5:49 AM Friday31 - July 2026
ಬ್ರೇಕಿಂಗ್ ನ್ಯೂಸ್
ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ…

ಇತ್ತೀಚಿನ ಸುದ್ದಿ

ಯು.ಬಿ.ಶೆಟ್ಟಿ ಪ್ರವರ್ತಿತ ಟ್ರಸ್ಟ್  ವತಿಯಿಂದ ಉಪ್ಪುಂದದಲ್ಲಿ ಶಿಕ್ಷಕರ ದಿನಾಚರಣೆ

07/09/2021, 15:57

ಬೈಂದೂರು (reporterkarnataka.com): ನಗರದ ಯು.ಬಿ.ಶೆಟ್ಟಿ ಪ್ರವರ್ತಿತ ಟ್ರಸ್ಟ್ ನ ವತಿಯಿಂದ ಯು.ಬಿ.ಶೆಟ್ಟಿ ಸಮೂಹ ಶಿಕ್ಷಣ ಸಂಸ್ಥೆ ಬೈಂದೂರು ಹಾಗೂ ಉಪ್ಪುಂದದಲ್ಲಿ ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ದೀಪ ಬೆಳಗಿಸಿ ಮಾತನಾಡಿದ ಯು.ಬಿ‌.ಶೆಟ್ಟಿ, ಶಿಕ್ಷಕರ ಪಾತ್ರ ಮಹತ್ವವಾದದ್ದು, ಭರತ ಭೂಮಿಯಲ್ಲಿ ಗುರುವಿಗೆ ವಿಶೇಷವಾದ ಗೌರವವಿದೆ. ಭವಿಷ್ಯವನ್ನು ರೂಪಿಸುವ ಸಾಮರ್ಥ್ಯ ಸುಸಂಸ್ಕೃತ ವ್ಯಕ್ತಿಯ ಜೀವನ ಹಿರಿಮೆ ಮತ್ತು ಗುರುಕುಲ ಪದ್ಧತಿ ಮೂಲಕ ಗುರು ಪರಂಪರೆ ಬೆಳೆದು ಬಂದ ಹಿನ್ನೆಲೆ ಈ ನೆಲದಲ್ಲಿದೆ ಗುರುಗಳ ಶ್ರಮ ವರ್ಣಿಸಲು ಸಾಧ್ಯವಾಗದ್ದು  ಎಂದು ಹೇಳಿದರು. 

ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಯಶಶ್ರೀ ಶೆಟ್ಟಿ ಮಾತನಾಡಿ, ರಾಧಾಕೃಷ್ಣನ್ ಅವರ ಆದರ್ಶ ವಿಶ್ವಕ್ಕೆ ಶ್ರೇಯಸ್ಸು ನೀಡಿದೆ. ಸಂಸ್ಕಾರಯುತ ಜೀವನ ರೂಪಿಸಬೇಕಾದರೆ ಒಬ್ಬ ಯೋಗ್ಯ ಹಾಗೂ ಯಶಸ್ವಿ ಗುರು ಮುಖ್ಯ. ಸುಸಂಸ್ಕೃತ ಸಮಾಜದ ನಿರ್ಮಾಣ ದಲ್ಲಿ ಗುರುಗಳು ಪಾತ್ರ ಬಹುಮುಖ್ಯವಾಗಿದೆ ಎಂದರು. ಶಿಕ್ಷಕರು ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.


ಈ ಸಂದರ್ಭದಲ್ಲಿ  ಶಿಕ್ಷಣ ಸಂಯೋಜಕ ಸುಬ್ರಹ್ಮಣ್ಯ ಜೋಗಿ, ಮುಖ್ಯ ಶಿಕ್ಷಕಿ ಅಮಿತಾ, ಸಂದೇಶ್ ಕುಮಾರ್ ಶೆಟ್ಟಿ, ರಂಜಿತಾ, ವೀಣಾ, ಆಶಾ ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು