10:36 PM Wednesday14 - January 2026
ಬ್ರೇಕಿಂಗ್ ನ್ಯೂಸ್
ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ… ಅಕ್ರಮ ಗಾಂಜಾ ಮಾರಾಟ: ಅಸ್ಸಾಂ ಮೂಲದ ಇಬ್ಬರು ಆರೋಪಿಗಳ ಬಂಧನ

ಇತ್ತೀಚಿನ ಸುದ್ದಿ

ಆರದಿರಲಿ ಬದುಕು ಆರಾಧನಾ ತಂಡದ ನಿರ್ದೇಶಕಿ ಪದ್ಮಶ್ರೀ ಭಟ್ ಗೆ ರಾಣಿ ಅಬ್ಬಕ್ಕ ಪ್ರಶಸ್ತಿ: ಜ.18ರಂದು ಪ್ರದಾನ

14/01/2026, 22:28

ಮಂಗಳೂರು(reporterkarnataka.com): ತುಳುನಾಡಿನ ಅಪ್ರತಿಮ ಹೋರಾಟಗಾರ್ತಿ ಚೌಟ ರಾಣಿ ಅಬ್ಬಕ್ಕ ಅವರ 500ನೇ ಜನ್ಮ ವರ್ಷಾಚರಣೆ ಪ್ರಯುಕ್ತ ಜವನೆರ್ ಬೆದ್ರ ತಂಡ ನೀಡುವ ರಾಣಿ ಅಬ್ಬಕ್ಕ ಪ್ರಶಸ್ತಿಗೆ ಆರದಿರಲಿ ಬದುಕು ಆರಾಧನಾ ತಂಡದ ನಿರ್ದೇಶಕಿ ಪದ್ಮಶ್ರೀ ಭಟ್ ನಿಡ್ಡೋಡಿ ಅವರು ಆಯ್ಕೆಯಾಗಿದ್ದಾರೆ.
ಜನವರಿ 18ರಂದು ಮಧ್ಯಾಹ್ನ 3.45ಕ್ಕೆ ಚೌಟ ರಾಣಿ ಅಬ್ಬಕ್ಕ ಪ್ರೇರಣಾ ಪತ್ರ ನೀಡಿ ಅವರನ್ನು ಗೌರವಿಸಲಾಗುವುದು.
ಆರದಿರಲಿ ಬದುಕು ಆರಾಧನಾ ಸಂಸ್ಥೆಯ ಮೂಲಕ ಪದ್ಮಶ್ರೀ ಭಟ್ ಅವರು ಕಳೆದ 8 ವರ್ಷಗಳಿಂದ ಪ್ರತಿ ತಿಂಗಳು ಅನಾರೋಗ್ಯ ಪೀಡಿತರಿಗೆ ಸಹಾಯ ಹಸ್ತ ನೀಡುತ್ತಾ ಬಂದಿದ್ದಾರೆ. ವಾಯ್ಸ್ ಆಫ್ ಆರಾಧನಾ ಸಂಸ್ಥೆಯ ನಿರ್ದೇಶಕಿಯೂ ಆಗಿರುವ ಅವರು ನೂರಾರು ಬಹುಮುಖ ಪ್ರತಿಭೆಯ ಮಕ್ಕಳನ್ನು ಸಮಾಜಕ್ಕೆ ಪರಿಚಯಿಸಿದ ಹೆಗ್ಗಳಿಕೆ ಹೊಂದಿದ್ದಾರೆ. ವಾಯ್ಸ್ ಆಫ್ ಆರಾಧನಾ ಸಂಸ್ಥೆಯ ಮೂಲಕ ರಾಜ್ಯದ ಹಲವು ಕಡೆಗಳಲ್ಲಿ ರಾಜ್ಯಮಟ್ಟದ ಮಕ್ಕಳ ಮೇಳ ನಡೆಸಿದ್ದಾರೆ. ಮೂಲತಃ ಪತ್ರಕರ್ತೆಯಾದ ಪದ್ಮಶ್ರೀ ಭಟ್ ಅವರು ಸಾಮಾಜಿಕ ಕಾರ್ಯಕರ್ತೆಯೂ ಹೌದು.

ಇತ್ತೀಚಿನ ಸುದ್ದಿ

ಜಾಹೀರಾತು