4:19 PM Tuesday3 - March 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು ಬ್ಯಾಚುಲರ್ ಲೈಫ್‌ಗೆ ಕೊಡಗಿನ ಬೆಡಗಿ ಗುಡ್‌ಬೈ: ರಶ್ಮಿಕಾ – ದೇವರಕೊಂಡ ದಂಪತಿಗೆ ಅಂಬಾನಿ,… ಮಸ್ಕಿ ಇರಕಲ್ ಶ್ರೀ ಮಠದ ಜಾತ್ರಾ ಮಹೋತ್ಸವ: ಹಸೆಮಣೆ ಏರಿದ 12 ಜೋಡಿಗಳು ಜವಾಹರಲಾಲ್ ನೆಹರು ತಾರಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂಭ್ರಮ; ವೈಜ್ಞಾನಿಕ ಮನೋಭಾವಕ್ಕೆ ಸಚಿವ…

ಇತ್ತೀಚಿನ ಸುದ್ದಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 8ರಂದು ಲಕ್ಷ ಲಸಿಕಾ ಮೇಳ: 430 ಉಪ ಕೇಂದ್ರಗಳಲ್ಲಿ ವ್ಯವಸ್ಥೆ; ಹೆಚ್ಚುವರಿ ಸಿಬ್ಬಂದಿ ನಿಯೋಜನೆ

07/09/2021, 09:11

ಮಂಗಳೂರು(reporterkarnataka.com): ಕೋವಿಡ್ ಲಸಿಕೆಯ ಲಕ್ಷ ಲಸಿಕಾ ಮೇಳವನ್ನು ಜಿಲ್ಲೆಯಲ್ಲಿ ಸೆ. 8ರ ಬುಧವಾರ ಹಮ್ಮಿಕೊಳ್ಳಲಾಗಿದ್ದು, 430 ಉಪಕೇಂದ್ರಗಳಲ್ಲಿ ಅದಕ್ಕಾಗಿ ಸೂಕ್ತ ವ್ಯವಸ್ಥೆ ಮಾಡಲಾಗಿದೆ. ಇರುವ ಸಿಬ್ಬಂದಿಗಳೊಂದಿಗೆ ಹೆಚ್ಚುವರಿ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ. 

ಪ್ರತಿ ಕೇಂದ್ರದಲ್ಲಿ ಇಬ್ಬರು ಡೇಟಾ ಎಂಟ್ರಿ ಆಪರೇಟರ್ ಸೇರಿದಂತೆ ಅಗತ್ಯವಿರುವ ಸಿಬ್ಬಂದಿಗಳನ್ನು ಈ ಕಾರ್ಯಕ್ಕೆ ನೇಮಿಸಲಾಗಿದೆ. 18 ವರ್ಷ ಮೇಲ್ಪಟ್ಟವರು ಮೊದಲ ಅಥವಾ ಎರಡನೇ ಡೋಸ್ ಲಸಿಕೆಯನ್ನು ಈ ಲಸಿಕಾ ಮೇಳದಲ್ಲಿ ಪಡೆಯಬಹುದಾಗಿದೆ. ಉದ್ಯೋಗಸ್ಥರ ಅನುಕೂಲಕ್ಕಾಗಿ ಬೆಳಿಗ್ಗೆಯಿಂದ ರಾತ್ರಿಯ ವರೆಗೆ ಲಸಿಕೆಯನ್ನು ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಜಿಲ್ಲೆಯ ನಾಗರೀಕರು ಇದರ ಸದುಪಯೋಗ ಪಡೆಯುವಂತೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ತಿಳಿಸಿದರು.

ಜಿಲ್ಲೆಯಲ್ಲಿ ಪಾಸಿಟಿವಿಟಿ ಸೂಚ್ಯಂಕ ಕಡಿಮೆ ಮಾಡಲು ಸರ್ಕಾರ ಹೊರಡಿಸಿರುವ ಮಾರ್ಗಸೂಚಿಗಳಂತೆ ಈ ಬಾರಿಯೂ ಪರಿಸರ ಸ್ನೇಹಿ ಗಣೇಶ ಚತುರ್ಥಿಯನ್ನು ಜಿಲ್ಲೆಯ ಜನತೆ ಆಚರಿಸುವಂತೆ ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವ ಎಸ್. ಅಂಗಾರ ತಿಳಿದರು.

ಮೇಯರ್ ಪ್ರೇಮಾನಂದ ಶೆಟ್ಟಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್, ಮಹಾನಗರ ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್, ಶಾಸಕರಾದ ವೇದವ್ಯಾಸ ಕಾಮತ್, ಭರತ್ ಶೆಟ್ಟಿ, ವಿಧಾನ ಪರಿಷತ್ ಸದಸ್ಯರಾದ ಪ್ರತಾಪ್ ಸಿಂಹ ನಾಯಕ್, ಉಪ ವಿಭಾಗಾಧಿಕಾರಿ ಮದನ್ ಮೋಹನ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕಿಶೋರ್, ಆರೋಗ್ಯ ಇಲಾಖೆಯ ಅಧಿಕಾರಿಗಳು ಸೇರಿದಂತೆ ಸಂಬಂಧಿಸಿದ ಅಧಿಕಾರಿಗಳು ಉಪಸ್ಥಿತರಿದ್ದರು.  

ಇತ್ತೀಚಿನ ಸುದ್ದಿ

ಜಾಹೀರಾತು