1:23 AM Tuesday21 - April 2026
ಬ್ರೇಕಿಂಗ್ ನ್ಯೂಸ್
ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:… ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಸಂತ್ರಸ್ತರ ಕುಟುಂಬಕ್ಕೆ ಕಡೆಗೂ ಸಿಕ್ತು ಸರ್ಕಾರಿ ನೌಕರಿ… ಎನ್. ಆರ್. ಪುರ | ಭದ್ರಾ ನದಿಯ ಬ್ಯಾಕ್ ವಾಟರ್ ನಲ್ಲಿ ಈಜಲು… ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದಿಂದ ಹೊಸ ಅತಿಥಿಗಳು: ಸಚಿವ ಈಶ್ವರ್ ಖಂಡ್ರೆಯಿಂದ 4 ಚೀತಗಳಿಗೆ…

ಇತ್ತೀಚಿನ ಸುದ್ದಿ

ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿಯ ಬಂಧನ: 3 ವರ್ಷ ಕಠಿಣ ಸಜೆ

19/01/2026, 11:46

ಮಂಗಳೂರು(reporterkarnataka.com): ಸುಲಿಗೆ ಪ್ರಕರಣದಲ್ಲಿ ಶಿಕ್ಷೆ ಪ್ರಕಟವಾದ ನಂತರ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿಯನ್ನು ಪೊಲೀಸರು ಸುರತ್ಕಲ್ ಬಳಿ ಬಂಧಿಸಿದ್ದಾರೆ.
ತೊಕ್ಕೊಟ್ಟು ಚಂಬುಗುಡ್ಡೆ ನಿವಾಸಿ ನವೀನ್ ಸಿಕ್ವೇರಾ (೫೨) ಬಂಧಿತ ಆರೋಪಿ. ಈತನ ಮೇಲೆ 2011 ಹಾಗೂ 2012ರಲ್ಲಿ ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ಠಾಣಾ ಅಕ್ರ ನಂಬರ್ 195/2011 ಕಲಂ 392 ಐಪಿಸಿ ರಂತೆ ಪ್ರಕರಣ ದಾಖಲಾಗಿದ್ದು ವಿಚಾರಣೆ ನಡೆಸಿದ ನ್ಯಾಯಾಲಯವು ಆರೋಪಿಯ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ 2015 ರಲ್ಲಿ ಮೂರು ವರ್ಷಗಳ ಕಠಿಣ ಕಾರವಾಸ ಶಿಕ್ಷೆ ಹಾಗೂ ರೂಪಾಯಿ 5000 ಜುಲ್ಮಾನೆ ವಿಧಿಸಿ ತೀರ್ಪು ನೀಡಿರುತ್ತದೆ ನಂತರ ಆರೋಪಿಯು ಜಿಲ್ಲಾ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಉಚ್ಚ ನ್ಯಾಯಾಲಯಕ್ಕೆ ಕ್ರಿಮಿನಲ್ ರಿಟ್ ಪೆಟಿಷನ್ ಅರ್ಜಿ ಸಲ್ಲಿಸಿದ್ದು ಅರ್ಜಿ ಪರಿಶೀಲಿಸಿದ ಉಚ್ಚ ನ್ಯಾಯಾಲಯವು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ ಒಂದು ವರ್ಷ ಸಾಧಾ ಕಾರವಾಸ ಶಿಕ್ಷೆ ಹಾಗೂ ರೂಪಾಯಿ 15000 ದಂಡ ವಿಧಿಸಿ ಈ ಶಿಕ್ಷೆಯನ್ನು 2022ರ ಒಳಗೆ ಅನುಭವಿಸುವಂತೆ ಇದಕ್ಕೆ ತಪ್ಪಿದಲ್ಲಿ ಜಿಲ್ಲಾ ನ್ಯಾಯಾಲಯದ ಈ ಹಿಂದಿನ ಆದೇಶದ ಪ್ರಕಾರ ಶಿಕ್ಷೆಗೆ ಒಳಪಡಬೇಕಾಗಿ ಆದೇಶಿಸಿ ತೀರ್ಪು ಪ್ರಕಟ ಮಾಡಿರುತ್ತದೆ . ತೀರ್ಪು ಪ್ರಕಟವಾದ ನಂತರ ಆರೋಪಿ ತಲೆ ಮರೆಸಿಕೊಂಡಿದ್ದು ನ್ಯಾಯಾಲಯವು ಈತನ ಮೇಲೆ ಬಂಧನದ ವಾರೆಂಟ್ ಹೊರಡಿಸಿತ್ತು. ಈತನನ್ನು ಮಂಗಳೂರು ಪೂರ್ವ ಪೊಲೀಸ್ ಠಾಣಾ ವಾರಂಟ್ ಜಾರಿ ಸಿಬ್ಬಂದಿಗಳಾದ ಎಎಸ್ಐ ಮಚ್ಚೆಂದ್ರನಾಥ್ ಜೋಗಿ, ಹೆಚ್ ಸಿ ಅಭಿಷೇಕ್ ಹಾಗೂ ಹೆಚ್ ಸಿ ನಾರಪ್ಪ ಕೆಬಿ ರವರು ಈತನನ್ನು ದಿನಾಂಕ 14.01.2026 ರಂದು ಖಚಿತ ಮಾಹಿತಿ ಮೇರೆಗೆ ಸುರತ್ಕಲ್ ಹೊನ್ನಕಟ್ಟೆಯ ಸುಪ್ರಭಾತ ಬಾರ್ ಅಂಡ್ ರೆಸ್ಟೋರೆಂಟ್ ಎಂಬಲ್ಲಿ ದಸ್ತಗಿರಿ ಮಾಡಿದ್ದಾರೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಲಯವು ಈ ಹಿಂದೆ ನೀಡಿದ ತೀರ್ಪಿನಂತೆ ಮೂರು ವರ್ಷಗಳ ಕಠಿಣ ಕಾರವಾಸ ಶಿಕ್ಷೆ ಹಾಗೂ 5000/- ರೂಪಾಯಿ ದಂಡ ವಿಧಿಸಿ ತೀರ್ಪು ನೀಡಿ ಆದೇಶಿಸಿರುತ್ತದೆ.

ಇತ್ತೀಚಿನ ಸುದ್ದಿ

ಜಾಹೀರಾತು