9:59 PM Monday25 - May 2026
ಬ್ರೇಕಿಂಗ್ ನ್ಯೂಸ್
ಕೊಲ್ಲೂರು ಆಕ್ಸಿಡೆಂಟ್ | ಮೃತ ಮಹಿಳೆಯ ಮೈ ಮೇಲಿನ ಚಿನ್ನಾಭರಣ ಕದ್ದ ಕೇಸಿಗೆ… ಚಿಕ್ಕಮಗಳೂರು: ಕೈ ಕೈ ಮಿಲಾಯಿಸುವ ಮಟ್ಟಿಗೆ ತಲುಪಿದ ಕಾಂಗ್ರೆಸ್ – ಬಿಜೆಪಿ ಕಾರ್ಯಕರ್ತರ… ಮಂಗಳೂರು ವಿಮಾನ ದುರಂತ | ಕಾಕ್‌ಪಿಟ್‌ನಲ್ಲಿ ಹಾರಾಟದ ವೇಳೆ 1 ಗಂಟೆ 40… ಭಾರತೀಯರ ರಕ್ತಕ್ಕೆ ಪಾಕ್​ನಲ್ಲಿ ಪ್ರತೀಕಾರ: ಪುಲ್ವಾಮಾ ದಾಳಿ ಮಾಸ್ಟರ್‌ ಮೈಂಡ್ ಹಮ್ಜಾ ಬುರ್ಹಾನ್… ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ ಪ್ರಕಟ: 80,535 ವಿದ್ಯಾರ್ಥಿಗಳ ಪೈಕಿ 36,764 ಮಂದಿ… ತಜ್ಞರ ಸಮಿತಿ ವರದಿಯನ್ನು ನಿರ್ಲಕ್ಷಿಸಿದ್ದೇ ದುಬಾರೆ ದುರ್ಘಟನೆ ಕಾರಣ? ನಂಜನಗೂಡು | ಯಡಿಯಾಲ ಸುತ್ತಮುತ್ತ ಹುಲಿ ಹೆಜ್ಜೆ ಪತ್ತೆ: ಗ್ರಾಮಸ್ಥರಲ್ಲಿ ಆತಂಕ ದುಬಾರೆ ಆನೆ ಶಿಬಿರದಲ್ಲಿ ಮಾರ್ಗಸೂಚಿ ಪಾಲಿಸಲು ಸೂಚನೆ: ಕೊಡಗು ಉಸ್ತುವಾರಿ ಸಚಿವ ಬೋಸರಾಜು ಒಂದು ದೇಶ – ಒಂದು ಚುನಾವಣೆ: ವಿವಿಧ ವರ್ಗಗಳ ಅಭಿಪ್ರಾಯ ಆಲಿಸಿದ ಜಂಟಿ… ದುಬಾರೆಯಲ್ಲಿ ಆನೆಗಳ ಸ್ನಾನ ನಾಳೆಯಿಂದ 100 ಅಡಿ ದೂರದಲ್ಲಿ ನಿಂತು ನೋಡಲಷ್ಟೇ ಅವಕಾಶ:…

ಇತ್ತೀಚಿನ ಸುದ್ದಿ

ಮಾಳ: ಮಂಜುಶ್ರೀ ಭಜನಾ ಮಂಡಳಿಯಿಂದ ಯೋಗ ತರಗತಿಗೆ ಚಾಲನೆ

07/09/2021, 20:54

ಕಾರ್ಕಳ(reporterkarnataka.com): ಮಹಿಳೆ ಸ್ವಾವಲಂಬಿಯಾಗಿ ಬದುಕಬೇಕೆಂಬ ಉದ್ದೇಶದಿಂದ ಯೋಗವನ್ನು ಕರಗತಮಾಡಿಕೊಂಡು ಹಲವಾರು ಜನರಿಗೆ ಮಾರ್ಗದರ್ಶನ ಆಗಬೇಕೆಂಬ ಉದ್ದೇಶದಿಂದ ಹಸಿರು ತಪ್ಪಲಿನ ಮಾಳದಲ್ಲಿ ಯೋಗ ತರಗತಿಗೆ ಚಾಲನೆ ನೀಡಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಮೀಳಾ ಡಿ. ಶೆಟ್ಟಿ ವಹಿಸಿದ್ದರು.

ಕಾರ್ಯಕ್ರಮದ ಉದ್ಘಾಟನೆಯನ್ನು ರಮಿತಾ ಶೈಲೇಂದ್ರ ದೀಪ ಬೆಳಗಿಸಿ ನೆರವೇರಿಸಿದರು.

ಮಹಿಳೆ ನಾಲ್ಕು ಗೋಡೆಯೊಳಗೆ ಬಂಧಿಯಾಗದೆ ತನಗೆ ತಿಳಿದಿರುವ ವಿದ್ಯೆ ನಾಲ್ಕು ಜನರಿಗೆ ತಿಳಿಸುವ ಮಾತೆ ಯಾಗಬೇಕು. ನಿರಂತರ ಯೋಗದಿಂದ ಆರೋಗ್ಯವಂತರಾಗಿ ಇರಬಹುದು ಎಂದು ಶಿಬಿರಾರ್ಥಿಗಳಿಗೆ ಶುಭ ಹಾರೈಸಿದರು. 

ಇನ್ಫೋಸಿಸ್ ನಲ್ಲಿ ಕಾರ್ಯವನ್ನು ನಿರ್ವಹಿಸಿಕೊಂಡು ಹಲವಾರು ಯೋಗ ಅರ್ಜಿಗಳಿಗೆ ಯೋಗವನ್ನು ಕಲಿಸುವ  ಕೃಷ್ಣದಾಸ್ ಅವರು ಯೋಗದಿಂದ ಶತಾಯುಷಿ ಆಗಬಹುದು ಎಂದು ಯೋಗವನ್ನು ಹೇಳಿ ಕೊಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. 

ವೇದಿಕೆಯಲ್ಲಿ ನಲ್ಲೂರು ಪಂಚಾಯತ್ ಮಾಜಿ ಅಧ್ಯಕ್ಷೆ ಗಾಯತ್ರಿ ಪ್ರಭು, ಯೋಗ ಶಿಕ್ಷಕಿ ಜಯಂತಿ ಉಪಸ್ಥಿತರಿದ್ದರು. 

ಶೇಖರ್ ಶೆಟ್ಟಿ ಸ್ವಾಗತಿಸಿದರು. ಅವಿನಾಶ್ ಕುಲಾಲ್ ಕಾರ್ಯಕ್ರಮ ನೆರವೇರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು