4:34 AM Tuesday4 - August 2026
ಬ್ರೇಕಿಂಗ್ ನ್ಯೂಸ್
ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ ಕಾವೇರಿ ನೀರು ಹಂಚಿಕೆ ವಿವಾದ | ಕಾನೂನು ತಜ್ಞರು, ಪ್ರತಿಪಕ್ಷಗಳ ಸಲಹೆ ಬಳಿಕ…

ಇತ್ತೀಚಿನ ಸುದ್ದಿ

ಮತ್ತೆ ಚಿಣ್ಣರ ಕಲರವ: ಗುಲಾಬಿ ಕೊಟ್ಟು, ಸಿಹಿತಿಂಡಿ ನೀಡಿ ಶಾಲೆಗೆ ಶಿಕ್ಷಕರಿಂದ ಮಕ್ಕಳಿಗೆ ಸ್ವಾಗತ

07/09/2021, 15:30

ದೇವಲಾಪುರ ಜಗದೀಶ್ ನಾಗಮಂಗಲ ಮಂಡ್ಯ

info.reporterkarnataka@gmail.com

ವರ್ಷಗಟ್ಟಲೆ ಶಾಲೆಗೆ ಹಾಜರಾಗದೆ ಮನೆಯಲ್ಲೇ ಇದ್ದು ಕಾಲ ಕಳೆದಿದ್ದ ಮಕ್ಕಳಿಗೆ ಹಬ್ಬದ ವಾತಾವರಣ ನಿರ್ಮಾಣವಾಗಿತ್ತು. ಸಡಗರ-ಸಂಭ್ರಮದಿಂದ 6 ಮತ್ತು 7ನೇ ತರಗತಿಯ ವಿದ್ಯಾರ್ಥಿಗಳು ಶಾಲೆಗೆ ಹಾಜರಾದರು.

ನಾಗಮಂಗಲ ತಾಲೂಕು ದೇವಲಾಪುರ ಹೋಬಳಿ ಸಮೀಪವಿರುವ ತೂಬಿನಕೆರೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ ಇಂದು ಶಾಲಾ ಪ್ರಾರಂಭೋತ್ಸವ ನಡೆಯಿತು. ಶಿಕ್ಷಕರು ಪೋಷಕರ ಒಪ್ಪಿಗೆಯೊಂದಿಗೆ ಮಕ್ಕಳಿಗೆ ಗುಲಾಬಿ ಹೂವು ನೀಡಿ ಸ್ವಾಗತಿಸಿದರು. ನಂತರ ಸಿಹಿತಿಂಡಿ ಕೊಟ್ಟು ಮಕ್ಕಳು ಬಾಯಿ ಚಪ್ಪರಿಸುವಂತೆ ಮಾಡಿದರು.

ಮಕ್ಕಳಿಗೆ ಶಾಲೆಗೆ ಬರುವ ಮುನ್ನ  ಸ್ಯಾನಿಟೈಸರ್ ಮಾಡಿಸಿ ಮಾಸ್ಕ್ ಧರಿಸುವಂತೆ ಸೂಚಿಸಲಾಗಿತ್ತು. ಈ ವ್ಯವಸ್ಥೆಯನ್ನು ಶಾಲೆಯ ಮುಖ್ಯ ಶಿಕ್ಷಕರಾದ ಚನ್ನಬಸವ ಹಾಗೂ ಸಹ ಶಿಕ್ಷಕರಾದ ನವೀನ್ ನೆರವೇರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು