8:42 PM Monday24 - August 2026
ಬ್ರೇಕಿಂಗ್ ನ್ಯೂಸ್
ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು

ಇತ್ತೀಚಿನ ಸುದ್ದಿ

ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿಯ ಬಂಧನ: 3 ವರ್ಷ ಕಠಿಣ ಸಜೆ

19/01/2026, 11:46

ಮಂಗಳೂರು(reporterkarnataka.com): ಸುಲಿಗೆ ಪ್ರಕರಣದಲ್ಲಿ ಶಿಕ್ಷೆ ಪ್ರಕಟವಾದ ನಂತರ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿಯನ್ನು ಪೊಲೀಸರು ಸುರತ್ಕಲ್ ಬಳಿ ಬಂಧಿಸಿದ್ದಾರೆ.
ತೊಕ್ಕೊಟ್ಟು ಚಂಬುಗುಡ್ಡೆ ನಿವಾಸಿ ನವೀನ್ ಸಿಕ್ವೇರಾ (೫೨) ಬಂಧಿತ ಆರೋಪಿ. ಈತನ ಮೇಲೆ 2011 ಹಾಗೂ 2012ರಲ್ಲಿ ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ಠಾಣಾ ಅಕ್ರ ನಂಬರ್ 195/2011 ಕಲಂ 392 ಐಪಿಸಿ ರಂತೆ ಪ್ರಕರಣ ದಾಖಲಾಗಿದ್ದು ವಿಚಾರಣೆ ನಡೆಸಿದ ನ್ಯಾಯಾಲಯವು ಆರೋಪಿಯ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ 2015 ರಲ್ಲಿ ಮೂರು ವರ್ಷಗಳ ಕಠಿಣ ಕಾರವಾಸ ಶಿಕ್ಷೆ ಹಾಗೂ ರೂಪಾಯಿ 5000 ಜುಲ್ಮಾನೆ ವಿಧಿಸಿ ತೀರ್ಪು ನೀಡಿರುತ್ತದೆ ನಂತರ ಆರೋಪಿಯು ಜಿಲ್ಲಾ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಉಚ್ಚ ನ್ಯಾಯಾಲಯಕ್ಕೆ ಕ್ರಿಮಿನಲ್ ರಿಟ್ ಪೆಟಿಷನ್ ಅರ್ಜಿ ಸಲ್ಲಿಸಿದ್ದು ಅರ್ಜಿ ಪರಿಶೀಲಿಸಿದ ಉಚ್ಚ ನ್ಯಾಯಾಲಯವು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ ಒಂದು ವರ್ಷ ಸಾಧಾ ಕಾರವಾಸ ಶಿಕ್ಷೆ ಹಾಗೂ ರೂಪಾಯಿ 15000 ದಂಡ ವಿಧಿಸಿ ಈ ಶಿಕ್ಷೆಯನ್ನು 2022ರ ಒಳಗೆ ಅನುಭವಿಸುವಂತೆ ಇದಕ್ಕೆ ತಪ್ಪಿದಲ್ಲಿ ಜಿಲ್ಲಾ ನ್ಯಾಯಾಲಯದ ಈ ಹಿಂದಿನ ಆದೇಶದ ಪ್ರಕಾರ ಶಿಕ್ಷೆಗೆ ಒಳಪಡಬೇಕಾಗಿ ಆದೇಶಿಸಿ ತೀರ್ಪು ಪ್ರಕಟ ಮಾಡಿರುತ್ತದೆ . ತೀರ್ಪು ಪ್ರಕಟವಾದ ನಂತರ ಆರೋಪಿ ತಲೆ ಮರೆಸಿಕೊಂಡಿದ್ದು ನ್ಯಾಯಾಲಯವು ಈತನ ಮೇಲೆ ಬಂಧನದ ವಾರೆಂಟ್ ಹೊರಡಿಸಿತ್ತು. ಈತನನ್ನು ಮಂಗಳೂರು ಪೂರ್ವ ಪೊಲೀಸ್ ಠಾಣಾ ವಾರಂಟ್ ಜಾರಿ ಸಿಬ್ಬಂದಿಗಳಾದ ಎಎಸ್ಐ ಮಚ್ಚೆಂದ್ರನಾಥ್ ಜೋಗಿ, ಹೆಚ್ ಸಿ ಅಭಿಷೇಕ್ ಹಾಗೂ ಹೆಚ್ ಸಿ ನಾರಪ್ಪ ಕೆಬಿ ರವರು ಈತನನ್ನು ದಿನಾಂಕ 14.01.2026 ರಂದು ಖಚಿತ ಮಾಹಿತಿ ಮೇರೆಗೆ ಸುರತ್ಕಲ್ ಹೊನ್ನಕಟ್ಟೆಯ ಸುಪ್ರಭಾತ ಬಾರ್ ಅಂಡ್ ರೆಸ್ಟೋರೆಂಟ್ ಎಂಬಲ್ಲಿ ದಸ್ತಗಿರಿ ಮಾಡಿದ್ದಾರೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಲಯವು ಈ ಹಿಂದೆ ನೀಡಿದ ತೀರ್ಪಿನಂತೆ ಮೂರು ವರ್ಷಗಳ ಕಠಿಣ ಕಾರವಾಸ ಶಿಕ್ಷೆ ಹಾಗೂ 5000/- ರೂಪಾಯಿ ದಂಡ ವಿಧಿಸಿ ತೀರ್ಪು ನೀಡಿ ಆದೇಶಿಸಿರುತ್ತದೆ.

ಇತ್ತೀಚಿನ ಸುದ್ದಿ

ಜಾಹೀರಾತು