11:19 PM Friday18 - April 2025
ಬ್ರೇಕಿಂಗ್ ನ್ಯೂಸ್
Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ… ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಸಾಧನೆ: ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್… Police Encounter | ಹುಬ್ಬಳ್ಳಿ: 5 ವರ್ಷದ ಬಾಲಕಿಯ ಅಪಹರಿಸಿ ಕೊಲೆ: ಆರೋಪಿ… DCM | ಬಿಜೆಪಿಗರು ತಮ್ಮ ಹೋರಾಟ ಕೇಂದ್ರ ಸರಕಾರದ ವಿರುದ್ಧ ಎಂದು ಬೋರ್ಡ್… CET | ಪಿಯುಸಿ ಅಂಕ ಕಡಿಮೆ ಬಂತೆಂದು ಸಿಇಟಿ ಮಿಸ್ ಮಾಡ್ಕೊಬೇಡಿ: ಕರ್ನಾಟಕ…

ಇತ್ತೀಚಿನ ಸುದ್ದಿ

ಯು.ಬಿ.ಶೆಟ್ಟಿ ಪ್ರವರ್ತಿತ ಟ್ರಸ್ಟ್  ವತಿಯಿಂದ ಉಪ್ಪುಂದದಲ್ಲಿ ಶಿಕ್ಷಕರ ದಿನಾಚರಣೆ

07/09/2021, 15:57

ಬೈಂದೂರು (reporterkarnataka.com): ನಗರದ ಯು.ಬಿ.ಶೆಟ್ಟಿ ಪ್ರವರ್ತಿತ ಟ್ರಸ್ಟ್ ನ ವತಿಯಿಂದ ಯು.ಬಿ.ಶೆಟ್ಟಿ ಸಮೂಹ ಶಿಕ್ಷಣ ಸಂಸ್ಥೆ ಬೈಂದೂರು ಹಾಗೂ ಉಪ್ಪುಂದದಲ್ಲಿ ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ದೀಪ ಬೆಳಗಿಸಿ ಮಾತನಾಡಿದ ಯು.ಬಿ‌.ಶೆಟ್ಟಿ, ಶಿಕ್ಷಕರ ಪಾತ್ರ ಮಹತ್ವವಾದದ್ದು, ಭರತ ಭೂಮಿಯಲ್ಲಿ ಗುರುವಿಗೆ ವಿಶೇಷವಾದ ಗೌರವವಿದೆ. ಭವಿಷ್ಯವನ್ನು ರೂಪಿಸುವ ಸಾಮರ್ಥ್ಯ ಸುಸಂಸ್ಕೃತ ವ್ಯಕ್ತಿಯ ಜೀವನ ಹಿರಿಮೆ ಮತ್ತು ಗುರುಕುಲ ಪದ್ಧತಿ ಮೂಲಕ ಗುರು ಪರಂಪರೆ ಬೆಳೆದು ಬಂದ ಹಿನ್ನೆಲೆ ಈ ನೆಲದಲ್ಲಿದೆ ಗುರುಗಳ ಶ್ರಮ ವರ್ಣಿಸಲು ಸಾಧ್ಯವಾಗದ್ದು  ಎಂದು ಹೇಳಿದರು. 

ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಯಶಶ್ರೀ ಶೆಟ್ಟಿ ಮಾತನಾಡಿ, ರಾಧಾಕೃಷ್ಣನ್ ಅವರ ಆದರ್ಶ ವಿಶ್ವಕ್ಕೆ ಶ್ರೇಯಸ್ಸು ನೀಡಿದೆ. ಸಂಸ್ಕಾರಯುತ ಜೀವನ ರೂಪಿಸಬೇಕಾದರೆ ಒಬ್ಬ ಯೋಗ್ಯ ಹಾಗೂ ಯಶಸ್ವಿ ಗುರು ಮುಖ್ಯ. ಸುಸಂಸ್ಕೃತ ಸಮಾಜದ ನಿರ್ಮಾಣ ದಲ್ಲಿ ಗುರುಗಳು ಪಾತ್ರ ಬಹುಮುಖ್ಯವಾಗಿದೆ ಎಂದರು. ಶಿಕ್ಷಕರು ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.


ಈ ಸಂದರ್ಭದಲ್ಲಿ  ಶಿಕ್ಷಣ ಸಂಯೋಜಕ ಸುಬ್ರಹ್ಮಣ್ಯ ಜೋಗಿ, ಮುಖ್ಯ ಶಿಕ್ಷಕಿ ಅಮಿತಾ, ಸಂದೇಶ್ ಕುಮಾರ್ ಶೆಟ್ಟಿ, ರಂಜಿತಾ, ವೀಣಾ, ಆಶಾ ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು