6:26 AM Thursday20 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಬೆಂಗಳೂರಿನಲ್ಲೂ ಮೈಸೂರಿನ ‘ಮೈಲಾರಿ’ ಘಮ: ಹೋಟೆಲ್ ಉದ್ಘಾಟಿಸಿ, ದೋಸೆ, ಕಾಶಿ ಹಲ್ವಾ ಸವಿದ ಮುಖ್ಯಮಂತ್ರಿ

23/01/2026, 18:21

* ಇಂದಿರಾನಗರದಲ್ಲಿ 'ಒರಿಜಿನಲ್‌ ಮೈಲಾರಿ ಹೋಟೆಲ್‌-1938'ಗೆ ಅದ್ಧೂರಿ ಚಾಲನೆ

* ಇನ್ನು ಮೈಲಾರಿ ದೋಸೆಗಾಗಿ ಮೈಸೂರಿಗೆ ಹೋಗಬೇಕಿಲ್ಲ:

ಬೆಂಗಳೂರು(reporterkarnataka.com): ಮೈಸೂರಿನ ಐತಿಹಾಸಿಕ ರುಚಿಯನ್ನು ಹೊತ್ತು ಬಂದಿರುವ ಪ್ರಸಿದ್ಧ ‘ಒರಿಜಿನಲ್ ವಿನಾಯಕ ಮೈಲಾರಿ-1938’ (Old Original Vinayaka Mylari) ಹೋಟೆಲ್‌ನ ಬೆಂಗಳೂರು ಶಾಖೆಗೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದರು.


ಇಂದಿರಾನಗರದ 80 ಅಡಿ ರಸ್ತೆಯಲ್ಲಿ ನಡೆದ ಸಮಾರಂಭದಲ್ಲಿ ಹೋಟೆಲ್ ಉದ್ಘಾಟಿಸಿದ ಬಳಿಕ, ಸಿಎಂ ಸಿದ್ದರಾಮಯ್ಯ ಅವರು ಖುದ್ದಾಗಿ ಕುಳಿತು ಪ್ರಸಿದ್ಧ ಬೆಣ್ಣೆ ಖಾಲಿ ದೋಸೆ ಮತ್ತು ಕಾಶಿ ಹಲ್ವಾವನ್ನು ಸವಿದರು. ದೋಸೆಯ ರುಚಿಗೆ ತಲೆದೂಗಿದ ಅವರು, “ನಾನು ಮೈಸೂರಿನಲ್ಲಿ ಅನೇಕ ಬಾರಿ ಈ ದೋಸೆ ಸವಿದಿದ್ದೇನೆ. ಈಗ ಬೆಂಗಳೂರಿನಲ್ಲೂ ಅದೇ ಅಪ್ಪಟ ರುಚಿ ಸಿಗುತ್ತಿದೆ. ಆಹಾರ ಪ್ರಿಯರು ಇನ್ನು ಮುಂದೆ ಮೈಲಾರಿ ದೋಸೆಗಾಗಿ ಮೈಸೂರಿಗೆ ಹೋಗುವ ಅಗತ್ಯವಿಲ್ಲ, ಅದು ಈಗ ನಮ್ಮ ಇಂದಿರಾನಗರದಲ್ಲೇ ಸಿಗುತ್ತಿದೆ,” ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

*ಗಣ್ಯಾತಿಗಣ್ಯರ ಸಾಕ್ಷಿ:*
ಕಾರ್ಯಕ್ರಮದಲ್ಲಿ ರಾಜಕೀಯ ಮತ್ತು ಸಿನಿಮಾ ರಂಗದ ಹಲವು ಗಣ್ಯರು ಉಪಸ್ಥಿತರಿದ್ದು, 87 ವರ್ಷಗಳ ಇತಿಹಾಸವಿರುವ ಮೈಲಾರಿ ಪರಂಪರೆ ಬೆಂಗಳೂರಿಗೆ ಕಾಲಿಟ್ಟಿರುವುದಕ್ಕೆ ಶುಭ ಹಾರೈಸಿದರು. ತುಮಕೂರಿನ ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿಗಳು ಮತ್ತು ಗೌರಿಗದ್ದೆಯ ವಿನಯ್ ಗುರೂಜಿ ಅವರು ಸಾನ್ನಿಧ್ಯ ವಹಿಸಿದ್ದರು.

*ನಾಲ್ಕನೇ ತಲೆಮಾರಿನ ಸಾರಥ್ಯ:*
1938ರಲ್ಲಿ ಗೌರಮ್ಮನವರು ಮೈಸೂರಿನ ನಜರ್‌ಬಾದ್‌ನಲ್ಲಿ ಆರಂಭಿಸಿದ್ದ ಈ ರುಚಿಯ ಪರಂಪರೆಯನ್ನು, ಇದೀಗ ನಾಲ್ಕನೇ ತಲೆಮಾರಿನ ಸಚಿನ್ ಮತ್ತು ಸಿಂಧು ದಂಪತಿ ಬೆಂಗಳೂರಿಗೆ ವಿಸ್ತರಿಸಿದ್ದಾರೆ. ಬಾಳೆ ಎಲೆ ಊಟ ಮತ್ತು ಹಳ್ಳಿ ಸೊಗಡಿನ ದೇಸಿ ರುಚಿಯನ್ನು ಉಳಿಸಿಕೊಂಡು ಹೋಗುವುದು ತಮ್ಮ ಗುರಿ ಎಂದು ಹೋಟೆಲ್ ಮಾಲೀಕರು ತಿಳಿಸಿದರು.
ಡಾ. ರಾಜ್‌ಕುಮಾರ್‌ರಿಂದ ಹಿಡಿದು ಸಚಿನ್ ತೆಂಡೂಲ್ಕರ್‌ವರೆಗೆ ಮತ್ತು ಬಿಬಿಸಿ (BBC) ಪಟ್ಟಿಯಲ್ಲೂ ಸ್ಥಾನ ಪಡೆದಿದ್ದ ಈ ಹೋಟೆಲ್, ಇಂದಿನಿಂದ ಅಧಿಕೃತವಾಗಿ ಬೆಂಗಳೂರಿಗರ ಸೇವೆಗೆ ಲಭ್ಯವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು