12:07 PM Thursday2 - July 2026
ಬ್ರೇಕಿಂಗ್ ನ್ಯೂಸ್
ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ… ಮತಾಂತರ ಆರೋಪ: ಕುಶಾಲನಗರದಲ್ಲಿ ಸ್ವಯಂಪ್ರೇರಿತ ಬಂದ್; ಎಲ್ಲವೂ ಸ್ತಬ್ದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಕುಟುಂಬಸ್ಥರಿಂದ ಭೂಕಬಳಿಕೆ ಆರೋಪ: ಮುಖ್ಯಮಂತ್ರಿ ಡಿಕೆಶಿ ಮುಂದೆ ಹಾಸನ… ಗೆಳೆಯ ವೈಶಾಖ್‌ ಆತ್ಮಹತ್ಯೆ ಪ್ರಕರಣ: ಫಸ್ಟ್‌ ರಿಯಾಕ್ಷನ್ ಕೊಟ್ಟ ನಟಿ ಕೃಷಿ ತಾಪಂಡ ರೆಸಾರ್ಟ್ ನ ಈಜುಕೊಳದಲ್ಲಿ ದುರಂತ | 10 ಅಡಿ ಎತ್ತರದಿಂದ 4 ಅಡಿ…

ಇತ್ತೀಚಿನ ಸುದ್ದಿ

Kodagu | ಸಾರ್ವಜನಿಕವಾಗಿ ಬಂದೂಕು ಪ್ರದರ್ಶನ: 3 ಮಂದಿ ಆರೋಪಿಗಳ ಬಂಧನ

03/01/2026, 22:57

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ವಿರಾಜಪೇಟೆಯ ಮೂರ್ನಾಡು ಜಂಕ್ಷನ್ ಬಳಿ ಶುಕ್ರವಾರ ರಾತ್ರಿ 11:45 ಸಮಯದಲ್ಲಿ ಸಾರ್ವಜನಿಕ ಸ್ಥಳದಲ್ಲಿ ಬಂದೂಕನ್ನು ಪ್ರದರ್ಶನ ಮಾಡಿದ ಮೂವರನ್ನು ಕೋವಿ ಸಹಿತ ವಿರಾಜಪೇಟೆ ನಗರ ಪೊಲೀಸರು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ .
ಆರೋಪಿಗಳನ್ನು
ಮರಂದೋಡು ಗ್ರಾಮದ ಬಾಳೆಗುಂಡು ಕೆರೆತಟ್ಟು ಪೈಸಾರಿ ನಿವಾಸಿ ಯೋಗೀಶ್ ಎ.ಆರ್.( 23),ನಾಪೋಕ್ಲು ಹೋಬಳಿ
ಕಕ್ಕಟ್ಟೆ ನಿವಾಸಿ ಜಯ ಪಿ.ಎಂ. ಹಾಗೂ ನಾಪೋಕ್ಲು ಹೋಬಳಿ
ಕೊಳಕೇರಿ ಗ್ರಾಮದ ಸೋಮಣ್ಣ ಎಂ. (33) ಎಂದು ಗುರುತಿಸಲಾಗಿದೆ.

*ಘಟನೆಯ ವಿವರ:*
ಶುಕ್ರವಾರ ರಾತ್ರಿ ಹೆಡ್ ಕಾನ್ಸ್ಟೇಬಲ್ ಅಕ್ಷಯ್ ಅವರು ವಿರಾಜಪೇಟೆ ನಗರದಲ್ಲಿ ರಾತ್ರಿ ಗಸ್ತು ತಿರುಗಾಡುತ್ತಿದ್ದ ಸಮಯ 11:45 ಗಂಟೆಗೆ ವೇಳೆಯಲ್ಲಿ ಅಕ್ಷಯ್ ರವರಿಗೆ ಬಾತ್ಮಿದಾರರು ಕರೆ ಮಾಡಿ ಮುರ್ನಾಡ್ ಜಂಕ್ಷನ್ ನಲ್ಲಿ K A 12 C 1331 ಆಟೋ ರಿಕ್ಷಾದಲ್ಲಿ ಇಬ್ಬರು ವ್ಯಕ್ತಿಗಳು ಬಂದೂಕನ್ನು ಹೊರಗೆ ಕಾಣುವಂತೆ ಹಿಡಿದುಕೊಂಡು ಕುಳಿತುಕೊಂಡಿರುವುದಾಗಿ ತಿಳಿಸಿದ ಮೇರೆಗೆ ಕೂಡಲೇ ಅಕ್ಷಯ್ ಮೂರ್ನಾಡು ಜಂಕ್ಷನ್ ಗೆ ಹೋಗಿ ನೋಡಿದಾಗ ಬಾರ್ ಮುಂಭಾಗದಲ್ಲಿ ಆಟೋರಿಕ್ಷಾ ಒಂದು ನಿಲ್ಲಿಸಿಕೊಂಡಿದ್ದು ಆಟೋರಿಕ್ಷಾದಲ್ಲಿ ಇಬ್ಬರು ವ್ಯಕ್ತಿಗಳು ಬಂದೂಕನೊಂದಿಗೆ ಇದ್ದು ನಂತರ ಇಬ್ಬರನ್ನು ವಶಕ್ಕೆ ಪಡೆದು ನೀಡಿದ ದೂರಿನ ಮೇಲೆ ವಿರಾಜಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ಪ್ರಕರಣ ದಾಖಲಾಗಿರುತ್ತದೆ.
ಆರೋಪಿಗಳು ಕುಡಿತದ ಅಮಲಿನಲ್ಲಿ ಒಂಟಿ ನಳಿಕೆಯನ್ನು ಆಟೋರಿಕ್ಷಾದಲ್ಲಿ ಇಟ್ಟುಕೊಂಡು ಓಡಾಡುತ್ತಿರುವುದು ಕಂಡು ಬಂದ ಹಿನ್ನೆಲೆ ಪೊಲೀಸರು ಅವರುಗಳನ್ನು ವಶಕ್ಕೆ ಪಡೆದುಕೊಂಡು ತನಿಖೆ ನಡೆಸುತ್ತಿದ್ದಾರೆ. ಬಂದೂಕನ್ನು ತೆಗೆದುಕೊಂಡು ರಾತ್ರಿ ಸಮಯದಲ್ಲೇ ಆಟೋರಿಕ್ಷಾದಲ್ಲಿ ಸುತ್ತಾಡುತ್ತಿದ್ದ ಉದ್ದೇಶವನ್ನು ಪೊಲೀಸರು ತನಿಖೆಯಿಂದ ತಿಳಿಯಬೇಕಷ್ಟೇ.

ಇತ್ತೀಚಿನ ಸುದ್ದಿ

ಜಾಹೀರಾತು