1:41 PM Tuesday25 - August 2026
ಬ್ರೇಕಿಂಗ್ ನ್ಯೂಸ್
ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.…

ಇತ್ತೀಚಿನ ಸುದ್ದಿ

ಜ.18: ಮಂಗಳೂರಿನಲ್ಲಿ ಪ್ರಪ್ರಥಮ ಜಾಗತಿಕ ಬಿಲ್ಲವರ ಕ್ರೀಡೋತ್ಸವ: ಶಿವರಾಜ್‌ಕುಮಾರ್ ಸೇರಿದಂತೆ ತಾರೆಯರ ದಂಡು

15/01/2026, 17:23

ಮಂಗಳೂರು(reporterkarnataka.com): ಅಖಿಲ ಭಾರತೀಯ ಬಿಲ್ಲವರ ಯೂನಿಯನ್ ಆಶ್ರಯದಲ್ಲಿ ಪ್ರಪ್ರಥಮ ಜಾಗತಿಕ ಬಿಲ್ಲವರ ಕ್ರೀಡೋತ್ಸವವು ಜ.18ರಂದು ಬೆಳಗ್ಗೆ 9 ಗಂಟೆಯಿಂದ ನಗರದ ನೆಹರೂ ಕ್ರೀಡಾಂಗಣದಲ್ಲಿ ನಡೆಯಲಿದೆ.
ಅಖಿಲ ಭಾರತೀಯ ಬಿಲ್ಲವರ ಯೂನಿಯನ್ ಅಧ್ಯಕ್ಷ ನವೀನ್ ಚಂದ್ರ ಸುವರ್ಣ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಈ ವಿಷಯ ತಿಳಿಸಿದರು.
ಅಂದು ಬೆಳಗ್ಗೆ 7.30ಕ್ಕೆ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಿಂದ ನೆಹರೂ ಮೈದಾನದವರೆಗೆ ಕ್ರೀಡಾ ಜ್ಯೋತಿ ಮೆರವಣಿಗೆ ನಡೆಯಲಿದೆ. ಬೆಳಗ್ಗೆ 9 ಗಂಟೆಗೆ ಉದ್ಘಾಟನಾ ಸಮಾರಂಭ ಜರುಗಲಿದ್ದು, ಸಂಜೆ 6 ಗಂಟೆಗೆ ಸಮಾರೋಪ ಸಮಾರಂಭ ಆಯೋಜಿಸಲಾಗಿದೆ ಎಂದು ಹೇಳಿದರು.
ತಾರಾ ಆಕರ್ಷಣೆಯಾಗಿ ಡಾ. ಶಿವರಾಜ್‌ಕುಮಾರ್, ವಿಜಯ ರಾಘವೇಂದ್ರ, ಧನ್ಯ ರಾಮ್‌ಕುಮಾರ್, ಯುವ ರಾಜ್‌ಕುಮಾರ್, ಪೃಥ್ವಿ ಅಂಬರ್ ಹಾಗೂ ಅನುಶ್ರೀ ಕಾರ್ಯಕ್ರಮದಲ್ಲಿ ಉಪಸ್ಥಿತರಿರಲಿದ್ದಾರೆ. ಸಂಜೆ 5.30ಕ್ಕೆ ಪ್ರಕಾಶ್ ಮಹಾದೇವನ್ ಹಾಗೂ ತಂಡದಿಂದ ಸಂಗೀತ ರಸಮಂಜರಿ ನಡೆಯಲಿದೆ ಎಂದು ನವೀನ್ ಚಂದ್ರ ಸುವರ್ಣ ಮಾಹಿತಿ ನೀಡಿದರು.
ಯುವ ಸಮುದಾಯವನ್ನು ಸಂಘಟಿಸುವ ಉದ್ದೇಶದೊಂದಿಗೆ ಈ ಜಾಗತಿಕ ಕ್ರೀಡೋತ್ಸವವನ್ನು ಆಯೋಜಿಸಲಾಗಿದ್ದು, ಬೆಳಗ್ಗೆ 8 ಗಂಟೆಗೆ ವಿಶ್ವಕಪ್ ಮಹಿಳಾ ಕಬಡ್ಡಿಯಲ್ಲಿ ಚಿನ್ನದ ಪದಕ ಗೆದ್ದ ಭಾರತೀಯ ತಂಡದ ಆಟಗಾರ್ತಿ ಧನಲಕ್ಷ್ಮೀ ಪೂಜಾರಿ ಅವರ ನೇತೃತ್ವದಲ್ಲಿ ಕ್ರೀಡಾ ಜ್ಯೋತಿ ಮೆರವಣಿಗೆ ಕುದ್ರೋಳಿಯಿಂದ ನಾರಾಯಣ ಗುರು ವೃತ್ತ, ಲಾಲ್‌ಭಾಗ್, ಕೆ.ಎಸ್. ರಾವ್ ರಸ್ತೆ ಮೂಲಕ ನೆಹರೂ ಮೈದಾನ ತಲುಪಲಿದೆ ಎಂದರು.
ಬೆಳಗ್ಗೆ 9 ಗಂಟೆಗೆ ದಾಮೋದರ ಆರ್. ಸುವರ್ಣ ವೇದಿಕೆಯಲ್ಲಿ ಸಾಗರ್ ಗ್ರೂಪ್ ಆಫ್ ಹೋಟೆಲ್ಸ್‌ನ ಛೇರ್‌ಮ್ಯಾನ್ ಜಯರಾಮ್ ಬನಾನ್ ಹಾಗೂ ಪೂಜಾರಿ ಫಿಶ್ ಲ್ಯಾಂಡ್‌ನ ಮಾಲಿಕ ಎಲ್. ಸುಧಾಕರ ಪೂಜಾರಿ ಉದ್ಘಾಟನೆ ನೆರವೇರಿಸಲಿದ್ದಾರೆ. ಬಳಿಕ ಮಹಿಳೆಯರಿಗೆ ತ್ರೋಬಾಲ್ ಹಾಗೂ ಹಗ್ಗಜಗ್ಗಾಟ, ಪುರುಷರಿಗೆ ವಾಲಿಬಾಲ್ ಹಾಗೂ ಹಗ್ಗಜಗ್ಗಾಟ ಸೇರಿದಂತೆ ಮಕ್ಕಳಿಗೂ ಮಹಿಳೆಯರಿಗೂ ವಿವಿಧ ಕ್ರೀಡಾವಳಿಗಳು ನಡೆಯಲಿವೆ ಎಂದು ಅವರು ನುಡಿದರು.
*ಸಮಾರೋಪ:* ಸಮಾರಂಭದಲ್ಲಿ ವಿಜೇತ ತಂಡಗಳಿಗೆ ಬಹುಮಾನ ವಿತರಣೆ ನಡೆಯಲಿದ್ದು, ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್, ಕೇಂದ್ರ ಸಚಿವ ಶ್ರೀಪಾದ್ ನಾಯಕ್, ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್, ಸಚಿವ ಮಧು ಬಂಗಾರಪ್ಪ, ಸಂಸದರು ಕೋಟ ಶ್ರೀನಿವಾಸ ಪೂಜಾರಿ, ಕ್ಯಾಪ್ಟನ್ ಬ್ರಿಜೇಶ್ ಚೌಟ ಸೇರಿದಂತೆ ಶಾಸಕರು ಹಾಗೂ ಚಿತ್ರರಂಗ-ಕ್ರೀಡಾ ಕ್ಷೇತ್ರದ ಗಣ್ಯರು ಭಾಗವಹಿಸಲಿದ್ದಾರೆ ಎಂದು ಹೇಳಿದರು.
ಯೂನಿಯನ್ ಸಂಚಾಲಕ ಸದಾನಂದ ಪೂಜಾರಿ, ಖಜಾಂಚಿ ಜಯಪ್ರಕಾಶ್, ಮಹಿಳಾ ವಿಭಾಗದ ಅಧ್ಯಕ್ಷೆ ಸುಮಲತಾ ಎನ್. ಸುವರ್ಣ, ಪ್ರಧಾನ ಕಾರ್ಯದರ್ಶಿ ಜೀವನ್ ಕುಮಾರ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು