6:08 AM Friday28 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

Mangaluru | ಕಡಲನಗರಿ ಕುಡ್ಲದ ತಣ್ಣೀರುಬಾವಿಯಲ್ಲಿ ಜನವರಿ 9ರಿಂದ ಟ್ರಯಥ್ಲಾನ್

03/01/2026, 13:16

ಮಂಗಳೂರು(reporterkarnataka.com): ಕರಾವಳಿ ಉತ್ಸವದ ಅಂಗವಾಗಿ ತಪಸ್ಯಾ ಫೌಂಡೇಶನ್ ವತಿಯಿಂದ ಮಂಗಳೂರು ಬೀಚ್ ಉತ್ಸವ ಮತ್ತು ಮಂಗಳೂರು ಟ್ರಯಥ್ಲಾನ್ 2026 ಜನವರಿ 9 ರಿಂದ 11 ರವರೆಗೆ ತಣ್ಣೀರುಬಾವಿ ಬೀಚ್‍ನಲ್ಲಿ ಆಯೋಜಿಸಲಾಗುತ್ತಿದೆ. ಮೂಲಭೂತ ಸೌಕರ್ಯಗಳು, ವೈದ್ಯಕೀಯ ಸಹಾಯ ವಿದ್ಯುತ್, ಸಂಚಾರ ನಿರ್ವಹಣೆ, ಸೂಕ್ತ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಬೇಕು ಎಂದು ಮಂಗಳೂರು ಸಹಾಯಕ ಆಯುಕ್ತೆ ಮೀನಾಕ್ಷಿ ಆರ್ಯ ತಿಳಿಸಿದ್ದಾರೆ.
ಅವರು ಮಂಗಳೂರು ಸಹಾಯಕ ಆಯುಕ್ತರ ಕಚೇರಿಯಲ್ಲಿ ನಡೆದ ಟ್ರಯಥ್ಲಾನ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಈ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಗೆ ಯಾವುದೇ ಸಮಸ್ಯೆಗಳಾಗದಂತೆ ಕ್ರಮವಹಿಸಬೇಕು.

ಕಡಲತೀರಗಳನ್ನು ಸುಂದರವಾಗಿರಿಸಲು ಸ್ವಚ್ಛತೆ ಕಾಪಾಡಲು ಅಗತ್ಯ ಕ್ರಮವಹಿಸಲು ಅವರು ಸೂಚಿಸಿದರು. ಉತ್ಸವ ಯಶಸ್ವಿಯಾಗಲು ಅಗತ್ಯವಿರುವ ಎಲ್ಲಾ ಸಿದ್ಧತೆಗಳನ್ನು ನಡೆಸಬೇಕು ಎಂದು ಅವರು ಹೇಳಿದರು.
ಸಭೆಯಲ್ಲಿ ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಪ್ರದೀಪ್ ಡಿಸೋಜಾ, ತಪಸ್ಯಾ ಫೌಂಡೇಶನ್ ಪ್ರತಿನಿಧಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು