5:33 AM Saturday20 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಕಾಲೇಜುಗಳಲ್ಲಿ ಚುನಾವಣೆ ನಡೆಸುವ ಉದ್ದೇಶ ಇದೆ: ಸಚಿವ ಡಾ. ಶರಣಪ್ರಕಾಶ್‌ ಪಾಟೀಲ್‌

02/01/2026, 21:20

ಬೆಂಗಳೂರು(reporterkarnataka.com): ನಾಯಕತ್ವ ಎನ್ನುವುದು ವಿದ್ಯಾರ್ಥಿ ದಿಸೆಯಿಂದಲೇ ಆರಂಭವಾಗುತ್ತದೆ. ಅನೇಕ ನಾಯಕರು ಕಾಲೇಜು ಹಂತದಿಂದಲೇ ಬೆಳದುಬಂದಿದ್ದಾರೆ. ಈ ನಿಟ್ಟಿನಲ್ಲಿ ಕಾಲೇಜು ಹಂತದಲ್ಲಿ ಚುನಾವಣೆ ಮಾಡುವ ಇಚ್ಛೆ ಇದೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರು ಡಾ. ಶರಣಪ್ರಕಾಶ್ ಪಾಟೀಲ್ ಹೇಳಿದ್ದಾರೆ.
ಕಾರ್ಯಕ್ರಮ ಒಂದರಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಮಿತಿಯ ಸಂಚಾಲಕರೂ ಆಗಿರುವ ಸಚಿವ ಡಾ. ಪಾಟೀಲ್‌, ಜನವರಿ 13ಕ್ಕೆ ಈ ಸಮಿತಿಯ ಮೊದಲ ಸಭೆ ಮಾಡಲಿದ್ದೇವೆ ಎಂದರು.
ಕಾಲೇಜುಗಳಲ್ಲಿ ಚುನಾವಣೆ ನಡೆಸುವ ಸಂಬಂಧ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್‌ ಇತ್ತೀಚೆಗೆ ಸಮಿತಿ ರಚಿಸಿ, ಡಾ. ಶರಣಪ್ರಕಾಶ್‌ ಪಾಟೀಲ್‌ ಅವರನ್ನು ಸಂಚಾಲಕರನ್ನಾಗಿ ನೇಮಿಸಿದ್ದಾರೆ. ಚುನಾವಣೆ ರೂಪುರೇಷೆ ಕುರಿತು ಸಭೆಯಲ್ಲಿ ಚರ್ಚಿಸುತ್ತೇವೆ. ಸಮಿತಿ ಸಭೆಯಲ್ಲಿ ನಿರ್ಧರಿಸಿದ ವಿಷಯಗಳ ಕುರಿತು ವರದಿ ಮಾಡಿ ಕೆಪಿಸಿಸಿ ಅಧ್ಯಕ್ಷರಿಗೆ ಸಲ್ಲಿಸುತ್ತೇವೆ ಎಂದು ತಿಳಿಸಿದರು.
ಕೆಪಿಸಿಸಿ ಅಧ್ಯಕ್ಷರು ನೇಮಿಸಿರುವ ಸಮಿತಿಯಲ್ಲಿ ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್‌, ಮುಖ್ಯ ಸಚೇತಕ ಸಲೀಂ ಅಹಮದ್‌, ಶಾಸಕರಾದ ರಿಜ್ವಾನ್‌ ಅರ್ಷದ್‌, ಬಿ. ಶಿವಣ್ಣ, ವಿಧಾನ ಪರಿಷತ್‌ ಸದಸ್ಯರಾದ ಪುಟ್ಟಣ್ಣ, ಬಸವನಗೌಡ ಬಾದರ್ಲಿ ಹಾಗೂ ಎಚ್‌.ಎಸ್. ಮಂಜುನಾಥ್‌ ಗೌಡ, ಕೀರ್ತಿ ಗಣೇಶ್‌ ಈ ಸಮಿತಿಯಲ್ಲಿ ಇದ್ದಾರೆ.

*ಕಾಲೇಜುಗಳಲ್ಲಿ ಋತುಚಕ್ರ ರಜೆ-ಸಿಎಂ ಆದೇಶ ಅಂತಿಮ*
ಕಾಲೇಜು ವಿದ್ಯಾರ್ಥಿನಿಯಯರು, ವಿವಿ ವಿದ್ಯಾರ್ಥಿನಿಯರಿಗೆ ಋತುಚಕ್ರ ರಜೆ ಕೊಡುವ ಬಗ್ಗೆ ಸಿಎಂ ಸೂಚನೆ ಕೊಟ್ಟರೆ ಮಾಡುತ್ತೇವೆ. ಸಿಎಂ ಆದೇಶವೇ ಅಂತಿಮ ಎಂದು ಡಾ. ಶರಣಪ್ರಕಾಶ್‌ ಪಾಟೀಲ್‌ ತಿಳಿಸಿದರು.
ಎಂಜಿನಿಯರ್ ಮತ್ತು ಮೆಡಿಕಲ್ ಸೀಟು ಶುಲ್ಕ ಹೆಚ್ಚಳ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲಎಂದು ಡಾ. ಪಾಟೀಲ್‌ ಸ್ಪಷ್ಟಪಡಿಸಿದರು

ಇತ್ತೀಚಿನ ಸುದ್ದಿ

ಜಾಹೀರಾತು