1:42 PM Saturday29 - August 2026
ಬ್ರೇಕಿಂಗ್ ನ್ಯೂಸ್
ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ

ಇತ್ತೀಚಿನ ಸುದ್ದಿ

ಪುತ್ತೂರು: ಮನೆಗಳ್ಳತನಕ್ಕೆ ಯತ್ನ; ಆರೋಪಿ ದಂಪತಿಯ ಬಂಧನ; ಬೈಕ್ ವಶ

31/12/2025, 23:02

ಪುತ್ತೂರು(reporterkarnataka.com): ಇಲ್ಲಿನ ಕಸಬಾ ಬಳಿ ಮನೆಯೊಂದರಿಂದ ಕಳ್ಳತನಕ್ಕೆ ಯತ್ನಿಸಿದ ಆರೋಪದ ಮೇಲೆ ದಂಪತಿಯ ಬಂಧಿಸಲಾಗಿದ್ದು, ಅವರು ಬಳಸಿದ ಬೈಕ್ ನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಪುತ್ತೂರು ಕಸಬಾ ನಿವಾಸಿ ಎ.ವಿ ನಾರಾಯಣ (84) ಎಂಬವರ ಮನೆಗೆ ಡಿ. 17ರಂದು ಮಧ್ಯರಾತ್ರಿ, ಯಾರೋ ಇಬ್ಬರು ಅಪರಿಚಿತ ವ್ಯಕ್ತಿಗಳು, ಹೆಲ್ಮೆಟ್ ಧರಿಸಿಕೊಂಡು, ಮುಖಚಹರೆಯನ್ನು ಮರೆಮಾಚಿ ಮನೆಯಿಂದ ಬೆಲೆ ಬಾಳುವ ಸೊತ್ತುಗಳನ್ನು ಕಳ್ಳತನ ಮಾಡಲು ಮನೆಯ ಹಿಂಬಾಗಿಲಿನಿಂದ ಮನೆಗೆ ಪ್ರವೇಶಿಸಿದ್ದರು. ನಾರಾಯಣ ಹಾಗೂ ಅವರ ಪತ್ನಿಯನ್ನು ಬೆದರಿಸಿದ್ದು, ಈ ವೇಳೆ ನಡೆದ ತಳ್ಳಾಟದಲ್ಲಿ ನಾರಾಯಣ ಅವರ ಪತ್ನಿಗೆ ಗಾಯವಾಗಿದ್ದು, ಜೋರಾಗಿ ಕಿರುಚಿದ್ದಾರೆ. ಇದರಿಂದ ಹೆದರಿದ ಆರೋಪಿಗಳು ಮನೆಯ ಹಿಂಬಾಗಿಲಿನ ಮೂಲಕ ಓಡಿ ಪರಾರಿಯಾಗಿರುತ್ತಾರೆ. ನಾರಾಯಣ ಅವರು ನೀಡಿದ ದೂರಿನ ಮೇರೆಗೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ: 127/2025, ಕಲಂ: 307 ಜೊತೆಗೆ 3(5) ಬಿ ಎನ್ ಎಸ್ 2023 ರಂತೆ ಪ್ರಕರಣ ದಾಖಲಿಸಿದ್ದು, ತನಿಖೆ ನಡೆಸಿದ ಪುತ್ತೂರು ನಗರ ಪೊಲೀಸರು ಆರೋಪಿಗಳಾದ ಪುತ್ತೂರು, ಮುಡೂರು ನಿವಾಸಿ (ಪ್ರಸ್ತುತ ಬಾಡಿಗೆ ಮನೆ ವಾಸ:ಪಂಜ) ಕಾರ್ತಿಕ್ ರಾವ್ (31) ಮತ್ತು ಆತನ ಪತ್ನಿ ಕೆ.ಎಸ್. ಸ್ವಾತಿ ರಾವ್ (25)ಎಂಬವರನ್ನು ಬಂಧಿಸಿದ್ದಾರೆ. ಕೃತ್ಯಕ್ಕೆ ಬಳಸಿದ ಮೋಟಾರು ಸೈಕಲ್‌ನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿ ಕಾರ್ತಿಕ್ ರಾವ್ ಸಹಾಯಕ ಅರ್ಚಕರಾಗಿ ಕೆಲಸ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು