9:42 PM Friday2 - January 2026
ಬ್ರೇಕಿಂಗ್ ನ್ಯೂಸ್
ಬಳ್ಳಾರಿ ಅಹಿತಕರ ಘಟನೆಯ ನ್ಯಾಯಾಂಗ ತನಿಖೆ ನಡೆಯಲಿ: ಪ್ರತಿಪಕ್ಷದ ನಾಯಕ ಆರ್.ಅಶೋಕ್ ಆಗ್ರಹ 6322 ಪರಿಶಿಷ್ಟ ಕುಟುಂಬಗಳಿಗೆ ಕೊಳವೆಬಾವಿ ಭಾಗ್ಯ: ಕಾಮಗಾರಿ ಚುರುಕುಗೊಳಿಸಲು ನೀರಾವರಿ ಸಚಿವರ ಖಡಕ್… Kodagu | ಸೋಮವಾರಪೇಟೆ ಮೀಸಲು ಅರಣ್ಯ ಪ್ರದೇಶದಲ್ಲಿ ಬೇಟೆ: ಕೋವಿ ಸಹಿತ ಮೂವರ… ಕೋವಿಡ್ ಸಾವು ಮತ್ತು ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ಅವ್ಯವಹಾರ: ಸರಕಾರಕ್ಕೆ ಅಂತಿಮ ವರದಿ… ಅಪ್ರಾಪ್ತ ಬಾಲಕನಿಂದ ಬೈಕ್ ಚಾಲನೆ: ತಂದೆಗೆ 25 ಸಾವಿರ ರೂ. ದಂಡ ವಿಧಿಸಿದ… ರಾಜ್ಯಕ್ಕೆ ಇಬ್ಬರು ಮುಖ್ಯಮಂತ್ರಿಗಳು: ಮಾಜಿ ಡಿಸಿಎಂ ಗೋವಿಂದ ಕಾರಜೋಳ ಲೇವಡಿ ಕೆ.ಸಿ.‌ವೇಣುಗೋಪಾಲ್ ರಾಜ್ಯದ ಸೂಪರ್ ಸಿಎಂ: ಬಿಜೆಪಿಯ ಎನ್.ರವಿಕುಮಾರ್ ಆರೋಪ ಅಕ್ರಮ ವಲಸಿಗರ ಕುರಿತು ಉನ್ನತ ಮಟ್ಟದ ತನಿಖೆಯಾಗಲಿ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸರ್ಕಾರದ ಜಮೀನು ಅಕ್ರಮ ಒತ್ತುವರಿಯಾದರೆ ಕಂದಾಯ ಇಲಾಖೆ ಹಾಗೂ ಪಾಲಿಕೆ ಅಧಿಕಾರಗಳ ಮೇಲೆ… ಶೂನ್ಯ ಅಡಚಣೆಯೊಂದಿಗೆ ವಿದ್ಯುತ್ ಪೂರೈಕೆಗೆ ಕ್ರಮ: ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ…

ಇತ್ತೀಚಿನ ಸುದ್ದಿ

ಕಾಲೇಜುಗಳಲ್ಲಿ ಚುನಾವಣೆ ನಡೆಸುವ ಉದ್ದೇಶ ಇದೆ: ಸಚಿವ ಡಾ. ಶರಣಪ್ರಕಾಶ್‌ ಪಾಟೀಲ್‌

02/01/2026, 21:20

ಬೆಂಗಳೂರು(reporterkarnataka.com): ನಾಯಕತ್ವ ಎನ್ನುವುದು ವಿದ್ಯಾರ್ಥಿ ದಿಸೆಯಿಂದಲೇ ಆರಂಭವಾಗುತ್ತದೆ. ಅನೇಕ ನಾಯಕರು ಕಾಲೇಜು ಹಂತದಿಂದಲೇ ಬೆಳದುಬಂದಿದ್ದಾರೆ. ಈ ನಿಟ್ಟಿನಲ್ಲಿ ಕಾಲೇಜು ಹಂತದಲ್ಲಿ ಚುನಾವಣೆ ಮಾಡುವ ಇಚ್ಛೆ ಇದೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರು ಡಾ. ಶರಣಪ್ರಕಾಶ್ ಪಾಟೀಲ್ ಹೇಳಿದ್ದಾರೆ.
ಕಾರ್ಯಕ್ರಮ ಒಂದರಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಮಿತಿಯ ಸಂಚಾಲಕರೂ ಆಗಿರುವ ಸಚಿವ ಡಾ. ಪಾಟೀಲ್‌, ಜನವರಿ 13ಕ್ಕೆ ಈ ಸಮಿತಿಯ ಮೊದಲ ಸಭೆ ಮಾಡಲಿದ್ದೇವೆ ಎಂದರು.
ಕಾಲೇಜುಗಳಲ್ಲಿ ಚುನಾವಣೆ ನಡೆಸುವ ಸಂಬಂಧ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್‌ ಇತ್ತೀಚೆಗೆ ಸಮಿತಿ ರಚಿಸಿ, ಡಾ. ಶರಣಪ್ರಕಾಶ್‌ ಪಾಟೀಲ್‌ ಅವರನ್ನು ಸಂಚಾಲಕರನ್ನಾಗಿ ನೇಮಿಸಿದ್ದಾರೆ. ಚುನಾವಣೆ ರೂಪುರೇಷೆ ಕುರಿತು ಸಭೆಯಲ್ಲಿ ಚರ್ಚಿಸುತ್ತೇವೆ. ಸಮಿತಿ ಸಭೆಯಲ್ಲಿ ನಿರ್ಧರಿಸಿದ ವಿಷಯಗಳ ಕುರಿತು ವರದಿ ಮಾಡಿ ಕೆಪಿಸಿಸಿ ಅಧ್ಯಕ್ಷರಿಗೆ ಸಲ್ಲಿಸುತ್ತೇವೆ ಎಂದು ತಿಳಿಸಿದರು.
ಕೆಪಿಸಿಸಿ ಅಧ್ಯಕ್ಷರು ನೇಮಿಸಿರುವ ಸಮಿತಿಯಲ್ಲಿ ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್‌, ಮುಖ್ಯ ಸಚೇತಕ ಸಲೀಂ ಅಹಮದ್‌, ಶಾಸಕರಾದ ರಿಜ್ವಾನ್‌ ಅರ್ಷದ್‌, ಬಿ. ಶಿವಣ್ಣ, ವಿಧಾನ ಪರಿಷತ್‌ ಸದಸ್ಯರಾದ ಪುಟ್ಟಣ್ಣ, ಬಸವನಗೌಡ ಬಾದರ್ಲಿ ಹಾಗೂ ಎಚ್‌.ಎಸ್. ಮಂಜುನಾಥ್‌ ಗೌಡ, ಕೀರ್ತಿ ಗಣೇಶ್‌ ಈ ಸಮಿತಿಯಲ್ಲಿ ಇದ್ದಾರೆ.

*ಕಾಲೇಜುಗಳಲ್ಲಿ ಋತುಚಕ್ರ ರಜೆ-ಸಿಎಂ ಆದೇಶ ಅಂತಿಮ*
ಕಾಲೇಜು ವಿದ್ಯಾರ್ಥಿನಿಯಯರು, ವಿವಿ ವಿದ್ಯಾರ್ಥಿನಿಯರಿಗೆ ಋತುಚಕ್ರ ರಜೆ ಕೊಡುವ ಬಗ್ಗೆ ಸಿಎಂ ಸೂಚನೆ ಕೊಟ್ಟರೆ ಮಾಡುತ್ತೇವೆ. ಸಿಎಂ ಆದೇಶವೇ ಅಂತಿಮ ಎಂದು ಡಾ. ಶರಣಪ್ರಕಾಶ್‌ ಪಾಟೀಲ್‌ ತಿಳಿಸಿದರು.
ಎಂಜಿನಿಯರ್ ಮತ್ತು ಮೆಡಿಕಲ್ ಸೀಟು ಶುಲ್ಕ ಹೆಚ್ಚಳ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲಎಂದು ಡಾ. ಪಾಟೀಲ್‌ ಸ್ಪಷ್ಟಪಡಿಸಿದರು

ಇತ್ತೀಚಿನ ಸುದ್ದಿ

ಜಾಹೀರಾತು