2:18 AM Wednesday19 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ನಮ್ಮ ಮೆಟ್ರೋದಲ್ಲಿ ವಿದ್ಯಾರ್ಥಿಗಳಿಗೆ ರಿಯಾಯಿತಿ ಪಾಸ್: ಎಎಪಿ ಯುವ ಘಟಕದಿಂದ ಸಹಿ ಸಂಗ್ರಹಣ ಅಭಿಯಾನ

07/01/2026, 22:55

ಬೆಂಗಳೂರು(reporterkarnataka.com): ನಮ್ಮ ಮೆಟ್ರೋದಲ್ಲಿ ವಿದ್ಯಾರ್ಥಿಗಳಿಗೆ ರಿಯಾಯಿತಿ ದರದಲ್ಲಿ ಪಾಸ್ ನೀಡಬೇಕೆಂದು ಆಗ್ರಹಿಸಿ ಆಮ್ ಆದ್ಮಿ ಪಕ್ಷದ ಯುವ ಘಟಕದ ಸದಸ್ಯರು ವಿದ್ಯಾರ್ಥಿಗಳಿಂದ ಸಹಿ ಸಂಗ್ರಹ ಅಭಿಯಾನವಕ್ಕೆ ಇಂದು ಚಾಲನೆ ನೀಡಿದರು. ಅಭಿಯಾನದ ಆರಂಭವನ್ನು ನಗರದ ಆರ್‌.ಸಿ. ಕಾಲೇಜಿನ ಬಳಿ ನಡೆಸಲಾಯಿತು. ಇದೇ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪಕ್ಷದ ಯುವ ಘಟಕದ ರಾಜ್ಯಾಧ್ಯಕ್ಷ ಲೋಹಿತ್ ಹನುಮಾಪುರ ಮಾತನಾಡಿ ” ಅತ್ಯಂತ ದುಬಾರಿ ವೆಚ್ಚದ ನಮ್ಮ ಮೆಟ್ರೋದಿಂದಾಗಿ ವಿದ್ಯಾರ್ಥಿ ಸಮೂಹ ಸಂಪೂರ್ಣ ಮೆಟ್ರೋ ಅನುಕೂಲವನ್ನು ಪಡೆದುಕೊಳ್ಳಲು ಸಾಧ್ಯವಾಗುತ್ತಿಲ್ಲ. ಬೆಂಗಳೂರಿನ ಸಂಚಾರ ಒತ್ತಡಗಳಿಂದಾಗಿ ಸಮಯಕ್ಕೆ ಸರಿಯಾಗಿ ತಲುಪಲಾಗದೆ ಸಾಕಷ್ಟು ಪರದಾಡುತ್ತಿದ್ದಾರೆ. ಇದರಿಂದಾಗಿ ವಿದ್ಯಾರ್ಥಿಗಳ ಶೈಕ್ಷಣಿಕ ಗುಣಮಟ್ಟವು ಸಹ ಕುಸಿ ಯುತ್ತಿದ್ದು ಈ ಕೂಡಲೇ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ವಿದ್ಯಾರ್ಥಿಗಳಿಗೆ ರಿಯಾಯಿತಿ ದರದಲ್ಲಿ ಪಾಸ್ ಗಳನ್ನು ವಿತರಿಸಬೇಕು. ಇದಕ್ಕಾಗಿ ಸರ್ಕಾರವನ್ನು ಒತ್ತಾಯಿಸಲು ನಾವು ಲಕ್ಷಾಂತರ ವಿದ್ಯಾರ್ಥಿ ಸಮೂಹಗಳಿಂದ ಸಹಿ ಸಂಗ್ರಹಣ ಅಭಿಯಾನವನ್ನು ನಡೆಸುತ್ತಿದ್ದೇವೆ. ಆಗಲಾದರೂ ಸರ್ಕಾರಗಳು ಎಚ್ಚೆತ್ತುಕೊಳ್ಳ ಬೇಕು. ಈ ಕೂಡಲೇ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಧಾವಿಸ ಸಬೇಕಾಗಿದೆ ” ಎಂದು ಅಗ್ರಹಿಸಿದರು.


ಇದೇ ಸಂದರ್ಭದಲ್ಲಿ ಯುವ ಘಟಕದ ಉಪಾಧ್ಯಕ್ಷ ಉಮೇಶ್ ಗೌಡ ಮಾತನಾಡಿ ” ನಾವು ಸತತವಾಗಿ ಬೆಂಗಳೂರಿನ ಎಲ್ಲಾ ಶಾಲಾ ಕಾಲೇಜುಗಳ ಬಳಿ ತೆರಳಿ ಸರ್ಕಾರದ ಮೇಲೆ ಒತ್ತಡ ತರಲು ಸಹಿ ಸಂಗ್ರಹಣೆಯನ್ನು ಮಾಡುತ್ತಿದ್ದೇವೆ. ವಿದ್ಯಾರ್ಥಿ ಸಮೂಹ ಈ ಅಭಿಯಾನಕ್ಕೆ ಸಂಪೂರ್ಣ ಬೆಂಬಲವನ್ನು ಈಗಾಗಲೇ ಸೂಚಿಸುತ್ತಿದ್ದಾರೆ. ಎಲ್ಲರೂ ತಮ್ಮ ತಮ್ಮ ವೈಯಕ್ತಿಕ ಸಾಮಾಜಿಕ ಜಾಲತಾಣಗಳ ಖಾತೆಗಳ ಮೂಲಕ ಸರ್ಕಾರದ ಮೇಲೆ ಒತ್ತಡ ತರಬೇಕು. ಪಕ್ಷಾತೀತವಾಗಿ ಎಲ್ಲ ನಾಯಕರುಗಳು ವಿದ್ಯಾರ್ಥಿಗಳ ಅನುಕೂಲಕ್ಕೆ ಕೂಡಲೇ ಭಾವಿಸಬೇಕು ” ಎಂದು ಒತ್ತಾಯಿಸಿದರು.
ಅಭಿಯಾನದಲ್ಲಿ ಪಕ್ಷದ ಯುವ ಘಟಕದ ಬೆಂಗಳೂರು ನಗರಾಧ್ಯಕ್ಷ ಓಂಕಾರ್ ಮಂಜುನಾಥ್ , ಮುಖಂಡರುಗಳಾದ ನವೀನ್ ಅಯ್ಯರ್, ಇಂದು, ಭಾನುಪ್ರಿಯ, ರೋಹಿತ್ ಸೇರಿದಂತೆ ಅನೇಕರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು