8:23 PM Sunday25 - January 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ…

ಇತ್ತೀಚಿನ ಸುದ್ದಿ

ಪುದುಚೇರಿ: ಖ್ಯಾತ ಸಂಗೀತಗಾರ ಡಾ. ಎನ್. ಸೋಮಶೇಖರ ಮಯ್ಯರಿಗೆ ಪ್ರತಿಷ್ಠಿತ ಗಾನ ಗಂಧರ್ವ ಪ್ರಶಸ್ತಿ ಪ್ರದಾನ

25/01/2026, 20:22

ಪುದುಚೇರಿ(reporterkarnataka.com): ಸಂಗೀತ ಕ್ಷೇತ್ರದಲ್ಲಿ ಅದ್ವಿತೀಯ ಸಾಧನೆ ಮಾಡಿದ ಹಿನ್ನೆಲೆಯಲ್ಲಿ ಅಮೆರಿಕನ್ ವಿಸ್ಡಂ ಪೀಸ್ ಎಜುಕೇಶನ್ ಯುನಿವರ್ಸಿಟಿ ನೀಡುವ ಪ್ರತಿಷ್ಠಿತ ಗಾನ ಗಂಧರ್ವ ಪ್ರಶಸ್ತಿಯನ್ನು ಖ್ಯಾತ ಸಂಗೀತಗಾರ ಡಾ. ಎನ್. ಸೋಮಶೇಖರ ಮಯ್ಯ ಅವರಿಗೆ ಪುದುಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಪ್ರದಾನ ಮಾಡಲಾಯಿತು.
ದಕ್ಷಿಣ ಕನ್ನಡ ಜಿಲ್ಲೆಯ ಮೂಲತಃ ಬಂಟ್ವಾಳ ತಾಲೂಕಿನವರಾದ ಡಾ. ಮಯ್ಯ ಅವರು ವೃತ್ತಿಯಲ್ಲಿ ಸರಕಾರಿ ಅಧಿಕಾರಿ. ಹಾಗೆ ಪ್ರವೃತ್ತಿಯಲ್ಲಿ ಒಬ್ಬ ಮಹಾನ್ ಸಂಗೀತಕಾರ. ಶಾಸ್ತ್ರೀಯ ಸಂಗೀತ ಕ್ಷೇತ್ರದಲ್ಲಿ ಅವರು ಅನುಪಮ ಸೇವೆ ನೀಡಿದ್ದಾರೆ. ತನ್ನಲ್ಲಿ ಸುಪ್ತವಾಗಿದ್ದ ಸ್ವರ ಮಾಧುರ್ಯವನ್ನು ನೂರಾರು ಶಿಷ್ಯಂದಿರಿಗೆ ಧಾರೆ ಎರೆದ ಕೀರ್ತಿ ಅವರದ್ದಾಗಿದೆ.


ಡಾ ಮಯ್ಯ ಅವರು ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ ಗಾಯನದಲ್ಲಿ ಈಗಾಗಲೇ ವಿದ್ವತ್, ವಿಶಾರದ, ಅಲಂಕಾರ್ ಸ್ನಾತಕೋತ್ತರ ಪದವಿಗಳನ್ನು ಪಡೆದವರಿದ್ದಾರೆ. ವಿವೇಕ ಜಾಗೃತಿ ಸಂಸ್ಥೆ, ಬಂಟ್ವಾಳ ನಾಗರಿಕರಿಂದ ಗಾನಕೇಸರಿ, ಇಂಡಿಯನ್ ಎಂಪಯರ್ ಯುನಿವರ್ಸಿಟಿಯಿಂದ ಗೌರವ ಡಾಕ್ಟರೇಟ್ ಪ್ರಶಸ್ತಿ, ಏಷಿಯಾ ಅಂತಾರಾಷ್ಟ್ರೀಯ ಕಲ್ಚರಲ್ ಅಕಾಡೆಮಿಯಿಂದ ಸಂಗೀತ ಸಾಮ್ರಾಟ್ ಪ್ರಶಸ್ತಿಯನ್ನು ಪಡೆದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು