ಇತ್ತೀಚಿನ ಸುದ್ದಿ
ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿರುಗೇಟು
26/01/2026, 20:21
ಉಡುಪಿ(reporterkarnataka.com):ಶಾಸಕ ಸುನೀಲ್ ಕುಮಾರ್ ಅವರು ಕಾರ್ಕಳದ ಥೀಮ್ ಪಾರ್ಕ್ ನಲ್ಲಿ ಪರಶುರಾಮನ ಮೂರ್ತಿಯನ್ನು ಫೈಬರ್ ನಲ್ಲಿ ಮಾಡಿಸಿ ಕಂಚಿನ ಮೂರ್ತಿ ಎಂದು ನಂಬಿಸಿದ್ದರು. ಜನರ ದಿಕ್ಕು ತಪ್ಪಿಸಿ ರಾಜಕೀಯ ಮಾಡುತ್ತಿದ್ದಾರೆ ಎಂದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.
ಕಾರ್ಕಳದ ಪರಶುರಾಮ ಥೀಂ ಪಾರ್ಕ್ ಬಗ್ಗೆ ರಾಜ್ಯ ಸರ್ಕಾರ ನಿರ್ಲಕ್ಷ್ಯ ವಹಿಸಿದೆ ಎಂಬ ಮಾಜಿ ಸಚಿವ ಸುನಿಲ್ ಕುಮಾರ್ ಆರೋಪಕ್ಕೆ ಸಚಿವರು ಮಾಧ್ಯಮ ಜತೆ ಪ್ರತಿಕ್ರಿಯಿಸಿದರು. ಪರಶುರಾಮನನ್ನು ಕರಾವಳಿಯಲ್ಲಿ ಆರಾಧಿಸಲಾಗುತ್ತದೆ. ನಮಗೂ ಕೂಡ ಈ ವಿಚಾರದಲ್ಲಿ ರಾಜಕಾರಣ ಮಾಡುವುದು ಇಷ್ಟ ಇಲ್ಲ. ಸುನೀಲ್ ಕುಮಾರ್ ಪರಶುರಾಮನ ಮೂರ್ತಿಯನ್ನು ಫೈಬರ್ ನಲ್ಲಿ ಮಾಡಿಸಿದ್ದರು. ಫೈಬರ್ ನಲ್ಲಿ ಮಾಡಿಸಿ ಕಂಚಿನ ಮೂರ್ತಿ ಎಂದು ನಂಬಿಸಿದ್ದರು. ಜನರ ದಿಕ್ಕು ತಪ್ಪಿಸಿ ರಾಜಕೀಯ ಮಾಡುತ್ತಿದ್ದಾರೆ. ಜನರನ್ನು ನಂಬಿಸಿ ಮೋಸ ಮಾಡಿದ್ದು, ರಾಜಕೀಯ ಮಾಡಿದ್ದು ಸುನೀಲ್ ಕುಮಾರ್, ಕಾಂಗ್ರೆಸ್ ನವರಿಗೆ ದೇವರ ವಿಚಾರದಲ್ಲಿ ರಾಜಕೀಯ ಮಾಡುವ ದರ್ದು ಇಲ್ಲ. ಆದಷ್ಟು ಬೇಗ ಪರಶುರಾಮ ಮೂರ್ತಿಯ ಕಾಮಗಾರಿಯನ್ನು ಪೂರ್ಣಗೊಳಿಸಿ ಲೋಕಾರ್ಪಣೆ ಮಾಡ್ತೇವೆ ಎಂದರು.












