7:46 AM Sunday21 - June 2026
ಬ್ರೇಕಿಂಗ್ ನ್ಯೂಸ್
ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ…

ಇತ್ತೀಚಿನ ಸುದ್ದಿ

ಪುದುಚೇರಿ: ಖ್ಯಾತ ಸಂಗೀತಗಾರ ಡಾ. ಎನ್. ಸೋಮಶೇಖರ ಮಯ್ಯರಿಗೆ ಪ್ರತಿಷ್ಠಿತ ಗಾನ ಗಂಧರ್ವ ಪ್ರಶಸ್ತಿ ಪ್ರದಾನ

25/01/2026, 20:22

ಪುದುಚೇರಿ(reporterkarnataka.com): ಸಂಗೀತ ಕ್ಷೇತ್ರದಲ್ಲಿ ಅದ್ವಿತೀಯ ಸಾಧನೆ ಮಾಡಿದ ಹಿನ್ನೆಲೆಯಲ್ಲಿ ಅಮೆರಿಕನ್ ವಿಸ್ಡಂ ಪೀಸ್ ಎಜುಕೇಶನ್ ಯುನಿವರ್ಸಿಟಿ ನೀಡುವ ಪ್ರತಿಷ್ಠಿತ ಗಾನ ಗಂಧರ್ವ ಪ್ರಶಸ್ತಿಯನ್ನು ಖ್ಯಾತ ಸಂಗೀತಗಾರ ಡಾ. ಎನ್. ಸೋಮಶೇಖರ ಮಯ್ಯ ಅವರಿಗೆ ಪುದುಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಪ್ರದಾನ ಮಾಡಲಾಯಿತು.
ದಕ್ಷಿಣ ಕನ್ನಡ ಜಿಲ್ಲೆಯ ಮೂಲತಃ ಬಂಟ್ವಾಳ ತಾಲೂಕಿನವರಾದ ಡಾ. ಮಯ್ಯ ಅವರು ವೃತ್ತಿಯಲ್ಲಿ ಸರಕಾರಿ ಅಧಿಕಾರಿ. ಹಾಗೆ ಪ್ರವೃತ್ತಿಯಲ್ಲಿ ಒಬ್ಬ ಮಹಾನ್ ಸಂಗೀತಕಾರ. ಶಾಸ್ತ್ರೀಯ ಸಂಗೀತ ಕ್ಷೇತ್ರದಲ್ಲಿ ಅವರು ಅನುಪಮ ಸೇವೆ ನೀಡಿದ್ದಾರೆ. ತನ್ನಲ್ಲಿ ಸುಪ್ತವಾಗಿದ್ದ ಸ್ವರ ಮಾಧುರ್ಯವನ್ನು ನೂರಾರು ಶಿಷ್ಯಂದಿರಿಗೆ ಧಾರೆ ಎರೆದ ಕೀರ್ತಿ ಅವರದ್ದಾಗಿದೆ.


ಡಾ ಮಯ್ಯ ಅವರು ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ ಗಾಯನದಲ್ಲಿ ಈಗಾಗಲೇ ವಿದ್ವತ್, ವಿಶಾರದ, ಅಲಂಕಾರ್ ಸ್ನಾತಕೋತ್ತರ ಪದವಿಗಳನ್ನು ಪಡೆದವರಿದ್ದಾರೆ. ವಿವೇಕ ಜಾಗೃತಿ ಸಂಸ್ಥೆ, ಬಂಟ್ವಾಳ ನಾಗರಿಕರಿಂದ ಗಾನಕೇಸರಿ, ಇಂಡಿಯನ್ ಎಂಪಯರ್ ಯುನಿವರ್ಸಿಟಿಯಿಂದ ಗೌರವ ಡಾಕ್ಟರೇಟ್ ಪ್ರಶಸ್ತಿ, ಏಷಿಯಾ ಅಂತಾರಾಷ್ಟ್ರೀಯ ಕಲ್ಚರಲ್ ಅಕಾಡೆಮಿಯಿಂದ ಸಂಗೀತ ಸಾಮ್ರಾಟ್ ಪ್ರಶಸ್ತಿಯನ್ನು ಪಡೆದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು