5:48 AM Sunday15 - March 2026
ಬ್ರೇಕಿಂಗ್ ನ್ಯೂಸ್
ಕಲಬುರಗಿ; ಟ್ಯಾಂಕರ್ ಮೂಲಕ ನೀರು ಪೂರೈಕೆಗೆ ಕ್ರಮ: ವಿಧಾನಸಭೆಯಲ್ಲಿ ಸಚಿವ ಬೈರತಿ ಸುರೇಶ್… ವಿವಿಧ ಬೇಡಿಕೆ ಆಗ್ರಹಿಸಿ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಫ್ರೀಡಂ… ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ

ಇತ್ತೀಚಿನ ಸುದ್ದಿ

ಮೊರಬ ಶ್ರೀವೀರಭದ್ರೇಶ್ವರ ಸ್ವಾಮಿ ದೇಗುಲದಲ್ಲಿ ಹೆಜ್ಜೇನು ಗೂಡು: ಶುಭ ಅಶುಭದ ಲೆಕ್ಕಾಚಾರ; ಹೂ ಫಲ ಕೇಳಿದ ಗ್ರಾಮದ ದೈವಸ್ಥರು!!

08/09/2021, 09:54

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com

ಜಿಲ್ಲೆಯ ಕೂಡ್ಲಿಗಿ ತಾಲೂಕು ಮೊರಬ ಗ್ರಾಮದಲ್ಲಿ, ಶ್ರೀವೀರಭದ್ರೇಶ್ವರ ದೇವಸ್ಥಾನದ ಟರಾಸಿನ್ನಲ್ಲಿ ಹೆಜ್ಜೇನು ಹುಳುಗಳು ಗೂಡು ಕಟ್ಟಿವೆ. ಬೃಹದಾಕಾರದಲ್ಲಿ ನಿರ್ಮಿಸಲಾಗಿರುವ ಹೆಜ್ಜೇನು ಗೂಡು ದೇವರ ದರ್ಶನಕ್ಕೆ ಬರುವ ಭಕ್ತರನ್ನ ಸ್ವಾಗತಿಸುತ್ತಿವೆ. ಅಸಂಖ್ಯಾತ ಹೆಜ್ಜೇನು ಹುಳುಗಳು ಬೃಹತ್ ಗೂಡು(ಹುಟ್ಟು)ಕಟ್ಟಿದ್ದು ಶುಭವೋ ಅಶುಭವೋ ಭಕ್ತರಿಗೆ ತೊಂದರೆ ಕೊಡುತ್ತವೆಯೋ..!?ಎಂಬ ಆತಂಕ ಗ್ರಾಮದ ದೈವಸ್ಥರಲ್ಲಿ ಮನೆ ಮಾಡಿತ್ತು.ಅದಕ್ಕಾಗಿ ಪ್ರಾರಂಭದಲ್ಲಿಯೇ ಈ ಬಗ್ಗೆ ಗ್ರಾಮದ ದೈವಸ್ಥರು, ಶ್ರೀ ವೀರಭದ್ರ ದೇವರಲ್ಲಿ ಶುಭ ಅಶುಭ ಕುರಿತು ಮತ್ತು ಜೇನು ಹುಟ್ಟು ತೆರವು ಗೊಳಿಸಲು ಅನುಮತಿ ಕೋರಿ ಹೂ ಫಲ ಕೇಳಿದ್ದಾರೆ. ಶ್ರೀವೀರಭದ್ರೇಶ್ವರ ಸ್ವಾಮಿ ಎಡಭಾಗದ ಹೂ ಕೊಡೋ ಮೂಲಕ, ಭಕ್ತರಿಗೆ ಅಭಯ ನೀಡಿದ್ದು ಹಾಗೂ ಜೇನು ಹುಳುಗಳಿಗೂ ಆಶ್ರಯ ಹಸ್ತ ನೀಡಿದ್ದಾರೆ.

ಈ ಹೆಜ್ಜೇನು ಕಳೆದ ಆರು ತಿಂಗಳಿಂದ ದೇವಸ್ಥಾನದ ಮಧ್ಯ ಭಾಗದಲ್ಲಿ ನಿರ್ಮಾಣವಾಗಿದೆ.

ದೇವಸ್ಥಾನದ ಪ್ರಾಂಗಣದಲ್ಲಿ ಸದಾ ಬೃಹತ್ ಗಾತ್ರದ ಹೆಜ್ಜೇನು ಹುಳುಗಳು ಹಾರಾಡುತ್ತಿರುತ್ತವೆ. ದೇವರ ದರ್ಶನಕ್ಕೆ ಬರುವ ಭಕ್ತರನ್ನ ನಯವಾಗಿ ಸ್ಪರ್ಶಿಸುವ ನಿರುಪದ್ರವಿಗಳಾಗಿದ್ದು, ಹೆಜ್ಜೇನು ಹುಳುಗಳು ಭಕ್ತರನ್ನು ಸ್ವಾಗತಿಸಿ ಕೊಳ್ಳುತ್ತಿವೆ ಎಂಬಂತೆ  ಸನ್ನಿವೇಶ ಸೃಷ್ಠಿಯಾಗಿದೆ. ಕಳೆದ ಆರು ತಿಂಗಳಿಂದ ನಿರ್ಮಾಣವಾಗಿರುವ ಹೆಜ್ಜೇನಿನ ಬೃಹತ್ ಗೂಡು ಬಲು ಆಕರ್ಷಕವಾಗಿದ್ದು, ಹುಳುಗಳಿಂದ ಯಾರಿಗೂ ಯಾವೂದೇ ಕಾರಣಕ್ಕೂ ತೊಂದರೆ ಆಗಿಲ್ಲ. ಹೆಜ್ಜೆನು ಗೂಡು ನಿರ್ಮಾಣದಿಂದ ಶ್ರೀವೀರಭದ್ರೇಶ್ವರ ಭಕ್ತರ ಪಾಲಿಗೂ ಶುಭ ಶಕುನವಾಗಿ ಪರಿಣಮಿಸಿದೆ ಯಂತೆ, ದೇವಸ್ಥಾನದಲ್ಲಿ ಹೆಜ್ಜೇನು ವಾಸ ಮಾಡಿರುವುದರಿಂದಾಗಿ ಸಕಲರಿಗೂ ಹಿತವಾಗಲಿದೆ ಎಂದು ಆಸ್ತಿಕರು ಆಶಾಮನೋಭಾವ ಹೊಂದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು