12:49 PM Wednesday28 - January 2026
ಬ್ರೇಕಿಂಗ್ ನ್ಯೂಸ್
ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:… ಸೋಮವಾರಪೇಟೆ ಕಾಜೂರಿನಲ್ಲಿ ಭಾರೀ ಬೆಂಕಿ ಅವಘಡ: ಮನೆಯೊಳಗೆ ನಿದ್ರಿಸುತ್ತಿದ್ದ ಬಾಲಕ ಬಚಾವ್ ಮಾಡಿದ… ಕೊಡಗಿನ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಬದ್ಧ: ಉಸ್ತುವಾರಿ ಸಚಿವ ಬೋಸರಾಜ್ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾರ್ಯಾಲದಲ್ಲಿ ಗಣರಾಜ್ಯೋತ್ಸವ: 130ಕ್ಕೂ ಅಧಿಕ ವಾಹನ ಚಾಲಕಿಯರಿಗೆ… ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ

ಇತ್ತೀಚಿನ ಸುದ್ದಿ

ಯು.ಬಿ.ಶೆಟ್ಟಿ ಪ್ರವರ್ತಿತ ಟ್ರಸ್ಟ್  ವತಿಯಿಂದ ಉಪ್ಪುಂದದಲ್ಲಿ ಶಿಕ್ಷಕರ ದಿನಾಚರಣೆ

07/09/2021, 15:57

ಬೈಂದೂರು (reporterkarnataka.com): ನಗರದ ಯು.ಬಿ.ಶೆಟ್ಟಿ ಪ್ರವರ್ತಿತ ಟ್ರಸ್ಟ್ ನ ವತಿಯಿಂದ ಯು.ಬಿ.ಶೆಟ್ಟಿ ಸಮೂಹ ಶಿಕ್ಷಣ ಸಂಸ್ಥೆ ಬೈಂದೂರು ಹಾಗೂ ಉಪ್ಪುಂದದಲ್ಲಿ ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ದೀಪ ಬೆಳಗಿಸಿ ಮಾತನಾಡಿದ ಯು.ಬಿ‌.ಶೆಟ್ಟಿ, ಶಿಕ್ಷಕರ ಪಾತ್ರ ಮಹತ್ವವಾದದ್ದು, ಭರತ ಭೂಮಿಯಲ್ಲಿ ಗುರುವಿಗೆ ವಿಶೇಷವಾದ ಗೌರವವಿದೆ. ಭವಿಷ್ಯವನ್ನು ರೂಪಿಸುವ ಸಾಮರ್ಥ್ಯ ಸುಸಂಸ್ಕೃತ ವ್ಯಕ್ತಿಯ ಜೀವನ ಹಿರಿಮೆ ಮತ್ತು ಗುರುಕುಲ ಪದ್ಧತಿ ಮೂಲಕ ಗುರು ಪರಂಪರೆ ಬೆಳೆದು ಬಂದ ಹಿನ್ನೆಲೆ ಈ ನೆಲದಲ್ಲಿದೆ ಗುರುಗಳ ಶ್ರಮ ವರ್ಣಿಸಲು ಸಾಧ್ಯವಾಗದ್ದು  ಎಂದು ಹೇಳಿದರು. 

ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಯಶಶ್ರೀ ಶೆಟ್ಟಿ ಮಾತನಾಡಿ, ರಾಧಾಕೃಷ್ಣನ್ ಅವರ ಆದರ್ಶ ವಿಶ್ವಕ್ಕೆ ಶ್ರೇಯಸ್ಸು ನೀಡಿದೆ. ಸಂಸ್ಕಾರಯುತ ಜೀವನ ರೂಪಿಸಬೇಕಾದರೆ ಒಬ್ಬ ಯೋಗ್ಯ ಹಾಗೂ ಯಶಸ್ವಿ ಗುರು ಮುಖ್ಯ. ಸುಸಂಸ್ಕೃತ ಸಮಾಜದ ನಿರ್ಮಾಣ ದಲ್ಲಿ ಗುರುಗಳು ಪಾತ್ರ ಬಹುಮುಖ್ಯವಾಗಿದೆ ಎಂದರು. ಶಿಕ್ಷಕರು ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.


ಈ ಸಂದರ್ಭದಲ್ಲಿ  ಶಿಕ್ಷಣ ಸಂಯೋಜಕ ಸುಬ್ರಹ್ಮಣ್ಯ ಜೋಗಿ, ಮುಖ್ಯ ಶಿಕ್ಷಕಿ ಅಮಿತಾ, ಸಂದೇಶ್ ಕುಮಾರ್ ಶೆಟ್ಟಿ, ರಂಜಿತಾ, ವೀಣಾ, ಆಶಾ ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು