬ್ ಹೌಸ್ ನಲ್ಲಿ ಇಂದು ಮೊದಲ ಬಾರಿಗೆ ಪೇಜಾವರ ಶ್ರೀ, ಡಾ. ಕೆ. ಕೆ. ಮುಹಮದ್ ಅವರ ಉಪನ್ಯಾಸ; ಅಯೋಧ್ಯೆಯ ಕುರಿತು ವಿಚಾರ ಮಂಥನ

06/09/2021, 11:06

ಮಂಗಳೂರು(reporterkarnataka.com): ‘ಅಯೋಧ್ಯೆ – ರಾಷ್ಟ್ರಜಾಗೃತಿಯ ಅಸ್ಮಿತೆ’ ವಿಷಯದ ಕುರಿತು ವಿಚಾರ ಮಂಥನ ವಿಶೇಷ ಕಾರ್ಯಕ್ರಮ ಸೆಪ್ಟೆಂಬರ್ 6ರಂದು(ಸೋಮವಾರ)ರಂದು ರಾತ್ರಿ 8 ಗಂಟೆಗೆ ಕ್ಲಬ್ ಹೌಸ್ ನಲ್ಲಿ ನಡೆಯಲಿದೆ.

ಶ್ರೀರಾಮಚಂದ್ರನ ಮಂದಿರ ನಿರ್ಮಾಣವಾಗುತ್ತಿರುವ ಈ ಹೊತ್ತಿನಲ್ಲಿ, ಇಡಿಯ ಹೋರಾಟ ರೂಪುಗೊಂಡ ಬಗೆ, ವಿವಾದ ಪರಿಹಾರವಾದ ರೀತಿ, ಪುರಾತತ್ವ ದಾಖಲೆಗಳ ವಿವರಗಳು, ದೇಶದ ಪ್ರತಿಯೊಬ್ಬರಲ್ಲೂ ರಾಷ್ಟ್ರಾಭಿಮಾನ ಜಾಗೃತವಾದ ಬಗೆ.. ಇವೆಲ್ಲವನ್ನೂ ಮೆಲುಕು ಹಾಕುವ ಒಂದು ವಿಶೇಷ ಕಾರ್ಯಕ್ರಮ ದಿನಾಂಕ 6 ಸೆಪ್ಟೆಂಬರ್ 2021 (ಸೋಮವಾರ)ರಂದು ರಾತ್ರಿ 8 ಗಂಟೆಗೆ ಕ್ಲಬ್ ಹೌಸ್ ನಲ್ಲಿ ನಡೆಯಲಿದೆ. 

ಕಾರ್ಯಕ್ರಮದ ವಿವರ ಹೀಗಿದೆ:

ಶೀರ್ಷಿಕೆ: ‘ಅಯೋಧ್ಯೆ – ರಾಷ್ಟ್ರಜಾಗೃತಿಯ ಅಸ್ಮಿತೆ’

ಉಪಸ್ಥಿತಿ ಮತ್ತು ಮುಖ್ಯ ಉಪನ್ಯಾಸ: 

 ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದಂಗಳವರು

(ಶ್ರೀ ಪೇಜಾವರ ಅಧೋಕ್ಷಜ ಮಠ, ಉಡುಪಿ ಹಾಗೂ ವಿಶ್ವಸ್ಥರು, ಶ್ರೀರಾಮಜನ್ಮಭೂಮಿ ತೀರ್ಥ ಟ್ರಸ್ಟ್, ಅಯೋಧ್ಯಾ)

ಉಪಸ್ಥಿತಿ: ಶ್ರೀ ರಾಜಶೇಖರಾನಂದ ಶ್ರೀಪಾದಂಗಳವರು

(ಗುರುಪುರ ಶ್ರೀ ವಿದ್ಯಾಮಾನ್ಯ ತೀರ್ಥ ಸಂಸ್ಥಾನಮ್, ವಜ್ರದೇಹಿ ಮಠ)

ವಿಶೇಷ ಆಮಂತ್ರಿತರು: ಪದ್ಮಶ್ರೀ ಪುರಸ್ಕೃತ ಡಾ. ಕೆ. ಕೆ. ಮುಹಮದ್

(ನಿವೃತ್ತ ಅಧಿಕಾರಿಗಳು, ಪ್ರಾಚ್ಯ ಮತ್ತು ಪುರಾತತ್ವ ಇಲಾಖೆ, ಭಾರತ ಸರಕಾರ)

ವಿಶೇಷ ಆಮಂತ್ರಿತರು: ಶ್ರೀ ಎನ್. ರವಿಕುಮಾರ್

(ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿಗಳು ಹಾಗೂ ವಿಧಾನ ಪರಿಷತ್ ಸದಸ್ಯರು, ಕರ್ನಾಟಕ ಸರಕಾರ)

ಕಾರ್ಯಕ್ರಮವನ್ನು ಅಂಕಣಕಾರ ರೋಹಿತ್ ಚಕ್ರತೀರ್ಥ  ನಡೆಸಿಕೊಡಲಿದ್ದಾರೆ. ಗಾಯಕಿ

ರಮ್ಯಾ ವಾಸಿಷ್ಠ ಪ್ರಾರ್ಥನೆ ಹಾಡಲಿದ್ದಾರೆ. ಸಮಾಜದ ಹತ್ತುಹಲವು ಗಣ್ಯರು ಕಾರ್ಯಕ್ರಮದಲ್ಲಿ ಹಾಜರಿರಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು