6:40 PM Tuesday8 - July 2025
ಬ್ರೇಕಿಂಗ್ ನ್ಯೂಸ್
ತುಂಗಾ ಕಮಾನು ಸೇತುವೆ ಮೇಲೆ ಹರಿಯುತ್ತಿದೆ ನೀರು!: ಹೆದ್ದಾರಿ ಇಂಜಿನಿಯರ್ ಗಳ ಅದ್ಬುತ… ಶೈಕ್ಷಣಿಕ ಧನ ಸಹಾಯ ಪಾವತಿಸಲು ಆಗ್ರಹಿಸಿ ಜುಲೈ 9ರಂದು ಕಟ್ಟಡ ಕಾರ್ಮಿಕರ ರಾಜ್ಯವ್ಯಾಪಿ… Kodagu | 19 ವರ್ಷದಲ್ಲಿ ದಾಖಲೆ ಸೃಷ್ಟಿಸಿದ ಹಾರಂಗಿ ಡ್ಯಾಮ್: ಜಲಾಶಯಕ್ಕೆ ಹರಿದು… Madikeri | ಕೊಡಗಿನಲ್ಲಿ ವ್ಯಾಪಕ ಅಬ್ಬರದ ಬಿರುಗಾಳಿ ಸಹಿತ ಮಳೆ: ಇಂದು ಶಾಲಾ-… ಕಾಫಿನಾಡು ಪ್ರವೇಶಿಸದಂತೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಗೆ… Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ…

ಇತ್ತೀಚಿನ ಸುದ್ದಿ

ಮಾಳ: ಮಂಜುಶ್ರೀ ಭಜನಾ ಮಂಡಳಿಯಿಂದ ಯೋಗ ತರಗತಿಗೆ ಚಾಲನೆ

07/09/2021, 20:54

ಕಾರ್ಕಳ(reporterkarnataka.com): ಮಹಿಳೆ ಸ್ವಾವಲಂಬಿಯಾಗಿ ಬದುಕಬೇಕೆಂಬ ಉದ್ದೇಶದಿಂದ ಯೋಗವನ್ನು ಕರಗತಮಾಡಿಕೊಂಡು ಹಲವಾರು ಜನರಿಗೆ ಮಾರ್ಗದರ್ಶನ ಆಗಬೇಕೆಂಬ ಉದ್ದೇಶದಿಂದ ಹಸಿರು ತಪ್ಪಲಿನ ಮಾಳದಲ್ಲಿ ಯೋಗ ತರಗತಿಗೆ ಚಾಲನೆ ನೀಡಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಮೀಳಾ ಡಿ. ಶೆಟ್ಟಿ ವಹಿಸಿದ್ದರು.

ಕಾರ್ಯಕ್ರಮದ ಉದ್ಘಾಟನೆಯನ್ನು ರಮಿತಾ ಶೈಲೇಂದ್ರ ದೀಪ ಬೆಳಗಿಸಿ ನೆರವೇರಿಸಿದರು.

ಮಹಿಳೆ ನಾಲ್ಕು ಗೋಡೆಯೊಳಗೆ ಬಂಧಿಯಾಗದೆ ತನಗೆ ತಿಳಿದಿರುವ ವಿದ್ಯೆ ನಾಲ್ಕು ಜನರಿಗೆ ತಿಳಿಸುವ ಮಾತೆ ಯಾಗಬೇಕು. ನಿರಂತರ ಯೋಗದಿಂದ ಆರೋಗ್ಯವಂತರಾಗಿ ಇರಬಹುದು ಎಂದು ಶಿಬಿರಾರ್ಥಿಗಳಿಗೆ ಶುಭ ಹಾರೈಸಿದರು. 

ಇನ್ಫೋಸಿಸ್ ನಲ್ಲಿ ಕಾರ್ಯವನ್ನು ನಿರ್ವಹಿಸಿಕೊಂಡು ಹಲವಾರು ಯೋಗ ಅರ್ಜಿಗಳಿಗೆ ಯೋಗವನ್ನು ಕಲಿಸುವ  ಕೃಷ್ಣದಾಸ್ ಅವರು ಯೋಗದಿಂದ ಶತಾಯುಷಿ ಆಗಬಹುದು ಎಂದು ಯೋಗವನ್ನು ಹೇಳಿ ಕೊಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. 

ವೇದಿಕೆಯಲ್ಲಿ ನಲ್ಲೂರು ಪಂಚಾಯತ್ ಮಾಜಿ ಅಧ್ಯಕ್ಷೆ ಗಾಯತ್ರಿ ಪ್ರಭು, ಯೋಗ ಶಿಕ್ಷಕಿ ಜಯಂತಿ ಉಪಸ್ಥಿತರಿದ್ದರು. 

ಶೇಖರ್ ಶೆಟ್ಟಿ ಸ್ವಾಗತಿಸಿದರು. ಅವಿನಾಶ್ ಕುಲಾಲ್ ಕಾರ್ಯಕ್ರಮ ನೆರವೇರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು