2:26 AM Wednesday4 - March 2026
ಬ್ರೇಕಿಂಗ್ ನ್ಯೂಸ್
ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು

ಇತ್ತೀಚಿನ ಸುದ್ದಿ

Kodagu | ಸಾರ್ವಜನಿಕವಾಗಿ ಬಂದೂಕು ಪ್ರದರ್ಶನ: 3 ಮಂದಿ ಆರೋಪಿಗಳ ಬಂಧನ

03/01/2026, 22:57

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ವಿರಾಜಪೇಟೆಯ ಮೂರ್ನಾಡು ಜಂಕ್ಷನ್ ಬಳಿ ಶುಕ್ರವಾರ ರಾತ್ರಿ 11:45 ಸಮಯದಲ್ಲಿ ಸಾರ್ವಜನಿಕ ಸ್ಥಳದಲ್ಲಿ ಬಂದೂಕನ್ನು ಪ್ರದರ್ಶನ ಮಾಡಿದ ಮೂವರನ್ನು ಕೋವಿ ಸಹಿತ ವಿರಾಜಪೇಟೆ ನಗರ ಪೊಲೀಸರು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ .
ಆರೋಪಿಗಳನ್ನು
ಮರಂದೋಡು ಗ್ರಾಮದ ಬಾಳೆಗುಂಡು ಕೆರೆತಟ್ಟು ಪೈಸಾರಿ ನಿವಾಸಿ ಯೋಗೀಶ್ ಎ.ಆರ್.( 23),ನಾಪೋಕ್ಲು ಹೋಬಳಿ
ಕಕ್ಕಟ್ಟೆ ನಿವಾಸಿ ಜಯ ಪಿ.ಎಂ. ಹಾಗೂ ನಾಪೋಕ್ಲು ಹೋಬಳಿ
ಕೊಳಕೇರಿ ಗ್ರಾಮದ ಸೋಮಣ್ಣ ಎಂ. (33) ಎಂದು ಗುರುತಿಸಲಾಗಿದೆ.

*ಘಟನೆಯ ವಿವರ:*
ಶುಕ್ರವಾರ ರಾತ್ರಿ ಹೆಡ್ ಕಾನ್ಸ್ಟೇಬಲ್ ಅಕ್ಷಯ್ ಅವರು ವಿರಾಜಪೇಟೆ ನಗರದಲ್ಲಿ ರಾತ್ರಿ ಗಸ್ತು ತಿರುಗಾಡುತ್ತಿದ್ದ ಸಮಯ 11:45 ಗಂಟೆಗೆ ವೇಳೆಯಲ್ಲಿ ಅಕ್ಷಯ್ ರವರಿಗೆ ಬಾತ್ಮಿದಾರರು ಕರೆ ಮಾಡಿ ಮುರ್ನಾಡ್ ಜಂಕ್ಷನ್ ನಲ್ಲಿ K A 12 C 1331 ಆಟೋ ರಿಕ್ಷಾದಲ್ಲಿ ಇಬ್ಬರು ವ್ಯಕ್ತಿಗಳು ಬಂದೂಕನ್ನು ಹೊರಗೆ ಕಾಣುವಂತೆ ಹಿಡಿದುಕೊಂಡು ಕುಳಿತುಕೊಂಡಿರುವುದಾಗಿ ತಿಳಿಸಿದ ಮೇರೆಗೆ ಕೂಡಲೇ ಅಕ್ಷಯ್ ಮೂರ್ನಾಡು ಜಂಕ್ಷನ್ ಗೆ ಹೋಗಿ ನೋಡಿದಾಗ ಬಾರ್ ಮುಂಭಾಗದಲ್ಲಿ ಆಟೋರಿಕ್ಷಾ ಒಂದು ನಿಲ್ಲಿಸಿಕೊಂಡಿದ್ದು ಆಟೋರಿಕ್ಷಾದಲ್ಲಿ ಇಬ್ಬರು ವ್ಯಕ್ತಿಗಳು ಬಂದೂಕನೊಂದಿಗೆ ಇದ್ದು ನಂತರ ಇಬ್ಬರನ್ನು ವಶಕ್ಕೆ ಪಡೆದು ನೀಡಿದ ದೂರಿನ ಮೇಲೆ ವಿರಾಜಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ಪ್ರಕರಣ ದಾಖಲಾಗಿರುತ್ತದೆ.
ಆರೋಪಿಗಳು ಕುಡಿತದ ಅಮಲಿನಲ್ಲಿ ಒಂಟಿ ನಳಿಕೆಯನ್ನು ಆಟೋರಿಕ್ಷಾದಲ್ಲಿ ಇಟ್ಟುಕೊಂಡು ಓಡಾಡುತ್ತಿರುವುದು ಕಂಡು ಬಂದ ಹಿನ್ನೆಲೆ ಪೊಲೀಸರು ಅವರುಗಳನ್ನು ವಶಕ್ಕೆ ಪಡೆದುಕೊಂಡು ತನಿಖೆ ನಡೆಸುತ್ತಿದ್ದಾರೆ. ಬಂದೂಕನ್ನು ತೆಗೆದುಕೊಂಡು ರಾತ್ರಿ ಸಮಯದಲ್ಲೇ ಆಟೋರಿಕ್ಷಾದಲ್ಲಿ ಸುತ್ತಾಡುತ್ತಿದ್ದ ಉದ್ದೇಶವನ್ನು ಪೊಲೀಸರು ತನಿಖೆಯಿಂದ ತಿಳಿಯಬೇಕಷ್ಟೇ.

ಇತ್ತೀಚಿನ ಸುದ್ದಿ

ಜಾಹೀರಾತು