8:30 AM Saturday22 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

ನಿಟ್ಟೆ ಯೂನಿವರ್ಸಿಟಿ ಕುಲಪತಿ, ನಿಟ್ಟೆ ಗ್ರೂಪ್ ಆಫ್ ಎಜುಕೇಶನಲ್ ಇನ್‌ಸ್ಟಿಟ್ಯೂಷನ್‌ಗಳ ಸ್ಥಾಪಕ ವಿನಯ ಹೆಗ್ಡೆ ನಿಧನ

01/01/2026, 10:48

ಮಂಗಳೂರು(reporterkarnataka.com): ನಿಟ್ಟೆ ಡೀಮ್ಡ್-ಟು-ಬಿ-ಯೂನಿವರ್ಸಿಟಿ ಕುಲಪತಿ ಮತ್ತು ಕೆ.ಎಸ್. ಹೆಗ್ಡೆ ಚಾರಿಟೇಬಲ್ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಎನ್. ವಿನಯ್ ಹೆಗ್ಡೆ ಅವರು ಇಂದು ಮುಂಜಾನೆ ಹೃದಯಾಘಾತದಿಂದ ಮಂಗಳೂರಿನ ಶಿವಭಾಗ್ ನಲ್ಲಿರುವ ನಿವಾಸದಲ್ಲಿ ನಿಧನರಾದರು. ಶಿವಬಾಗ್‌ನಲ್ಲಿರುವ ‘ಸದಾನಂದ’ ನಿವಾಸದಲ್ಲಿ ಬೆಳಗಿನ ಜಾವ 2 ಗಂಟೆ ಸುಮಾರಿಗೆ ಅವರು ಕೊನೆಯುಸಿರೆಳೆದರು ಎಂದು ಮೂಲಗಳು ತಿಳಿಸಿವೆ.
ಅವರಿಗೆ 86 ವರ್ಷ ವಯಸ್ಸಾಗಿತ್ತು ಮತ್ತು ಅವರು ಪತ್ನಿ ಸುಜಾತಾ ಹೆಗ್ಡೆ, ಪುತ್ರ ವಿಶಾಲ್ ಹೆಗ್ಡೆ ಮತ್ತು ಪುತ್ರಿ ಅಶ್ವಿತಾ ಪೂಂಜಾ ಅವರನ್ನು ಅಗಲಿದ್ದಾರೆ.
ವಿನಯ ಹೆಗ್ಡೆ ಅವರು ಸುಪ್ರೀಂ ಕೋರ್ಟ್‌ನ ಮಾಜಿ ನ್ಯಾಯಾಧೀಶ, ಲೋಕಸಭೆ ಮಾಜಿ ಸ್ಪೀಕರ್ ದಿವಂಗತ ಕೆ.ಎಸ್. ಹೆಗ್ಡೆ ಅವರ ಪುತ್ರ.
ಕರ್ನಾಟಕ ಮಾಜಿ ಲೋಕಾಯುಕ್ತ ಮತ್ತು ಮಾಜಿ ಸುಪ್ರೀಂ ಕೋರ್ಟ್ ನ್ಯಾಯಾಧೀಶ ಎನ್. ಸಂತೋಷ್ ಹೆಗ್ಡೆ ಅವರ ಸಹೋದರರಾಗಿದ್ದರು.
ನಿಟ್ಟೆ ಗ್ರೂಪ್ ಆಫ್ ಎಜುಕೇಶನಲ್ ಇನ್‌ಸ್ಟಿಟ್ಯೂಷನ್‌ಗಳ ಸ್ಥಾಪಕರಾಗಿದ್ದಾರೆ.
ಹೆಗ್ಡೆ ಅವರ ಪಾರ್ಥಿವ ಶರೀರವನ್ನು ಮಧ್ಯಾಹ್ನ 3 ಗಂಟೆಯವರೆಗೆ ಅವರ ನಿವಾಸದಲ್ಲಿ ಸಾರ್ವಜನಿಕ ದರ್ಶನಕ್ಕೆ ಇಡಲಾಗುವುದು. ನಿಟ್ಟೆ ಶಿಕ್ಷಣ ಆವರಣದಲ್ಲಿ ಸಂಜೆ 4.30ರಿಂದ ಸಂಜೆ 6 ಗಂಟೆಗೆ ಅಂತಿಮ ದರ್ಶನಕ್ಕೆ ಇಡಲಾಗುವುದು.

ಇತ್ತೀಚಿನ ಸುದ್ದಿ

ಜಾಹೀರಾತು