7:18 PM Sunday19 - April 2026
ಬ್ರೇಕಿಂಗ್ ನ್ಯೂಸ್
ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:… ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಸಂತ್ರಸ್ತರ ಕುಟುಂಬಕ್ಕೆ ಕಡೆಗೂ ಸಿಕ್ತು ಸರ್ಕಾರಿ ನೌಕರಿ… ಎನ್. ಆರ್. ಪುರ | ಭದ್ರಾ ನದಿಯ ಬ್ಯಾಕ್ ವಾಟರ್ ನಲ್ಲಿ ಈಜಲು… ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದಿಂದ ಹೊಸ ಅತಿಥಿಗಳು: ಸಚಿವ ಈಶ್ವರ್ ಖಂಡ್ರೆಯಿಂದ 4 ಚೀತಗಳಿಗೆ… ನವ ಮಂಗಳೂರು ಬಂದರಿಗೆ ಐಷಾರಾಮಿ ಕ್ರೂಸ್ ಹಡಗು ಆಗಮನ: ಕರಾವಳಿ ಪ್ರವಾಸೋದ್ಯಮಕ್ಕೆ ಉತ್ತೇಜನ ಹಾಸನದಲ್ಲಿ ಮೂರು ದಿನಗಳ ಆಪರೇಷನ್‌ ಯಶಸ್ವಿ: ನರಹಂತಕ ಕಾಡಾನೆ ಸೆರೆ ಬಳ್ಳಾರಿ | ಪ್ಯಾರಚೂಟ್ ತರಬೇತಿ ವೇಳೆ ತಾಂತ್ರಿಕ ದೋಷ: 50 ಅಡಿ ಎತ್ತರದಿಂದ… ತೀರ್ಥಹಳ್ಳಿಯಲ್ಲಿ ಕುಡಿಯುವ ನೀರಿನ ಬಾವಿಗೆ ವಿಷ: ಪ್ರಕರಣ ದಾಖಲು Udupi | ಕಾಪು ಬಳಿ ಭೀಕರ ಲಾರಿ-ಕಾರು ಅಪಘಾತ: ಓರ್ವ ಸಾವು; ಇಬ್ಬರು… ಮಂತ್ರಾಲಯದ ಬಳಿ ಭೀಕರ ಅಪಘಾತ: 8 ಮಂದಿ ಸಾವು, ತರೀಕೆರೆ ತಾಲೂಕಿನ ಇಬ್ಬರು…

ಇತ್ತೀಚಿನ ಸುದ್ದಿ

ಪುದುಚೇರಿ: ಖ್ಯಾತ ಸಂಗೀತಗಾರ ಡಾ. ಎನ್. ಸೋಮಶೇಖರ ಮಯ್ಯರಿಗೆ ಪ್ರತಿಷ್ಠಿತ ಗಾನ ಗಂಧರ್ವ ಪ್ರಶಸ್ತಿ ಪ್ರದಾನ

25/01/2026, 20:22

ಪುದುಚೇರಿ(reporterkarnataka.com): ಸಂಗೀತ ಕ್ಷೇತ್ರದಲ್ಲಿ ಅದ್ವಿತೀಯ ಸಾಧನೆ ಮಾಡಿದ ಹಿನ್ನೆಲೆಯಲ್ಲಿ ಅಮೆರಿಕನ್ ವಿಸ್ಡಂ ಪೀಸ್ ಎಜುಕೇಶನ್ ಯುನಿವರ್ಸಿಟಿ ನೀಡುವ ಪ್ರತಿಷ್ಠಿತ ಗಾನ ಗಂಧರ್ವ ಪ್ರಶಸ್ತಿಯನ್ನು ಖ್ಯಾತ ಸಂಗೀತಗಾರ ಡಾ. ಎನ್. ಸೋಮಶೇಖರ ಮಯ್ಯ ಅವರಿಗೆ ಪುದುಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಪ್ರದಾನ ಮಾಡಲಾಯಿತು.
ದಕ್ಷಿಣ ಕನ್ನಡ ಜಿಲ್ಲೆಯ ಮೂಲತಃ ಬಂಟ್ವಾಳ ತಾಲೂಕಿನವರಾದ ಡಾ. ಮಯ್ಯ ಅವರು ವೃತ್ತಿಯಲ್ಲಿ ಸರಕಾರಿ ಅಧಿಕಾರಿ. ಹಾಗೆ ಪ್ರವೃತ್ತಿಯಲ್ಲಿ ಒಬ್ಬ ಮಹಾನ್ ಸಂಗೀತಕಾರ. ಶಾಸ್ತ್ರೀಯ ಸಂಗೀತ ಕ್ಷೇತ್ರದಲ್ಲಿ ಅವರು ಅನುಪಮ ಸೇವೆ ನೀಡಿದ್ದಾರೆ. ತನ್ನಲ್ಲಿ ಸುಪ್ತವಾಗಿದ್ದ ಸ್ವರ ಮಾಧುರ್ಯವನ್ನು ನೂರಾರು ಶಿಷ್ಯಂದಿರಿಗೆ ಧಾರೆ ಎರೆದ ಕೀರ್ತಿ ಅವರದ್ದಾಗಿದೆ.


ಡಾ ಮಯ್ಯ ಅವರು ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ ಗಾಯನದಲ್ಲಿ ಈಗಾಗಲೇ ವಿದ್ವತ್, ವಿಶಾರದ, ಅಲಂಕಾರ್ ಸ್ನಾತಕೋತ್ತರ ಪದವಿಗಳನ್ನು ಪಡೆದವರಿದ್ದಾರೆ. ವಿವೇಕ ಜಾಗೃತಿ ಸಂಸ್ಥೆ, ಬಂಟ್ವಾಳ ನಾಗರಿಕರಿಂದ ಗಾನಕೇಸರಿ, ಇಂಡಿಯನ್ ಎಂಪಯರ್ ಯುನಿವರ್ಸಿಟಿಯಿಂದ ಗೌರವ ಡಾಕ್ಟರೇಟ್ ಪ್ರಶಸ್ತಿ, ಏಷಿಯಾ ಅಂತಾರಾಷ್ಟ್ರೀಯ ಕಲ್ಚರಲ್ ಅಕಾಡೆಮಿಯಿಂದ ಸಂಗೀತ ಸಾಮ್ರಾಟ್ ಪ್ರಶಸ್ತಿಯನ್ನು ಪಡೆದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು