9:30 AM Friday7 - November 2025
ಬ್ರೇಕಿಂಗ್ ನ್ಯೂಸ್
ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್… ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್…

ಇತ್ತೀಚಿನ ಸುದ್ದಿ

ಕಾರ್ಲ ಕಜೆ, ಕಾರ್ಲ ಬಿಳಿ ಬೆಂಡೆಯನ್ನು ಕಾರ್ಕಳದ ಬ್ರಾಂಡ್ ಆಗಿ ರಾಜ್ಯಮಟ್ಟಕ್ಕೆ ವಿಸ್ತರಣೆ: ಸಚಿವ ಸುನಿಲ್ ಕುಮಾರ್

06/09/2021, 21:46

ಕಾರ್ಕಳ:  ಕಾರ್ಲ ಕಜೆ ಮತ್ತು ಕಾರ್ಲ ಬಿಳಿ ಬೆಂಡೆಯನ್ನು ಕಾರ್ಕಳದ ಬ್ರಾಂಡ್ ಆಗಿ ರಾಜ್ಯ ಮಟ್ಟಕ್ಕೆ ವಿಸ್ತರಿಸುವ ಪ್ರಯತ್ನ ಮಾಡಲಾಗುತ್ತಿದೆ ಎಂದು ಇಂಧನ, ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ. ಸುನಿಲ್ ಕುಮಾರ್ ಹೇಳಿದರು.

ಇಲ್ಲಿನ ಬಿಜೆಪಿ ಮಹಿಳಾ ಮೋರ್ಚಾದ ವತಿಯಿಂದ ಸೋಮವಾರ ಕಾರ್ಕಳ ವಿಕಾಸ ಕಚೇರಿಯಲ್ಲಿ ಆಯೋಜಿಸಿದ ಬಿಳಿಬೆಂಡೆ ಮೇಳವನ್ನು ಅವರು ಉದ್ಘಾಟಿಸಿ ಮಾತನಾಡಿದರು. 

ಮುಂದಿನ ಅಧಿವೇಶನ ಸಂದರ್ಭದಲ್ಲಿ ಶಾಸಕರಿಗೆ ಊಟದ ವೇಳೆ ಕಾರ್ಕಳ ಬಿಳಿ ಬೆಂಡೆಯ ಖಾದ್ಯವನ್ನು ನೀಡುವ ಮೂಲಕ ರಾಜ್ಯದಾದ್ಯಂತ ಮಾರುಕಟ್ಟೆ ಕಲ್ಪಿಸುವ ಪ್ರಯತ್ನ ಮಾಡಲಾಗುವುದು. ಬಿಳಿ ಬೆಂಡೆಗೆ ಮಾನ್ಯತೆ ಒದಗಿಸುವ ನಿಟ್ಟಿನಲ್ಲಿ ಬೆಂಗಳೂರು ಕೃಷಿ ವಿಜ್ಞಾನ ಕೇಂದ್ರ, ಶಿವಮೊಗ್ಗ ಕೃಷಿ ವಿಶ್ವವಿದ್ಯಾಲಯ ಮೂಲಕ ಪ್ರಯತ್ನಿಸಲಾಗುತ್ತಿದೆ. ಅಧಿಕೃತ ಮಾನ್ಯತೆ ಲಭಿಸಿದರೆ ರೈತರಿಗೆ ಸಬ್ಸಿಡಿ, ಬೆಂಬಲ ದೊರೆಯುವ ಸಾಧ್ಯತೆಯಿದೆ. ಕಾರ್ಕಳದಲ್ಲಿ ಸುಮಾರು 20 ಸಾವಿರ ಕುಟುಂಬಗಳು ಬಿಳೆ ಬೆಂಡೆ  ಬೆಳೆಸುವ ಮೂಲಕ ಬೆಂಡೆ ಕೃಷಿಗೆ ವಿಶೇಷ ಆದ್ಯತೆ ನೀಡಲಾಗಿದೆ ಎಂದರು.

ರೈತರೇ ಸೂಚಿಸಿರುವ ಕಾರ್ಲ ಕಜೆ, ಬಿಳಿ ಬೆಂಡೆಯನ್ನು ಬ್ರಾಂಡ್ ಮಾಡಲಾಗುತ್ತಿದೆ. ಕಾರ್ಕಳ ಜನತೆ, ಸಂಘ-ಸಂಸ್ಥೆಗಳ ಸಹಕಾರದೊಂದಿಗೆ ಇವೆರೆಡು ಬೆಳೆ ವ್ಯಾಪಕ ಪ್ರಸಿದ್ಧಿಗೆ ಬರುವಂತಾಗಿದೆ. ಬ್ರಹ್ಮಾವರ ಕೃಷಿ ವಿಜ್ಞಾನ ಕೇಂದ್ರ ಮತ್ತು ಕಾರ್ಕಳದ ಆಯ್ದ ರೈತರು ಈ ಬಾರಿ ಬಿಳಿ ಬೆಂಡೆ ಬೀಜ ನೀಡಿರುತ್ತಾರೆ. ಮುಂದಿನ ಬಾರಿ ರೈತರು ತಾವಾಗಿಯೇ ಬಿಳಿ ಬೆಂಡೆ ಬೀಜ ಸಂಗ್ರಹಿಸಿ ಬಿತ್ತನೆಗೆ ಸಿದ್ಧರಾಗಬೇಕು. ಮಹಿಳಾ ಮೋರ್ಚಾದ ವತಿಯಿಂದ ಬಿಳಿ ಬೆಂಡೆ ಮೇಳ ಆಯೋಜಿಸುವ ಮೂಲಕ ಬೆಂಡೆಯಿಂದ ಹತ್ತಾರು ಬಗೆಯ ಖಾದ್ಯ ಮಾಡಬಹುದು ಎನ್ನುವುದನ್ನು ತೋರಿಸಿಕೊಟ್ಟಿದ್ದಾರೆ ಎಂದರು.

ರಾಜ್ಯೋತ್ಸವ ಪ್ರಶಸ್ತಿ ವಿಜೇತ ವಕೀಲ ಎಂ.ಕೆ.ವಿಜಯ ಕುಮಾರ್ ಮಾತನಾಡಿ ಮಧುಮೇಹಿಯಾದ ನನಗೆ ಔಷಧೀಯ ಗುಣವಿರುವ ಬಿಳಿಬೆಂಡೆ ರಕ್ಷಿಸಿದೆ ಎಂದರು. 

ಮೋರ್ಚಾದ ಪ್ರಧಾನ ಕಾರ್ಯದರ್ಶಿ ವಿನಯ ಡಿ. ಬಂಗೇರ ಸ್ವಾಗತಿಸಿದರು. ಅಧ್ಯಕ್ಷೆ ಮಾಲಿನಿ ಜೆ. ಶೆಟ್ಟಿ ಪ್ರಾಸ್ತವಿಕವಾಗಿ ಮಾತನಾಡಿದರು. ಬೆಳ್ಮಣ್ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷೆ ಮಲ್ಲಿಕಾ ರಾವ್ ನಿರೂಪಿಸಿದರು. ನಿಟ್ಟೆ ಶಕ್ತಿ ಕೇಂದ್ರದ ಅಧ್ಯಕ್ಷೆ ಮಾನಸ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು