5:33 PM Wednesday19 - August 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :…

ಇತ್ತೀಚಿನ ಸುದ್ದಿ

ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು

14/01/2026, 23:03

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಕೊಡಗಿನ ಹೆಣ್ಣುಮಕ್ಕಳನ್ನು ಆಪ್ ಮೂಲಕ ಮಾಧ್ಯಮದಲ್ಲಿ ಹೀನಾಯವಾಗಿ ಅವಮಾನಿಸಿ,15 ರೂಪಾಯಿ ಕೊಟ್ಟರೆ ಕೊಡಗಿನಲ್ಲಿ ಹೆಣ್ಣುಮಕ್ಕಳು ಸಿಗುತ್ತಾರೆ” ಎಂಬ ಅಸಭ್ಯ ಹಾಗೂ ನಿಂದನಾತ್ಮಕ ಹೇಳಿಕೆ ಮಾಡಿದ ವ್ಯಕ್ತಿಗಳ ವಿರುದ್ಧ ಕೊಡಗು ಅಭಿವೃದ್ಧಿ ಸಮಿತಿ ಜಿಲ್ಲಾಧ್ಯಕ್ಷದ ಪ್ರಸನ್ನ ಭಟ್ ದೂರು ದಾಖಲಿಸಿದ್ದಾರೆ.
ಈ ಸಂಬಂಧ, ನಿನ್ನೆ ಕುಶಾಲನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಇಂದು ಮಡಿಕೇರಿ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಅಧಿಕೃತವಾಗಿ ಎಫ್‌ಐಆರ್ ದಾಖಲಿಸಲಾಗಿದೆ.
ಕೊಡಗು ಅಭಿವೃದ್ಧಿ ಸಮಿತಿಯ ಜಿಲ್ಲಾಧ್ಯಕ್ಷರಾದ ಪ್ರಸನ್ನ ಭಟ್ ಅವರ ನೇತೃತ್ವದಲ್ಲಿ ಸಲ್ಲಿಸಲಾದ ದೂರಿನ ಮೇರೆಗೆ, ಐಟಿ ಆಕ್ಟ್ ಅಡಿ 2008 ( u/s 67) ಅಡಿಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಆರಂಭಿಸಲಾಗಿದೆ.
ಸಾಮಾಜಿಕ ಜಾಲತಾಣದ ಮೂಲಕ ಕೊಡಗಿನ ಮಹಿಳೆಯರ ಗೌರವಕ್ಕೆ ಧಕ್ಕೆ ತಂದಿರುವ ಈ ಕೃತ್ಯವನ್ನು
ಕೊಡಗು ಅಭಿವೃದ್ಧಿ ಸಮಿತಿ ತೀವ್ರವಾಗಿ ಖಂಡಿಸಿದ್ದು,
ಆರೋಪಿಗಳನ್ನು ತಕ್ಷಣವೇ ಬಂಧಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು