1:00 PM Thursday20 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

6322 ಪರಿಶಿಷ್ಟ ಕುಟುಂಬಗಳಿಗೆ ಕೊಳವೆಬಾವಿ ಭಾಗ್ಯ: ಕಾಮಗಾರಿ ಚುರುಕುಗೊಳಿಸಲು ನೀರಾವರಿ ಸಚಿವರ ಖಡಕ್ ಸೂಚನೆ

01/01/2026, 11:54

- ಎಸ್‌ಸಿಪಿ–ಟಿ‌ಎಸ್‌ಪಿ ಯೋಜನೆ 6,322 ಕುಟುಂಬಗಳಿಗೆ ಸೌಲಭ್ಯ

- ಅಂತರ್ಜಲ ವೃದ್ಧಿಗೆ ಆದ್ಯತೆ: ಚೆಕ್ ಡ್ಯಾಮ್ ಮತ್ತು ಏತ ನೀರಾವರಿ ಯೋಜನೆಗೆ ಒತ್ತು

- ಟೆಂಡರ್ ಪ್ರಕ್ರಿಯೆ ಶೀಘ್ರ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಗಡುವು

ಬೆಂಗಳೂರು(reporterkarnataka.com): ರಾಜ್ಯದ ಪರಿಶಿಷ್ಟ ಜಾತಿ ಮತ್ತು ಪಂಗಡದ ರೈತರಿಗೆ ನೀರಾವರಿ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ 2025-26ನೇ ಸಾಲಿನಲ್ಲಿ ಮಂಜೂರಾಗಿರುವ ಕಾಮಗಾರಿಗಳನ್ನು ವಿಳಂಬವಿಲ್ಲದೆ ಚುರುಕುಗೊಳಿಸಬೇಕು ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್. ಭೋಸರಾಜು ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ವಿಕಾಸಸೌಧದ ತಮ್ಮ ಕಚೇರಿಯಲ್ಲಿ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಎಸ್‌ಸಿಪಿ (SCP) ಮತ್ತು ಟಿಎಸ್‌ಪಿ (TSP) ಅನುದಾನದ ಪ್ರಗತಿ ಪರಿಶೀಲನಾ ಸಭೆ ನಡೆಸಿ ಅವರು ಮಾತನಾಡಿದರು.

*6,322 ಕುಟುಂಬಗಳಿಗೆ ಲಾಭ:*
“2025–26ನೇ ಆರ್ಥಿಕ ಸಾಲಿನಲ್ಲಿ ಎಸ್‌ಸಿಪಿ–ಟಿ‌ಎಸ್‌ಪಿ ಅಡಿಯಲ್ಲಿ 3,939 ಪರಿಶಿಷ್ಟ ಜಾತಿ ಮತ್ತು 2,383 ಪರಿಶಿಷ್ಟ ಪಂಗಡದ ಕುಟುಂಬಗಳು ಸೇರಿದಂತೆ ಒಟ್ಟು 6,322 ರೈತ ಕುಟುಂಬಗಳಿಗೆ ವಿದ್ಯುತ್ ಸಂಪರ್ಕದೊಂದಿಗೆ ಕೊಳವೆಬಾವಿ ಸೌಲಭ್ಯ ಒದಗಿಸಲು ಅನುಮೋದನೆ ನೀಡಲಾಗಿದೆ. ಈ ಕಾಮಗಾರಿಗಳ ಟೆಂಡರ್ ಪ್ರಕ್ರಿಯೆಯನ್ನು ಶೀಘ್ರದಲ್ಲಿ ಮುಗಿಸಿ, ನಿಗದಿತ ಸಮಯದಲ್ಲಿ ರೈತರಿಗೆ ಸೌಲಭ್ಯ ತಲುಪಿಸಬೇಕು,” ಎಂದು ಸಚಿವರು ನಿರ್ದೇಶನ ನೀಡಿದರು.

*ಜಲ ಸಂರಕ್ಷಣೆಗೆ ವಿಶೇಷ ಒತ್ತು:*
ಅಂತರ್ಜಲ ಮಟ್ಟವನ್ನು ವೃದ್ಧಿಸುವ ದೃಷ್ಟಿಯಿಂದಲೂ ಸರ್ಕಾರ ಹಲವಾರು ಯೋಜನೆಗಳನ್ನು ರೂಪಿಸಿದೆ. ಪರಿಶಿಷ್ಟ ಸಮುದಾಯಗಳ ಕೃಷಿ ಪ್ರದೇಶಗಳಲ್ಲಿ ಚೆಕ್ ಡ್ಯಾಮ್‌ಗಳ ನಿರ್ಮಾಣ ಮತ್ತು ಸಾಮೂಹಿಕ ಏತ ನೀರಾವರಿ ಯೋಜನೆಗಳಂತಹ ‘ಜಲ ಸಂರಕ್ಷಣಾ ರಚನೆ’ಗಳನ್ನು ನಿರ್ಮಿಸಲು ಆದ್ಯತೆ ನೀಡಲಾಗಿದೆ ಎಂದು ಸಚಿವರು ತಿಳಿಸಿದರು.

*ಕಳೆದ ವರ್ಷದ ಸಾಧನೆ:*
2024–25ನೇ ಸಾಲಿನಲ್ಲಿ ₹365 ಕೋಟಿ ವೆಚ್ಚದಲ್ಲಿ ಒಟ್ಟು 5,371 ರೈತ ಕುಟುಂಬಗಳಿಗೆ (3,388 ಎಸ್‌ಸಿ ಮತ್ತು 1,983 ಎಸ್‌ಟಿ) ಯಶಸ್ವಿಯಾಗಿ ವಿದ್ಯುತ್ ಸಂಪರ್ಕಿತ ಕೊಳವೆಬಾವಿ ಸೌಲಭ್ಯ ಕಲ್ಪಿಸಲಾಗಿದೆ ಎಂದು ಸಚಿವರು ಮಾಹಿತಿ ನೀಡಿದರು.
ಸಭೆಯಲ್ಲಿ ಸಣ್ಣ ನೀರಾವರಿ ಇಲಾಖೆಯ ಕಾರ್ಯದರ್ಶಿಗಳಾದ ಬಿ.ಕೆ. ಪವಿತ್ರ ಹಾಗೂ ಉತ್ತರ ಮತ್ತು ದಕ್ಷಿಣ ವಲಯದ ಮುಖ್ಯ ಅಭಿಯಂತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು