3:35 PM Thursday5 - March 2026
ಬ್ರೇಕಿಂಗ್ ನ್ಯೂಸ್
ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು

ಇತ್ತೀಚಿನ ಸುದ್ದಿ

ಜನಾರ್ಧನ ರೆಡ್ಡಿ ನಿವಾಸದ ಮುಂದೆ ರೆಡ್ಡಿ ಬಣಗಳ ನಡುವೆ ಭಾರೀ ಘರ್ಷಣೆ; ಗುಂಡು ಹಾರಾಟ; ಓರ್ವ ಸಾವು

02/01/2026, 16:00

ಬಳ್ಳಾರಿ(reporterkarnataka.com): ಬ್ಯಾನರ್ ವಿವಾದ ಸಂಬಂಧಿಸಿದಂತೆ ಕಲ್ಯಾಣ ರಾಜ್ಯ ಪ್ರಗತಿ ಪಾರ್ಟಿ ಹಾಗೂ ಕಾಂಗ್ರೆಸ್ ನ ಗುಂಪುಗಳ ನಡುವೆ ಗುರುವಾರ ರಾತ್ರಿ ಭಾರೀ ಘರ್ಷಣೆ ನಡೆದಿದ್ದು, ಗುಂಡು ಹಾರಾಟಕ್ಕೆ ಓರ್ವ ಸಾವನ್ನಪ್ಪಿದ್ದಾರೆ.
ಗಣಿ ಉದ್ಯಮಿ ಮತ್ತು ಶಾಸಕ ಗಾಲಿ ಜನಾರ್ದನ ರೆಡ್ಡಿ ಮತ್ತು ಕಾಂಗ್ರೆಸ್ ಶಾಸಕ ನಾರಾ ಭರತ್ ರೆಡ್ಡಿಗೆ ಸಂಬಂಧಿಸಿದ ಎರಡು ಗುಂಪುಗಳ ನಡುವೆ ಹಿಂಸಾತ್ಮಕ ಘರ್ಷಣೆ ನಡೆದಿದೆ. ಜನಾರ್ಧನ ರೆಡ್ಡಿ ಅವರ ಆಪ್ತನ ಅಂಗರಕ್ಷಕ ಹಾರಿಸಿದ ಗುಂಡಿಗೆ ಕಾಂಗ್ರೆಸ್ ಕಾರ್ಯಕರ್ತ ಎನ್ನಲಾದ ವ್ಯಕ್ತಿಯೊಬ್ಬರು ಕೊನೆಯುಸಿರೆಳೆದಿದ್ದಾರೆ.
ಮೃತರನ್ನು ಕಾಂಗ್ರೆಸ್ ಶಾಸಕ ಭರತ್ ರೆಡ್ಡಿ ಅವರ ಬೆಂಬಲಿಗ ರಾಜಶೇಖರ್ ಎಂದು ಗುರುತಿಸಲಾಗಿದೆ.


ಈ ನಡುವೆ ಕಾಂಗ್ರೆಸ್ ಶಾಸಕ ಭರತ್ ರೆಡ್ಡಿ ಅವರ ಕುಟುಂಬದವರು ತಮ್ಮ ಹತ್ಯೆಗೆ ಸಂಚು ರೂಪಿಸಿದ್ದಾರೆ ಎಂದು ಜನಾರ್ದನ ರೆಡ್ಡಿ ಆರೋಪಿಸಿದ ನಂತರ ಪರಿಸ್ಥಿತಿ ತೀವ್ರಗೊಂಡಿತು. ಘಟನೆಯ ನಂತರ ಪೊಲೀಸರು ಮುಂಜಾಗ್ರತಾ ಕ್ರಮವಾಗಿ ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ.
ಪೊಲೀಸರ ಪ್ರಕಾರ, ಜನವರಿ 3ರಂದು ವಾಲ್ಮೀಕಿ ಜಯಂತಿ ಆಚರಿಸಲು ಕಾಂಗ್ರೆಸ್ ಕಾರ್ಯಕರ್ತರು ಬ್ಯಾನರ್‌ಗಳನ್ನು ಅಳವಡಿಸಲು ಯತ್ನಿಸಿದಾಗ ಶಾಸಕ ಜನಾರ್ದನ ರೆಡ್ಡಿ ಅವರ ನಿವಾಸದ ಹೊರಗೆ ಬ್ಯಾನರ್ ಸಂಬಂಧಿತ ವಿಷಯದ ಬಗ್ಗೆ ಘರ್ಷಣೆ ಸಂಭವಿಸಿದೆ. ಜನಾರ್ದನ ರೆಡ್ಡಿ ಬೆಂಬಲಿಗರು ಸ್ಥಾಪನೆಗೆ ವಿರೋಧ ವ್ಯಕ್ತಪಡಿಸಿದರು. ಇದು ಘರ್ಷಣೆಗೆ ಕಾರಣವಾಯಿತು, ನಂತರ ಕಲ್ಲು ತೂರಾಟ ನಡೆಯಿತು.
ಘಟನೆ ತಿಳಿಯುತ್ತಿದ್ದಂತೆ ಮಾಜಿ ಸಚಿವ, ಬಿಜೆಪಿಯ ಹಿರಿಯ ಮುಖಂಡ ಬಿ.ಶ್ರೀರಾಮುಲು ಸ್ಥಳಕ್ಕೆ ದೌಡಾಯಿಸಿದ್ದು, ಕಾಂಗ್ರೆಸ್ ಶಾಸಕ ಭರತ್ ರೆಡ್ಡಿ ಅವರ ಆಪ್ತ ಸತೀಶ್ ರೆಡ್ಡಿ ಕೂಡ ಸ್ಥಳಕ್ಕೆ ಆಗಮಿಸಿದ್ದಾರೆ. ಗುಂಪನ್ನು ಚದುರಿಸಲು ಪೊಲೀಸರು ಲಾಠಿ ಚಾರ್ಜ್ ಮಾಡಿದರೂ, ಘರ್ಷಣೆ ಮುಂದುವರಿಯಿತು.

ಇತ್ತೀಚಿನ ಸುದ್ದಿ

ಜಾಹೀರಾತು